LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಟ್ರೈನಿ ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಎಫ್​ಐಆರ್​

ಮಹಾರಾಷ್ಟ್ರದ ವಿವಾದಿತ ಟ್ರೈನಿ ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ ಫೋರ್ಜರಿ ಪ್ರಕರಣದಡಿಯಲ್ಲಿ ಎಫ್​ಐಆರ್​ ದಾಖಲಿಸಿದೆ.

ಐಎಎಸ್ ಅಕಾಡೆಮಿಗೆ ಹಾಜರಾಗಲು ಜುಲೈ 23ರವರೆಗೆ ಗಡುವು ನೀಡಲಾಗಿತ್ತು, ಇಲ್ಲಿಯವರೆಗೂ ಪೂಜಾ ಆ ಕಡೆ ತಲೆ ಹಾಕಿಲ್ಲ. ಪೂಜಾ ಅವರು ದುಷ್ಕೃತ್ಯದ ಮೂಲಕ ತಮಗೆ ಅನುಮತಿಸಿದ್ದ ಮಿತಿಯನ್ನು ಮೀರಿ ಹಲವು ಪ್ರಯತ್ನಗಳನ್ನು ಪಡೆದಿರುವುದು ತನಿಖೆಯಿಂದ ಗೊತ್ತಾಗಿದೆ. ಹೀಗಾಗಿ ಇವರ ನೇಮಕಾತಿಯನ್ನೇ ರದ್ದುಗೊಳಿಸುವಂತ ಗಂಭೀರ ಕ್ರಮ ಕೈಗೊಳ್ಳಲು ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದಿದೆ.

ಅಂತೆಯೇ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ತಮಗೆ ಅನುಮತಿಸಿದ್ದ ಮಿತಿಗೂ ಮೀರಿದ ಪ್ರಯತ್ನ ಪಡೆಯಲು ಪೂಜಾ ಅವರು ನಕಲಿ ದಾಖಲೆಗಳನ್ನು ಸಲ್ಲಿಸಿರುವುದು ತನಿಖೆಯಿಂದ ತಿಳಿದುಬಂದಿದೆ.

ಇದರಲ್ಲಿ ಅವರ ಹೆಸರು ಬದಲಾವಣೆ, ತಂದೆ ಹಾಗೂ ತಾಯಿಯ ಹೆಸರು ಬದಲಿಸಿರುವುದು, ಭಾವಚಿತ್ರ ಬದಲಾವಣೆ ಹಾಗೂ ಸಹಿ ಮತ್ತು ಇ–ಮೇಲ್ ವಿಳಾಸ, ಮೊಬೈಲ್‌ ಮತ್ತು ಮನೆಯ ವಿಳಾಸವನ್ನು ಬದಲಿಸುವ ಮೂಲಕ ತಮ್ಮ ಗುರುತು ಮರೆಮಾಚಿ ಆಯೋಗವನ್ನು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪೂಜಾ ಅವರ ತರಬೇತಿಯನ್ನು ತಡೆಹಿಡಿಯಲಾಗಿದೆ. ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್​ಗೆ ಅವರು ನಿನ್ನೆಯ ಒಳಗೆ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು.

ಜುಲೈ 16 ರಂದು ಮಹಾರಾಷ್ಟ್ರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನಿತಿನ್ ಗಾದ್ರೆ ಅವರು ಪೂಜಾ ಖೇಡ್ಕರ್ ಅವರಿಗೆ ಪತ್ರ ಬರೆದು, ಸರ್ಕಾರದೊಂದಿಗೆ ಅವರ ತರಬೇತಿ ಅವಧಿಯನ್ನು ಕೊನೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಪೂಜಾ ಖೇಡ್ಕರ್ ಅವರು ಅಕಾಡೆಮಿಗೆ ವರದಿ ಮಾಡಿಲ್ಲ ಅಥವಾ ಪತ್ರಕ್ಕೆ ಉತ್ತರಿಸಿಲ್ಲ ಎಂದು ಮೂಲಗಳು ತಿಳಿಸಿವೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್