LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅನ್ನಭಾಗ್ಯ ಯೋಜನೆಯ  ಹಣದ ಬದಲು ಅಕ್ಕಿ ಕೊಡಲು ತೀರ್ಮಾನ: ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪ

ಬೆಂಗಳೂರುಫೆಬ್ರವರಿ 19: ಅನ್ನಭಾಗ್ಯ ಯೋಜನೆಯ  ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆಇಷ್ಟು ದಿನಗಳ ಕಾಲ ಹೆಚ್ಚುವರಿ ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂನೀಡಲಾಗುತ್ತಿತ್ತುಇದೀಗಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಿದ್ದುಇದೇ ತಿಂಗಳಿನಿಂದ ನೀಡುತ್ತಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ತಿಂಗಳಿಂದ ಅಕ್ಕಿಯನ್ನು ಫಲಾನುಭವಿಗಳಿಗೆ ಕೊಡುತ್ತಿದ್ದೇವೆ. ನಮಗೆ ಬೇಕಾಗಿರುವ 5 ಕೆಜಿ ಅಕ್ಕಿಯನ್ನು ಕೊಡಲು ಕೇಂದ್ರ ಸರ್ಕಾರವು ಒಪ್ಪಿಗೆ ಕೊಟ್ಟಿದೆ. ಪ್ರತಿ ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ವರ್ಷಕ್ಕೆ 27.48 ಲಕ್ಷ ಮೆಟ್ರಿಕ್ ಅಕ್ಕಿ ಅವಶ್ಯಕತೆ ಇದೆ ಎಂದು ಹೇಳಿದರು.

ನಮ್ಮ ಇಲಾಖೆ ಅಧಿಕಾರಿಗಳು ಬರೆದ ಪತ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸ್ಪಂದಿಸಿದ್ದಾರೆ. ಈಗ ಕೇಂದ್ರ ಸಚಿವರು ಅಕ್ಕಿ‌ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆ. ಜನವರಿವರೆಗೆ ಹಣವನ್ನು ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಹಾಕುತ್ತೇವೆ. ಫೆಬ್ರವರಿಯಿಂದ 10 ಕೆಜಿ ಅಕ್ಕಿ ಕೊಡುವ ತೀರ್ಮಾನ ಮಾಡಿದ್ದೇವೆ. 2013ರಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ. ನಾವು ನುಡಿದಂತೆ ನಡೆದಿದ್ದೇವೆ. ರಾಜ್ಯದ ಜನರಿಗೆ ಅಕ್ಕಿ, ಹಣ ಎರಡನ್ನೂ ಕೊಟ್ಟಿದ್ದೇವೆ ಎಂದರು.



ಕೆಂದ್ರ ಸರ್ಕಾರ ಮೊದಲು ಒಂದು ಕೆಜಿ ಅಕ್ಕಿಗೆ 28 ರೂನಿಗದಿಪಡಿಸಿತ್ತುಜನವರಿಯಿಂದ ಪ್ರತಿ ಕೆಜಿಗೆ 22.50 ರೂ ನಂತೆ ಕೊಡಲು ನಿರ್ಧರಿಸಿದೆದರ ಪರಿಷ್ಕರಣೆ‌ ಹಿನ್ನೆಲೆಯಲ್ಲಿ ‌ಮೂರು ತಿಂಗಳು ಹಣ ಹಾಕಿಲ್ಲಒಂದು ವಾರದೊಳಗೆ ಸಕಾಲದಲ್ಲಿ ಹಣ ಹಾಕುತ್ತೇವೆರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆಜನವರಿವರೆಗೆ ಹಣವನ್ನು ಡಿಬಿಟಿ ಮೂಲಕ ಹಾಕುತ್ತೇವೆ ಎಂದು ಭರವಸೆ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್