[video width="848" height="480" mp4="https://hasirukranti.in/wp-content/uploads/2025/05/Nelamangala.mp4"][/video]
ಶೆಲ್ ಕಂಪನಿಗೆ ಸೇರಿದ ಆಯಿಲ್ ಉತ್ಪನ್ನಗಳನ್ನು ಗೋದಾಮಿನಲ್ಲಿ ಇರಿಸಲಾಗಿತ್ತು. ನೆಲಮಂಗಲ, ಪೀಣ್ಯ, ಹೆಬ್ಬಾಳ, ರಾಜಾಜಿನಗರ, ಥಣಿಸಂದ್ರ, ಸುಂಕದಕಟ್ಟೆ ಮತ್ತು ಯಶವಂತಪುರ ಅಗ್ನಿಶಾಮಕ ಠಾಣಾ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸುಮಾರು 60 ರಿಂದ 70 ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ನಸುಕಿನ ಮೂರು ಗಂಟೆ ಸಮಯದಲ್ಲಿ ಬೆಂಕಿ ಅವಘಡ ಸುದ್ದಿ ತಿಳಿದ ತಕ್ಷಣದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಆಯಿಲ್ ಸಂಬಂಧಿತ ಗೋದಾಮು ಆಗಿರುವ ಕಾರಣಕ್ಕೆ ಬೆಂಕಿ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯರಾತ್ರಿ ಸಮಯದಲ್ಲಿ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದೆ. ಸ್ಥಳದಲ್ಲಿ ಯಾರೂ ಇಲ್ಲದ ಕಾರಣಕ್ಕೆ ಬೆಂಕಿ ಇಡೀ ಗೋದಾಮಿಗೆ ವ್ಯಾಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬೆಂಕಿ ಅವಘಡದ ದೃಶ್ಯಗಳು 10 ಕಿ.ಮೀ ದೂರದಿಂದಲೂ ಕಾಣಿಸುತ್ತಿದ್ದು, ದಟ್ಟವಾದ ಹೊಗೆ ಆಕಾಶವನ್ನ ಅವರಿಸಿದೆ, ಇದು ಸ್ಥಳೀಯರ ಆತಂಕಕ್ಕೂ ಕಾರಣವಾಗಿದೆ.