LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಸೋಶಿಯಲ್‌ ಮೀಡಿಯಾ ಮೂಲಕ ಪಾಕ್‌ ಉಗ್ರರೊಂದಿಗೆ ನಂಟು; ದೆಹಲಿಯಲ್ಲಿ ಐವರ ಬಂಧನ

ನವದೆಹಲಿ: ದೆಹಲಿ ಪೊಲೀಸ್​​​​​​ ವಿಶೇಷ ಘಟಕವು​​​ ಸಾಮಾಜಿಕ ಜಾಲತಾಣದ ಮೂಲಕ​ ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಐವರನ್ನು ಬಂಧಿಸಿದೆ. ಆರೋಪಿಗಳಿಂದ ಸುಧಾರಿತ ಕಚ್ಛಾ ಸ್ಫೋಟಕ(ಐಇಡಿ)ಗಳನ್ನು ತಯಾರಿಸಲು ಬಳಸುವ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂಲಗಳ ಪ್ರಕಾರ, ಆರೋಪಿಗಳು ಪಾಕಿಸ್ತಾನದ ಉಗ್ರ ಸಂಘಟನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಸಂಪರ್ಕದಲ್ಲಿದ್ದರು. ಈ ಎಲ್ಲಾ ಖಾತೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.


ತನಿಖಾಧಿಕಾರಿಗಳ ಪ್ರಕಾರ, ಈ ಭಯೋತ್ಪಾದಕ ಸಂಘಟನೆಯ ಗುಂಪಿನ ಪ್ರಮುಖ ಸದಸ್ಯ ಅಶ್ರಫ್​​​ ಡ್ಯಾನಿಷ್ ಎಂಬಾತ ಭಾರತದಿಂದ ಪಾಕ್ ಮೂಲದ ವ್ಯಕ್ತಿಗಳೊಂದಿಗೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್​ಗಳ ಮೂಲಕ ಸಂಪರ್ಕ ಸಾಧಿಸುತ್ತಿದ್ದ. ಈ ಮೂಲಕ ಭಾರತದಲ್ಲಿ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡಲು ಮತ್ತು ಅವರನ್ನು ತಮ್ಮ ಜಾಲಕ್ಕೆ ಸೇರಿಸಿಕೊಳ್ಳಲು ಯತ್ನಿಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಗುಂಪು ದೇಶದಲ್ಲಿ ಕೋಮು ದ್ವೇಷ ಹರಡಲು ಮತ್ತು ಧಾರ್ಮಿಕ ಸಾಮರಸ್ಯ ಕದಡಲು ಹಲವು ಆನ್‌ಲೈನ್ ಗುಂಪುಗಳನ್ನು ನಡೆಸುತ್ತಿತ್ತು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.


ಇನ್ನೂ 4ರಿಂದ 5 ರಾಜ್ಯಗಳಲ್ಲಿ ದಾಳಿ ನಡೆಸಲಾಗುವುದು. ಸುಮಾರು ಎಂಟು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ, ಐವರನ್ನು ಬಂಧಿಸಲಾಗಿದೆ. ಈ ಪೈಕಿ ಇಬ್ಬರನ್ನು ದೆಹಲಿ ಮತ್ತು ಓರ್ವನನ್ನು ಮಧ್ಯಪ್ರದೇಶ, ಹೈದರಾಬಾದ್​ ಹಾಗೂ ರಾಂಚಿಯಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ