ಮಂಡ್ಯ, ಜೂನ್ 27: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಭರ್ತಿಯಾಗಿ ದಾಖಲೆ ಬರೆದಿದೆ. ಇದರೊಂದಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ದಾಖಲೆಯೊಂದನ್ನು ಬರೆಯುವ ಅವಕಾಶ ಒದಗಿಬಂದಿದೆ. ಮುಂದಿನ 3 ದಿನಗಳ ಒಳಗಾಗಿ ಬಾಗಿನ ಅರ್ಪಿಸಿದರೆ, ಜೂನ್ ತಿಂಗಳಲ್ಲಿಯೇ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಲಿದ್ದಾರೆ. ಜೂನ್ನಲ್ಲೇ ಬಾಗಿನ ಅರ್ಪಿಸುವ ಅವಕಾಶ ಈವರೆಗೆ ಯಾವ ಮುಖ್ಯಮಂತ್ರಿಗೂ ದೊರೆತಿಲ್ಲ.
1979 ರಿಂದ ಕಾವೇರಿಗೆ ಬಾಗಿನ ಅರ್ಪಿಸುವ ಪದ್ದತಿ ಆರಂಭವಾಗಿದೆ. ಮೊದಲ ಬಾರಿಗೆ ಡಿ. ದೇವರಾಜ ಅರಸ್ ಬಾಗಿನ ಅರ್ಪಿಸುವ ಮೂಲಕ ಆ ಪದ್ದಗೆ ನಾಂದಿ ಹಾಡಿದ್ದರು. ಅಲ್ಲಿಂದ ಇಲ್ಲಿಯವರೆಗೂ ಯಾವೊಬ್ಬ ಮುಖ್ಯಮಂತ್ರಿಗೂ ಜೂನ್ನಲ್ಲಿ ಬಾಗಿನ ಅರ್ಪಿಸುವ ಅವಕಾಶ ಸಿಕ್ಕಿಲ್ಲ.
ಸಾಮಾನ್ಯವಾಗಿ ಕೆಆರ್ಎಸ್ ಡ್ಯಾಂ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಭರ್ತಿಯಾಗುತ್ತದೆ. ಆ ನಂತರ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಿಸಲಾಗುತ್ತದೆ. ಆದರೆ, ಈ ವರ್ಷ ಜೂನ್ ಕೊನೆಯ ವಾರದಲ್ಲೇ ಡ್ಯಾಂ ಭರ್ತಿಯಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.