Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟ್ರೈನಿ ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಎಫ್​ಐಆರ್​

ಮಹಾರಾಷ್ಟ್ರದ ವಿವಾದಿತ ಟ್ರೈನಿ ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ ಫೋರ್ಜರಿ ಪ್ರಕರಣದಡಿಯಲ್ಲಿ ಎಫ್​ಐಆರ್​ ದಾಖಲಿಸಿದೆ.

ಐಎಎಸ್ ಅಕಾಡೆಮಿಗೆ ಹಾಜರಾಗಲು ಜುಲೈ 23ರವರೆಗೆ ಗಡುವು ನೀಡಲಾಗಿತ್ತು, ಇಲ್ಲಿಯವರೆಗೂ ಪೂಜಾ ಆ ಕಡೆ ತಲೆ ಹಾಕಿಲ್ಲ. ಪೂಜಾ ಅವರು ದುಷ್ಕೃತ್ಯದ ಮೂಲಕ ತಮಗೆ ಅನುಮತಿಸಿದ್ದ ಮಿತಿಯನ್ನು ಮೀರಿ ಹಲವು ಪ್ರಯತ್ನಗಳನ್ನು ಪಡೆದಿರುವುದು ತನಿಖೆಯಿಂದ ಗೊತ್ತಾಗಿದೆ. ಹೀಗಾಗಿ ಇವರ ನೇಮಕಾತಿಯನ್ನೇ ರದ್ದುಗೊಳಿಸುವಂತ ಗಂಭೀರ ಕ್ರಮ ಕೈಗೊಳ್ಳಲು ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದಿದೆ.

ಅಂತೆಯೇ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ತಮಗೆ ಅನುಮತಿಸಿದ್ದ ಮಿತಿಗೂ ಮೀರಿದ ಪ್ರಯತ್ನ ಪಡೆಯಲು ಪೂಜಾ ಅವರು ನಕಲಿ ದಾಖಲೆಗಳನ್ನು ಸಲ್ಲಿಸಿರುವುದು ತನಿಖೆಯಿಂದ ತಿಳಿದುಬಂದಿದೆ.

ಇದರಲ್ಲಿ ಅವರ ಹೆಸರು ಬದಲಾವಣೆ, ತಂದೆ ಹಾಗೂ ತಾಯಿಯ ಹೆಸರು ಬದಲಿಸಿರುವುದು, ಭಾವಚಿತ್ರ ಬದಲಾವಣೆ ಹಾಗೂ ಸಹಿ ಮತ್ತು ಇ–ಮೇಲ್ ವಿಳಾಸ, ಮೊಬೈಲ್‌ ಮತ್ತು ಮನೆಯ ವಿಳಾಸವನ್ನು ಬದಲಿಸುವ ಮೂಲಕ ತಮ್ಮ ಗುರುತು ಮರೆಮಾಚಿ ಆಯೋಗವನ್ನು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪೂಜಾ ಅವರ ತರಬೇತಿಯನ್ನು ತಡೆಹಿಡಿಯಲಾಗಿದೆ. ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್​ಗೆ ಅವರು ನಿನ್ನೆಯ ಒಳಗೆ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು.

ಜುಲೈ 16 ರಂದು ಮಹಾರಾಷ್ಟ್ರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನಿತಿನ್ ಗಾದ್ರೆ ಅವರು ಪೂಜಾ ಖೇಡ್ಕರ್ ಅವರಿಗೆ ಪತ್ರ ಬರೆದು, ಸರ್ಕಾರದೊಂದಿಗೆ ಅವರ ತರಬೇತಿ ಅವಧಿಯನ್ನು ಕೊನೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಪೂಜಾ ಖೇಡ್ಕರ್ ಅವರು ಅಕಾಡೆಮಿಗೆ ವರದಿ ಮಾಡಿಲ್ಲ ಅಥವಾ ಪತ್ರಕ್ಕೆ ಉತ್ತರಿಸಿಲ್ಲ ಎಂದು ಮೂಲಗಳು ತಿಳಿಸಿವೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ