Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೋಶಿಯಲ್‌ ಮೀಡಿಯಾ ಮೂಲಕ ಪಾಕ್‌ ಉಗ್ರರೊಂದಿಗೆ ನಂಟು; ದೆಹಲಿಯಲ್ಲಿ ಐವರ ಬಂಧನ

ನವದೆಹಲಿ: ದೆಹಲಿ ಪೊಲೀಸ್​​​​​​ ವಿಶೇಷ ಘಟಕವು​​​ ಸಾಮಾಜಿಕ ಜಾಲತಾಣದ ಮೂಲಕ​ ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಐವರನ್ನು ಬಂಧಿಸಿದೆ. ಆರೋಪಿಗಳಿಂದ ಸುಧಾರಿತ ಕಚ್ಛಾ ಸ್ಫೋಟಕ(ಐಇಡಿ)ಗಳನ್ನು ತಯಾರಿಸಲು ಬಳಸುವ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂಲಗಳ ಪ್ರಕಾರ, ಆರೋಪಿಗಳು ಪಾಕಿಸ್ತಾನದ ಉಗ್ರ ಸಂಘಟನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಸಂಪರ್ಕದಲ್ಲಿದ್ದರು. ಈ ಎಲ್ಲಾ ಖಾತೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.


ತನಿಖಾಧಿಕಾರಿಗಳ ಪ್ರಕಾರ, ಈ ಭಯೋತ್ಪಾದಕ ಸಂಘಟನೆಯ ಗುಂಪಿನ ಪ್ರಮುಖ ಸದಸ್ಯ ಅಶ್ರಫ್​​​ ಡ್ಯಾನಿಷ್ ಎಂಬಾತ ಭಾರತದಿಂದ ಪಾಕ್ ಮೂಲದ ವ್ಯಕ್ತಿಗಳೊಂದಿಗೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್​ಗಳ ಮೂಲಕ ಸಂಪರ್ಕ ಸಾಧಿಸುತ್ತಿದ್ದ. ಈ ಮೂಲಕ ಭಾರತದಲ್ಲಿ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡಲು ಮತ್ತು ಅವರನ್ನು ತಮ್ಮ ಜಾಲಕ್ಕೆ ಸೇರಿಸಿಕೊಳ್ಳಲು ಯತ್ನಿಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಗುಂಪು ದೇಶದಲ್ಲಿ ಕೋಮು ದ್ವೇಷ ಹರಡಲು ಮತ್ತು ಧಾರ್ಮಿಕ ಸಾಮರಸ್ಯ ಕದಡಲು ಹಲವು ಆನ್‌ಲೈನ್ ಗುಂಪುಗಳನ್ನು ನಡೆಸುತ್ತಿತ್ತು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.


ಇನ್ನೂ 4ರಿಂದ 5 ರಾಜ್ಯಗಳಲ್ಲಿ ದಾಳಿ ನಡೆಸಲಾಗುವುದು. ಸುಮಾರು ಎಂಟು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ, ಐವರನ್ನು ಬಂಧಿಸಲಾಗಿದೆ. ಈ ಪೈಕಿ ಇಬ್ಬರನ್ನು ದೆಹಲಿ ಮತ್ತು ಓರ್ವನನ್ನು ಮಧ್ಯಪ್ರದೇಶ, ಹೈದರಾಬಾದ್​ ಹಾಗೂ ರಾಂಚಿಯಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ