LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಭವಿಷ್ಯದ ದೃಷ್ಟಿಯಿಂದಲೂ ನಿಮ್ಮ ‌ಸಹಕಾರ ಬೇಕು: ವಿದೇಶಾಂಗ ಸಚಿವ ಎಸ್​. ಜೈಶಂಕರ್ ​

ಬೆಂಗಳೂರು, ಏಪ್ರಿಲ್​ 15: ನಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆಯಾಗಿದೆ. ಮುಂದಿನ ಐದು ವರ್ಷ ಏನು ಮಾಡುತ್ತೇವೆ ಅನ್ನುವುದನ್ನು ಹೇಳಿದ್ದೇವೆ. ಕೇವಲ ಐದು ವರ್ಷ ಮಾತ್ರವಲ್ಲ, ಭವಿಷ್ಯದ ದೃಷ್ಟಿಯಿಂದಲೂ ನಿಮ್ಮ ‌ಸಹಕಾರ ಬೇಕು ಎಂದು ವಿದೇಶಾಂಗ ಸಚಿವ ಎಸ್​. ಜೈಶಂಕರ್ ​ ಹೇಳಿದರು.

ಬೆಂಗಳೂರಿನ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮತ್ತೊಮ್ಮೆ ಮೋದಿ ಸಲುವಾಗಿ ನಾನು ಬೆಂಗಳೂರಿಗೆ ಬಂದಿದ್ದೇನೆ ಎಂದರು.

ನಮ್ಮ ಹತ್ತು ವರ್ಷದ ಸಾಧನೆಯನ್ನು ಜನರ ಮುಂದೆ ಇಟ್ಟಿದ್ದೇವೆ. 25 ಕೋಟಿ ಜನ ಬಡತನದಿಂದ ಹೊರಬಂದಿದ್ದಾರೆ. ಕೊರೊನಾ ವಿರುದ್ಧ ಹೋರಾಡಲು ವ್ಯಾಕ್ಸಿನ್ ಅಭಿವೃದ್ಧಿ ‌ಪಡಿಸಿದ್ದೇವೆ. ಪ್ರತಿದಿನ ದೇಶದಲ್ಲಿ ರಸ್ತೆ, ರೈಲ್ವೇ ಟ್ಯ್ರಾಕ್​​ ನಿರ್ಮಾಣವಾಗುತ್ತಿವೆ. ಜಿ20 ಯಶಸ್ವಿಯಾಗಿ ನಿರ್ವಹಿಸಿದ್ದೇವೆ. ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಆಪರೇಷನ್ ಗಂಗಾ ಸೇರಿದಂತೆ ಹಲವು ಹೆಸರುಗಳಲ್ಲಿ ಕಾರ್ಯಾಚರಣೆ ನಡೆಸಿ ತಾಯ್ನಾಡಿಗೆ ಕರೆ ತಂದಿದ್ದೇವೆ ಎಂದು ತಿಳಿಸಿದರು.

ಪ್ರಣಾಳಿಕೆಯಲ್ಲಿ ‌ತಿಳಿಸಿರುವಂತೆ ಮುಂದಿನ ವರ್ಷಗಳಲ್ಲಿ ನಾವು ನಡೆದುಕೊಳ್ಳುತ್ತೇವೆ. ವರ್ಷಕ್ಕೆ ಸರಾಸರಿ ಎಂಟು ವಿಮಾನ ನಿಲ್ದಾಣಗಳ ನಿರ್ಮಾಣ ಮಾಡುತ್ತೇವೆ. ಮೂಲಭೂತ ಸೌಕರ್ಯಗಳ ವೃದ್ಧಿ, ಭಯೋತ್ಪಾದನೆ ಚಟುವಟಿಕೆಗಳ ನಿಗ್ರಹಕ್ಕೆ ಕಠಿಣ ಕ್ರಮ ವಹಿಸಲಾಗಿದೆ. ಪಿಎಂ ಗರೀಬ್ ಕಲ್ಯಾಣ್ ಯೋಜನೆ ಮುಂದಿನ ಐದು ವರ್ಷವೂ ಮುಂದುವರೆಯಲಿದೆ.

ಆವಾಸ್​ ಯೋಜನೆ ಅಡಿಯಲ್ಲಿ ಮುಂದಿನ ಐದು ವರ್ಷ 3 ಕೋಟಿ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಹಿರಿಯರಿಗೆ ಆಯುಷ್ಮಾನ್ ಭಾರತ್ ವಿಸ್ತರಿಸಲಾಗುವುದು. ವಿಪುಲ ಉದ್ಯೋಗವಕಾಶ, ಮುದ್ರಾ ಯೋಜನೆಯನ್ನು ಸ್ಟಾರ್ಟಪ್​ಗಳಿಗೂ ವಿಸ್ತರಣೆ ಹೀಗೆ ಹಲವು ಭರವಸೆಗಳನ್ನು ಕೊಡಲಾಗಿದೆ ಎಂದು ತಿಳಿಸಿದರು.

 

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ