ನಂತರ ಮಾತನಾಡಿದ ಅವರು, ಪಂಚಮಸಾಲಿ ಸಮಾಜದವರು ಹೇಡಿಗಳಲ್ಲ. ಕೆಎಸ್ ಶಿವರಾಮು ತಕ್ಷಣವೇ ಸ್ವಾಮೀಜಿಗಳ ಬಗ್ಗೆ ನೀಡಿದ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ಗೋಪನಾಳ್ ಅಶೋಕ ಆಗ್ರಹಿಸಿದ್ದಾರೆ.
ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ತೀವ್ರಗೊಳಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕೆಎಸ್ ಶಿವರಾಮು, ಆ ವಿಚಾರವಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ವಾಮೀಜಿ ಬಿಜೆಪಿ ಏಜೆಂಟ್ರಂತೆ ವರ್ತಿಸುತ್ತಿದ್ದಾರೆ. ಕಾವಿ ಬಿಚ್ಚಿ ರಾಜಕೀಯಕ್ಕೆ ಬರಲಿ ಎಂದಿದ್ದರು.
ಮೈಸೂರಿನಲ್ಲಿ ಮಾತನಾಡಿದ್ದ ಶಿವರಾಮು, ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದರೆ ಕೈ ಕತ್ತರಿಸುತ್ತೇವೆ. ಸ್ವಾಮೀಜಿಗಳು ರಾಜಕೀಯ ಪುಢಾರಿ ರೀತಿ ನಡೆದುಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ಅವರು ಸನ್ಯಾಸಿಯಾಗಿ ಒಂದು ಜಾತಿ ಪರವಾಗಿ ಕೆಲಸ ಮಾಡುವುದು ಸರಿಯಲ್ಲ. ಸ್ವಾಮೀಜಿಯಾಗಲು ನಾಲಾಯಕ್. ಕಾವಿ ಬಟ್ಟೆ ಬಿಚ್ವಿಟ್ಟು ಬರುವುದು ಉತ್ತಮ ಎಂದು ಕೆಎಸ್ ಶಿವರಾಮು ಹೇಳಿದ್ದರು.