Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರ್ವಜನಿಕರಿಗಾಗಿ ಚೆನ್ನಮ್ಮ ವ್ರತ್ತದಲ್ಲಿ ಕುಡಿಯುವ ನೀರಿನ ಅರವಟಿಗೆ ವ್ಯವಸ್ಥೆ

ಸಂಕೇಶ್ವರ : ಬೇಸಿಗೆ ದಾಹ ತಣಿಸುವ ಉದ್ದೇಶದಿಂದ ಚನ್ನಮ್ಮ ಸರ್ಕಲ್ ನಲ್ಲಿ ಪುರಸಭೆ ವತಿಯಿಂದ ಮಡಿಕೆಯಲ್ಲಿ ನೀರು ಹಾಕಿ ತಂಪಾದ ಕುಡಿಯುವ ನೀರಿನ ಅರವಟಿಗೆ ಇಟ್ಟು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಚನ್ನಮ್ಮ ಸರ್ಕಲ್ ನಲ್ಲಿನ ರಸ್ತೆಯಲ್ಲಿ ನಿತ್ಯ ಸಾವಿರಾರು ಜನರು ಓಡಾಟ ನಡೆಸುತ್ತಿರುತ್ತಾರೆ. ಬಿಸಿಲ ಧಗೆಯಿಂದ ಬಾಯಾರಿ ಬಂದವರು ಇಲ್ಲಿ ಸ್ವಲ್ಪ ಹೊತ್ತು ತಂಗಿ, ಇಲ್ಲಿ ಇಡಲಾದ ತಂಪಾದ ಕುಡಿಯುವ ನೀರು ಸೇವಿಸಿ ದಾಹ ತಣಿಸಿಕೊಳ್ಳುತ್ತಿದ್ದಾರೆ.
ಚನ್ನಮ್ಮ ಸರ್ಕಲ್ ಬಳಿ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಪುರಸಭೆ ವತಿಯಿಂದ ಟೆಂಟ್ ನಿರ್ಮಿಸಿ ಅದರಲ್ಲಿ  ಜನರಿಗೆ ಕುಳಿತುಕೊಳ್ಳಲು ಕುರ್ಚಿಯನ್ನು ಸಹ ಇಡುವ ವ್ಯವಸ್ಥೆಯನ್ನು ಮಾಡಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ತತ್ತರಿಸುತ್ತಿರುವ ಜನರಿಗೆ ಈ ವ್ಯವಸ್ಥೆಯು ಸಾರ್ವಜನಿಕರಿಗೆ ಅನುಕೂಲಕರವಾಗಲಿ ಎಂದು ಪುರಸಭೆಯ ಆರೋಗ್ಯಕಿರು ನೀರಿಕ್ಷಕರಾದ ಶ್ರೀಧರ ಬೆಳವಿ ತಿಳಿಸಿದರು.
ಈ‌ ಸಂಧರ್ಭದಲ್ಲಿ ಪುರಸಭೆಯ ಸಿಬ್ಬಂದಿಗಳಾದ ಕೃಷ್ಣಾ ಖಾತೆದಾರ, ಪರುಶರಾ ಪಾಟೀಲ, ಪೌರಕಾರ್ಮಿಕರಾದ ಮಂಗಲ ತಮ್ಮಣ್ಣವರ, ಪ್ರಕಾಶ ಸತ್ಯನಾಯಿಕ ಸೇರಿದಂತೆ ಅನೇಕರು ಇದ್ದರು.
ಸದ್ಯ ಬಿಸಿಲಿನ ಪ್ರಖರತೆ ಅಧಿಕವಾಗುತ್ತಿದ್ದು ಪಟ್ಟಣದಲ್ಲಿ ಅಧಿಕವಾಗಿ ಸಾರ್ವಜನಿಕರ ಓಡಾಟ ನಡೆಸುವ ಪ್ರದೇಶದಲ್ಲಿ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಅರ್ಜುಣಗಿ ಬಿ.ಕೆ.ಗ್ರಾಮದ ಶ್ರೀ ಅಂಬಾದೇವಿಯ ಹಾಗೂ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವವುಇಂದು ಹಿರೇಮಣೂರ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ಮಾಡೆಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಂದ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಪ್ರದರ್ಶನ ದ್ಯಾಮಮ್ಮಾದೇವಿ ದೇವಸ್ಥಾನದ ಸಭಾ ಮಂಟಪ ಉದ್ಘಾಟನೆ 35 ವರ್ಷಗಳ ಇತಿಹಾಸವಿರುವ ಶ್ರೀ ಶಿವಯೋಗಿ ನಗರ ಕ್ಕೆ ಅಧಿಕೃತ ನಾಮ ಫಲಕ ಮೇರಗುಸಾರ್ವಜನಿಕರಿಗಾಗಿ ಚೆನ್ನಮ್ಮ ವ್ರತ್ತದಲ್ಲಿ ಕುಡಿಯುವ ನೀರಿನ ಅರವಟಿಗೆ ವ್ಯವಸ್ಥೆ ಸಿಎಂ ಸಿದ್ದರಾಮಯ್ಯನವರು ನಿರ್ಣಯ ಮಾಡಿದ ಒಳಮೀಸಲಾತಿ, ಒಳ ಮೀಸಲಾತಿಯೇ ಅಲ್ಲಇನ್ನೆರಡು ವರ್ಷದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ; ಬಸವರಾಜ ಬೊಮ್ಮಾಯಿ ಸರ್ಕಾರಿ ಕಟ್ಟಡಗಳಿಂದಲೇ ರೂ. 472 ಕೋಟಿ ತೆರಿಗೆ ಬಾಕಿಮುಖ್ಯಮಂತ್ರಿ ಆಗಲು ಆಶೀರ್ವದಿಸಿದರೆ, ಇಡೀ ರಾಜ್ಯದ ಚಿತ್ರಣವನ್ನೇ ಬದಲಿಸುವೆ; ಬಸನಗೌಡ ಪಾಟೀಲ ಯತ್ನಾಳ