ನಿನ್ನೆ ಮೈಸೂರು ಬೆಂಗಳೂರು ಹೈವೇ ಸಿಸಿಟಿವಿಗಳನ್ನು ಸಂಚಾರಿ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ ಒಂದೇ ದಿನ 150ಕ್ಕೂ ಹೆಚ್ಚು ಅತಿ ವೇಗದ ಚಾಲನೆ ಕೇಸ್ಗಳು ಪತ್ತೆಯಾಗಿವೆ. ಇದರಿಂದ ಓವರ್ಸ್ಪೀಡ್ಗೆ ಬ್ರೇಕ್ ಹಾಕಲು ಎಡಿಜಿಪಿ ಅಲೋಕ್ ಕುಮಾರ್ ಹೊಸ ಅಸ್ತ್ರ ಕೈಗೆತ್ತಿಕೊಂಡಿದ್ದು, ಆಗಸ್ಟ್ 1ರಿಂದ ಅದನ್ನು ಚಲಾಯಿಸಲಿದ್ದಾರೆ.
ಮಿತಿ ಮೀರಿದ ವೇಗದಿಂದ ಚಾಲನೆ ಮಾಡುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ಸ್ಪೀಡ್ನಲ್ಲಿ 130 ಕಿಮೀ ದಾಟಿದರೆ ಎಫ್ಐಆರ್ ದಾಖಲಾಗಲಿದೆ. ನಂತರ ಚಾಲಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ವಾಹನ ಚಾಲನೆ ಪರವಾನಗಿಯೂ ರದ್ದಾಗಬಹುದು. ಹೀಗೆಂದು ಎಕ್ಸ್ ಖಾತೆ ಮೂಲಕ ಅಲೋಕ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.
ವಾಹನ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ ಜುಲೈ 1ರಿಂದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ (Bangalore–Mysore Expressway) ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ (ITMS) ಅಳವಡಿಸಲಾಗಿದೆ.