Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಂಸದ, ದಿ. ಸಿದ್ನಾಳ್ ಕುಟುಂಬ ಸದಸ್ಯರ ವಿರುದ್ಧ ಎಫ್‌ಐಆರ್

ಬೆಳಗಾವಿ: ಬೆಳಗಾವಿಯ ಪ್ರಭಾವಿ ರಾಜಕಾರಣಿ, ನಾಲ್ಕು ಬಾರಿ ಸಂಸದರಾಗಿದ್ದ ದಿ. ಎಸ್ ಬಿ ಸಿದ್ನಾಳ್ ಕುಟುಂಬ ಸದಸ್ಯರ ವಿರುದ್ಧ ಬೆಳಗಾವಿ ಪೊಲೀಸ್ ಅಧಿಕಾರಿಗಳು FIR ದಾಖಲಿಸಿದ್ದಾರೆ.

ವಾಮಾಚಾರ ಆರೋಪದಡಿ ಎಫ್ಐಆರ್ ದಾಖಲಾಗಿದ್ದು, ಸಿದ್ನಾಳ್ ಅವರ ಸೊಸೆ, ವಿಜಯ ಸಂಕೇಶ್ವರ್ ಅವರ ಪುತ್ರಿ ದೀಪಾ ಸಿದ್ನಾಳ್ ದೂರಿನ ಆಧಾರದಲ್ಲಿ ಈ ಪ್ರಕರಣ ದಾಖಲಾಗಿದೆ.ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೀಪಾ ಶಶಿಕಾಂತ್ ಸಿದ್ನಾಳ್, ತಮ್ಮ ಪತಿಯ ಸಹೋದರ ಶಿವಕಾಂತ್ ಸಿದ್ನಾಳ್ ಹಾಗೂ ಅವರ ಪತ್ನಿ ವಾಣಿ ಸಿದ್ನಾಳ್ ಮತ್ತು ಅವರ ಪುತ್ರ ದಿಗ್ವಿಜಯ ಸಿದ್ನಾಳ್ ವಿರುದ್ಧ ವಾಮಾಚಾರದ ಆರೋಪ ಹೊರಿಸಿದ್ದು, ಇದೇ ಕಾರಣದಿಂದಾಗಿ ಕೆಲವು ತಿಂಗಳ ಹಿಂದೆ ತಮ್ಮ ಪತಿ ಮೃತಪಟ್ಟಿದ್ದಾರೆ ಎಂದು ದೂರಿದ್ದಾರೆ. ಇದಷ್ಟೇ ಅಲ್ಲದೇ ತಮ್ಮ ಆಸ್ತಿಯನ್ನು ಕಸಿದುಕೊಳ್ಳುವುದಕ್ಕಾಗಿಯೂ ಈ ಮೂವರೂ ವಾಮಾಚಾರವೆಸಗಿದ್ದಾರೆ ಎಂದು ದೀಪಾ ಸಿದ್ನಾಳ್ ಹೇಳಿದ್ದಾರೆ.




ನೆಗಿನಹಾಳ್ ನಲ್ಲಿರುವ ಶಶಿಕಾಂತ್ ಸಿದ್ನಾಳ್ ಅವರು ಸ್ಥಾಪಿಸಿದ್ದ ವಿಜಯಕಾಂತ್ ಡೈರಿಯನ್ನು ಲಪಟಾಯಿಸುವ ಸಂಚಿನಿಂದ ಈ ವಾಮಾಚಾರ ನಡೆಸಲಾಗಿದೆ ಎಂದು ದೀಪಾ ಆರೋಪಿಸಿದ್ದಾರೆ. ದೀಪಾ ಸಿದ್ನಾಳ್ ಡೈರಿಯ ನಿರ್ದೇಶಕರಲ್ಲಿ ಒಬ್ಬರಾಗಿದ್ದು ಕೆಲ ತಿಂಗಳ ಹಿಂದೆ ಅನಾರೋಗ್ಯದಿಂದ ಶಶಿಕಾಂತ್ ಸಿದ್ನಾಳ್ ಮೃತಪಟ್ಟಿದ್ದರು.

ಕ್ಯಾಂಪ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಅಲ್ತಾಫ್ ಮುಲ್ಲಾ ಅವರ ಪ್ರಕಾರ, ಹಲವಾರು ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ, ಮುಖ್ಯವಾಗಿ ಸಿದ್ನಾಳ್ ಕುಟುಂಬದ ಮೂರು ಸದಸ್ಯರ ವಿರುದ್ಧ ಐಪಿಸಿ ಸೆಕ್ಷನ್ 120-ಬಿ, 506, 37 ಮತ್ತು ಅಮಾನವೀಯ ದುಷ್ಟ ಪದ್ಧತಿಗಳ ತಡೆಗಟ್ಟುವಿಕೆ ಮತ್ತು ವಾಮಾಚಾರ ನಿರ್ಮೂಲನೆ ಸೆಕ್ಷನ್ 3 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ.








ಬೆಳಗಾವಿ ಪೊಲೀಸ್ ಕಮಿಷನರ್ ಐಡಾ ಮಾರ್ಟಿನ್ ಅವರು ಪ್ರಕರಣದ ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ತನಿಖೆಯನ್ನು ಪ್ರಾರಂಭಿಸುತ್ತಾರೆ ಎಂದು ಹೇಳಿದ್ದಾರೆ. ಎರಡು ದಿನಗಳ ಹಿಂದೆ ಪ್ರಕರಣ ದಾಖಲಾಗಿದ್ದರೂ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಶಶ್ಕತ್ ಸಿದ್ನಾಳ್, ಮಾಜಿ ಸಂಸದ ಎಸ್ ಬಿ ಸಿದ್ನಾಳ್ ರವರ ಎರಡನೇ ಪುತ್ರರಾಗಿದ್ದು 2002 ರಲ್ಲಿ ದೀಪಾ ಅವರನ್ನು ವಿವಾಹವಾಗಿದ್ದರು, 2006 ರಲ್ಲಿ ವಿಜಯಕಾಂತ್ ಡೈರಿಯನ್ನು ಸ್ಥಾಪಿಸಿದರು. ಈ ಉದ್ಯಮವು ಹೆಚ್ಚು ಯಶಸ್ವಿಯಾಗಿತ್ತು ಮತ್ತು ಈ ಪ್ರದೇಶದ ಹಾಲು ಉತ್ಪಾದಕರಿಗೆ ಉತ್ತಮ ಅವಕಾಶವನ್ನು ಒದಗಿಸುವಲ್ಲಿ ಯಶಸ್ವಿಯಾಗಿದೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ