Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈಲಿನಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಎಸಿ ಬೋಗಿ

ಕೋಟಾ: 

ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಬೋಗಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ತಿರುವನಂತಪುರಂ - ದೆಹಲಿಯ ಹಜರತ್ ನಿಜಾಮುದ್ದೀನ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಇಂದು ನಸುಕಿನ ಜಾವ 5 ಗಂಟೆಯ ಸುಮಾರಿಗೆ ಅವಘಡ ಸಂಭವಿಸಿದೆ.

Advertisement

ಭಾನುವಾರ ಬೆಳಗ್ಗೆ ರಾಜಸ್ಥಾನದ ಕೋಟಾದ ವಿಕ್ರಮ್‌ಗಢ ಅಲೋಟ್ ರೈಲು ನಿಲ್ದಾಣದ ಬಳಿ ರೈಲಿನ ಎಸಿ ಬೋಗಿಯಲ್ಲಿ ಬೆಂಕಿ ಕಂಡುಬಂದಿದೆ. ಬೆಂಕಿ ಕಾಣಿಸಿಕೊಂಡ ಬಿ1 ಎಸಿ ಬೋಗಿಯಲ್ಲಿ 68 ಜನ ಪ್ರಯಾಣಿಕರಿದ್ದರು. ತಕ್ಷಣವೇ ಎಲ್ಲರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ದೃಢಪಡಿಸಿದ್ದಾರೆ.

ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡ ಬಗ್ಗೆ ಮೊದಲು ಗಾರ್ಡ್ ಗಮನಿಸಿ ತಕ್ಷಣವೇ ಎಚ್ಚರಿಸಿದ್ದ. ಬಳಿಕ ತುರ್ತು ಬ್ರೇಕ್​ಗಳನ್ನು ಬಳಸಿ ರೈಲನ್ನು ನಿಲ್ಲಿಸಲಾಯಿತು. ತಕ್ಷಣವೇ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ರೈಲಿನಲ್ಲಿರುವ ಸಿಬ್ಬಂದಿ ಮತ್ತು ಇತರ ಅಧಿಕಾರಿಗಳು ಬೋಗಿಯಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲು ಪ್ರಾರಂಭಿಸಿದರು. ಸುಮಾರು 15 ನಿಮಿಷಗಳಲ್ಲಿ ಬೋಗಿಯನ್ನ ತೆರವುಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತರಲಾಗಿದೆ. ಅದೃಷ್ಟವಶಾತ್, ಯಾವುದೇ ರೀತಿಯ ಸಾವುನೋವುಗಳು ಸಂಭವಿಸಿಲ್ಲ ಎಂದು ಕೋಟಾ ರೈಲ್ವೆ ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಸೌರಭ್ ಜೈನ್ ಮಾಹಿತಿ ನೀಡಿದ್ದಾರೆ.

ಘಟನೆ ವರದಿಯಾದ ಬೆನ್ನಲ್ಲೇ ಕೋಟಾ ರೈಲ್ವೆ ವಿಭಾಗದ ಪರಿಹಾರ ಮತ್ತು ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಿದ್ದೆವು. ಹಾನಿಗೊಳಗಾದ ಬೋಗಿಯನ್ನು ತಕ್ಷಣವೇ ರೇಕ್‌ನಿಂದ ಬೇರ್ಪಡಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಕಿ ಕಾಣಿಸಿಕೊಂಡ ಹತ್ತಿರದ ಬೋಗಿಗಳನ್ನು ಸಹ ತೆರವು ಮಾಡಿದ್ದೇವೆ. ಹೆಚ್ಚುವರಿ ಸುರಕ್ಷತೆ ಹಿನ್ನೆಲೆ ಓವರ್ಹೆಡ್ ವಿದ್ಯುತ್ ಸರಬರಾಜು (OHE) ಅನ್ನು ಕೂಡ ಆಫ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಬಿ1 ಬೋಗಿಯಲ್ಲಿನ ಪ್ರಯಾಣಿಕರಿಗೆ ಕೋಟಾವರೆಗೆ ಇತರ ಬೋಗಿಗಳಲ್ಲಿ ಸ್ಥಳಾವಕಾಶ ಮಾಡಿ ಕೊಡಲಾಗಿಯಿತು. ಬಳಿಕ ಕೋಟಾದಿಂದ ಹೆಚ್ಚುವರಿ ಬೋಗಿಯನ್ನು ಅಳವಡಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟಿದ್ದೇವೆ. ಎಕ್ಸ್​ಪ್ರೆಸ್ ರೈಲು ದೆಹಲಿಯತ್ತ ಪ್ರಯಾಣ ಮುಂದುವರಿಸಿದೆ. ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ತನಿಖೆ ಕೈಗೊಂಡಿದ್ದೇವೆ ಎಂದು ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ.

ರಾಜಧಾನಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 12431) ಶುಕ್ರವಾರ ಕೇರಳದ ತಿರುವನಂತಪುರದಿಂದ ಹೊರಟು ದೆಹಲಿಯ ಹಜರತ್ ನಿಜಾಮುದ್ದೀನ್ ರೈಲ್ವೆ ನಿಲ್ದಾಣಕ್ಕೆ ಇಂದು ಮಧ್ಯಾಹ್ನ ತಲುಪಲಿದೆ. ಮಾರ್ಗ ಮಧ್ಯೆ ಅಗ್ನಿ ಅವಘಡ ಸಂಭವಿಸಿದೆ.

ಇನ್ನು ಎರಡು ದಿನಗಳ ಹಿಂದೆಯಷ್ಟೇ ಮೇ 15 ರಂದು ನಾಂಪಲ್ಲಿ ರೈಲ್ವೆ ನಿಲ್ದಾಣದಲ್ಲಿ ಹೈದರಾಬಾದ್-ಜೈಪುರ ವಿಶೇಷ ಎಕ್ಸ್‌ಪ್ರೆಸ್‌ನ ಎರಡು ಎಸಿ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿತ್ತು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆ 6 ಜನ ದ್ವಿಚಕ್ರ ವಾಹನ ಕಳ್ಳರ ಬಂಧನಐನಾಪುರದಲ್ಲಿ ೧೧೦ ಕೆವಿ ಸ್ಟೇಶನ್ ನಿರ್ಮಾಣಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿಕೆಕ್ರೀಡಾ ಚಟುವಟಿಕೆಗಳಿಂದ ಜಿಲ್ಲೆಗೆ ಹೊಸ ಔಟ್‌ಲುಕ್ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅಭಿಮತಸಿಐಡಿ ತನಿಖೆಯಿಂದ,  ಶಿವಂ ಅಸೋಸಿಯೇಟ್ಸ್ ಹಗರಣ  ವಂಚನೆ ಸ್ಪಷ್ಟ ಮಾಹಿತಿ ; ಸಚಿವ ಸತೀಶ್‌ ಜಾರಕಿಹೊಳಿಕಾರ್ಯಕರ್ತರಲ್ಲಿ ವ್ಯಕ್ತಿತ್ವ, ಶಿಸ್ತು ರೂಪಿಸುವಲ್ಲಿ ಪ್ರಶಿಕ್ಷಣವರ್ಗ ಸಹಕಾರಿ :ಜಗದೀಶ ಶೆಟ್ಟರಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯ ಪುಸ್ತಕಗಳ ವಿತರಣೆಗೆ ಸಕಲ ಸಿದ್ಧತೆ - ಬಿಇಓ ಬಸಣ್ಣವರನೀಟ್‌ ರದ್ದತಿಗೆ ನೊಂದು ಬೆಂಗಳೂರಿಗ ಸೇರಿ 4 ವಿದ್ಯಾರ್ಥಿಗಳು ಸಾವಿಗೆ ಶರಣು!ಕೊಳವೆಬಾವಿ ದುರಂತ: ಮೊಮ್ಮಗನ ರಕ್ಷಣೆಗೆ ಹೋದ ಅಜ್ಜ ಸಾವುಭಾರಿ ಗಾತ್ರದ ಕಾಡುಕೋಣ ಸೆರೆಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ