Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯೋತ್ಸವ ಅಂಗವಾಗಿ ಅನ್ನದಾನ ಕಾರ್ಯಕ್ರಮ 




ಬಳ್ಳಾರಿ, ನ. 03 : ಕನ್ನಡ ನಾಡು ಹಾಗೂ ನುಡಿಯ ಗೌರವಕ್ಕಾಗಿ ಪ್ರತಿಯೊಬ್ಬ ಕನ್ನಡಿಗನು ಸದಾ ಸಜ್ಜನಾಗಿರಬೇಕು ಎಂದು ಜಯ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಶ್ಯಾಮ್ ಸುಂದರ್ ಕರೆ ನೀಡಿದರು.


ನಗರದ ಎಪಿಎಂಸಿ ಆವರಣದಲ್ಲಿ ಜಯ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಆಯೋಜಿಸಲಾದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪ್ರತಿವರ್ಷವೂ ವೇದಿಕೆಯ ಕಾರ್ಯಕರ್ತರು ರಾಜ್ಯೋತ್ಸವವನ್ನು ಭಾವಭರಿತವಾಗಿ ಆಚರಿಸುತ್ತಾರೆ ಎಂಬುದನ್ನು ಮೆಚ್ಚಿದ ಅವರು, “ನಾಡು-ನುಡಿಯ ಹಿತದ ವಿಷಯದಲ್ಲಿ ವೇದಿಕೆಯ ಪ್ರತಿಯೊಬ್ಬ ಸದಸ್ಯನು ಹಗಲು-ರಾತ್ರಿ ಎನ್ನದೆ ಹೋರಾಟಕ್ಕೆ ಸಿದ್ಧನಾಗಿರುತ್ತಾನೆ. ನೆಲ, ಜಲ ಮತ್ತು ಭಾಷೆಯ ವಿಷಯದಲ್ಲಿ ಯಾವುದೇ ರೀತಿಯ ರಾಜಿ ಅಸಾಧ್ಯ. ಅಗತ್ಯವಿದ್ದರೆ ಉಗ್ರ ಹೋರಾಟಕ್ಕೂ ಹಿಂದಿರುಗುವುದಿಲ್ಲ,” ಎಂದರು.


 ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಪಿ. ಹಸೇನ್ ವೇದಿಕೆಯ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುವುದಾಗಿ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಅಲಿವೇಲು ಸುರೇಶ್ ಹೇಳಿದರು.   ಸಾಮಾಜಿಕ ಸಮರದಲ್ಲಿ ಕನ್ನಡಿಗರ ಶಕ್ತಿ ಒಂದಾಗಬೇಕು, ಎಂದು ಅವರು ಅಭಿಪ್ರಾಯಪಟ್ಟರು.


ಕಾರ್ಯಕ್ರಮದಲ್ಲಿ ಶೋಟೋ ಕಾನ್ ಕರಾಟೆ ಅಕಾಡೆಮಿಯ ಅಧ್ಯಕ್ಷ ಕಟ್ಟೆ ಸ್ವಾಮಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಪಿ. ಹಸೇನ್, ಜಿಲ್ಲಾಧ್ಯಕ್ಷ ಸುಧಾಕರ್ ಹೆಗಡೆ, ದೇವರೆಡ್ಡಿ, ಪೊಲ ವಲಿ, ರೂಪ, ಪದ್ಮಾವತಿ, ತಲಮಾಮಿಡಿ ನಾಗರಾಜ್, ಮುಡಿನಾಗರಾಜ್, ಆಟೋ ಮಂಜು, ಬಿ. ಅಸ್ಲಾಂ ಬಾಷಾ, ನಾಗರಾಜ್ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.


ರಾಜ್ಯೋತ್ಸವದ ಉತ್ಸಾಹಭರಿತ ವಾತಾವರಣದಲ್ಲಿ ಧ್ವಜಾರೋಹಣದ ನಂತರ ಕಾರ್ಯಕ್ರಮದ ಅಂತ್ಯದಲ್ಲಿ ವೇದಿಕೆಯ ವತಿಯಿಂದ ಆಗಮಿಸಿದವರಿಗೆ ಸುಮಾರು 1500 ಕ್ಕೂ ಹೆಚ್ಚು ಜನರಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗಿತ್ತು. ಜನರು ಉಪಹಾರವನ್ನು ಸೇವಿಸಿ ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹಂಚಿಕೊಂಡರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ