Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭವಿಷ್ಯದ ದೃಷ್ಟಿಯಿಂದಲೂ ನಿಮ್ಮ ‌ಸಹಕಾರ ಬೇಕು: ವಿದೇಶಾಂಗ ಸಚಿವ ಎಸ್​. ಜೈಶಂಕರ್ ​

ಬೆಂಗಳೂರು, ಏಪ್ರಿಲ್​ 15: ನಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆಯಾಗಿದೆ. ಮುಂದಿನ ಐದು ವರ್ಷ ಏನು ಮಾಡುತ್ತೇವೆ ಅನ್ನುವುದನ್ನು ಹೇಳಿದ್ದೇವೆ. ಕೇವಲ ಐದು ವರ್ಷ ಮಾತ್ರವಲ್ಲ, ಭವಿಷ್ಯದ ದೃಷ್ಟಿಯಿಂದಲೂ ನಿಮ್ಮ ‌ಸಹಕಾರ ಬೇಕು ಎಂದು ವಿದೇಶಾಂಗ ಸಚಿವ ಎಸ್​. ಜೈಶಂಕರ್ ​ ಹೇಳಿದರು.

ಬೆಂಗಳೂರಿನ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮತ್ತೊಮ್ಮೆ ಮೋದಿ ಸಲುವಾಗಿ ನಾನು ಬೆಂಗಳೂರಿಗೆ ಬಂದಿದ್ದೇನೆ ಎಂದರು.

ನಮ್ಮ ಹತ್ತು ವರ್ಷದ ಸಾಧನೆಯನ್ನು ಜನರ ಮುಂದೆ ಇಟ್ಟಿದ್ದೇವೆ. 25 ಕೋಟಿ ಜನ ಬಡತನದಿಂದ ಹೊರಬಂದಿದ್ದಾರೆ. ಕೊರೊನಾ ವಿರುದ್ಧ ಹೋರಾಡಲು ವ್ಯಾಕ್ಸಿನ್ ಅಭಿವೃದ್ಧಿ ‌ಪಡಿಸಿದ್ದೇವೆ. ಪ್ರತಿದಿನ ದೇಶದಲ್ಲಿ ರಸ್ತೆ, ರೈಲ್ವೇ ಟ್ಯ್ರಾಕ್​​ ನಿರ್ಮಾಣವಾಗುತ್ತಿವೆ. ಜಿ20 ಯಶಸ್ವಿಯಾಗಿ ನಿರ್ವಹಿಸಿದ್ದೇವೆ. ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಆಪರೇಷನ್ ಗಂಗಾ ಸೇರಿದಂತೆ ಹಲವು ಹೆಸರುಗಳಲ್ಲಿ ಕಾರ್ಯಾಚರಣೆ ನಡೆಸಿ ತಾಯ್ನಾಡಿಗೆ ಕರೆ ತಂದಿದ್ದೇವೆ ಎಂದು ತಿಳಿಸಿದರು.

ಪ್ರಣಾಳಿಕೆಯಲ್ಲಿ ‌ತಿಳಿಸಿರುವಂತೆ ಮುಂದಿನ ವರ್ಷಗಳಲ್ಲಿ ನಾವು ನಡೆದುಕೊಳ್ಳುತ್ತೇವೆ. ವರ್ಷಕ್ಕೆ ಸರಾಸರಿ ಎಂಟು ವಿಮಾನ ನಿಲ್ದಾಣಗಳ ನಿರ್ಮಾಣ ಮಾಡುತ್ತೇವೆ. ಮೂಲಭೂತ ಸೌಕರ್ಯಗಳ ವೃದ್ಧಿ, ಭಯೋತ್ಪಾದನೆ ಚಟುವಟಿಕೆಗಳ ನಿಗ್ರಹಕ್ಕೆ ಕಠಿಣ ಕ್ರಮ ವಹಿಸಲಾಗಿದೆ. ಪಿಎಂ ಗರೀಬ್ ಕಲ್ಯಾಣ್ ಯೋಜನೆ ಮುಂದಿನ ಐದು ವರ್ಷವೂ ಮುಂದುವರೆಯಲಿದೆ.

ಆವಾಸ್​ ಯೋಜನೆ ಅಡಿಯಲ್ಲಿ ಮುಂದಿನ ಐದು ವರ್ಷ 3 ಕೋಟಿ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಹಿರಿಯರಿಗೆ ಆಯುಷ್ಮಾನ್ ಭಾರತ್ ವಿಸ್ತರಿಸಲಾಗುವುದು. ವಿಪುಲ ಉದ್ಯೋಗವಕಾಶ, ಮುದ್ರಾ ಯೋಜನೆಯನ್ನು ಸ್ಟಾರ್ಟಪ್​ಗಳಿಗೂ ವಿಸ್ತರಣೆ ಹೀಗೆ ಹಲವು ಭರವಸೆಗಳನ್ನು ಕೊಡಲಾಗಿದೆ ಎಂದು ತಿಳಿಸಿದರು.

 

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ