Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೋಶಿಯಲ್‌ ಮೀಡಿಯಾ ಮೂಲಕ ಪಾಕ್‌ ಉಗ್ರರೊಂದಿಗೆ ನಂಟು; ದೆಹಲಿಯಲ್ಲಿ ಐವರ ಬಂಧನ

ನವದೆಹಲಿ: ದೆಹಲಿ ಪೊಲೀಸ್​​​​​​ ವಿಶೇಷ ಘಟಕವು​​​ ಸಾಮಾಜಿಕ ಜಾಲತಾಣದ ಮೂಲಕ​ ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಐವರನ್ನು ಬಂಧಿಸಿದೆ. ಆರೋಪಿಗಳಿಂದ ಸುಧಾರಿತ ಕಚ್ಛಾ ಸ್ಫೋಟಕ(ಐಇಡಿ)ಗಳನ್ನು ತಯಾರಿಸಲು ಬಳಸುವ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂಲಗಳ ಪ್ರಕಾರ, ಆರೋಪಿಗಳು ಪಾಕಿಸ್ತಾನದ ಉಗ್ರ ಸಂಘಟನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಸಂಪರ್ಕದಲ್ಲಿದ್ದರು. ಈ ಎಲ್ಲಾ ಖಾತೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.


ತನಿಖಾಧಿಕಾರಿಗಳ ಪ್ರಕಾರ, ಈ ಭಯೋತ್ಪಾದಕ ಸಂಘಟನೆಯ ಗುಂಪಿನ ಪ್ರಮುಖ ಸದಸ್ಯ ಅಶ್ರಫ್​​​ ಡ್ಯಾನಿಷ್ ಎಂಬಾತ ಭಾರತದಿಂದ ಪಾಕ್ ಮೂಲದ ವ್ಯಕ್ತಿಗಳೊಂದಿಗೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್​ಗಳ ಮೂಲಕ ಸಂಪರ್ಕ ಸಾಧಿಸುತ್ತಿದ್ದ. ಈ ಮೂಲಕ ಭಾರತದಲ್ಲಿ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡಲು ಮತ್ತು ಅವರನ್ನು ತಮ್ಮ ಜಾಲಕ್ಕೆ ಸೇರಿಸಿಕೊಳ್ಳಲು ಯತ್ನಿಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಗುಂಪು ದೇಶದಲ್ಲಿ ಕೋಮು ದ್ವೇಷ ಹರಡಲು ಮತ್ತು ಧಾರ್ಮಿಕ ಸಾಮರಸ್ಯ ಕದಡಲು ಹಲವು ಆನ್‌ಲೈನ್ ಗುಂಪುಗಳನ್ನು ನಡೆಸುತ್ತಿತ್ತು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.


ಇನ್ನೂ 4ರಿಂದ 5 ರಾಜ್ಯಗಳಲ್ಲಿ ದಾಳಿ ನಡೆಸಲಾಗುವುದು. ಸುಮಾರು ಎಂಟು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ, ಐವರನ್ನು ಬಂಧಿಸಲಾಗಿದೆ. ಈ ಪೈಕಿ ಇಬ್ಬರನ್ನು ದೆಹಲಿ ಮತ್ತು ಓರ್ವನನ್ನು ಮಧ್ಯಪ್ರದೇಶ, ಹೈದರಾಬಾದ್​ ಹಾಗೂ ರಾಂಚಿಯಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ