LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮೈಸೂರು ದಸರಾ ಗಜಪಡೆಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದ ಅರಣ್ಯ ಇಲಾಖೆ!

ಬೆಂಗಳೂರು, ಆಗಸ್ಟ್ 21: ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಗಜಪಡೆ ಇಂದು ಮೈಸೂರಿಗೆ ಆಗಮಿಸುತ್ತಿದ್ದು, ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡಕ್ಕೆ ಸ್ವಾಗತ ದೊರೆಯಲಿದೆ. ಈ ಮಧ್ಯೆ, ದಸರಾ ಗಜಪಡೆ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿರುವ ಅರಣ್ಯ ಇಲಾಖೆ ಗಜಪಡೆ, ಸಿಬ್ಬಂದಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ವಿಮೆ ಮಾಡಿಸಿದೆ.





ಆಗಸ್ಟ್​ 21ರಿಂದ ಆರಂಭವಾಗಿ ದಸರಾ ಮಹೋತ್ಸವ ಮುಕ್ತಾಯಗೊಂಡು ಗಜಪಡೆ ಕಾಡು ಸೇರುವವರೆಗೂ ವಿಮೆ ಚಾಲ್ತಿಯಲ್ಲಿರುತ್ತದೆ. ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಮಾಡಿಸಲಾಗಿದೆ. ಅರಣ್ಯಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷದಂತೆ 50 ಜನರಿಗೆ 1 ಕೋಟಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.





ಗಜಪಡೆಗೆ ನಾಡಿಗೆ ಬಂದ ಸಂಧರ್ಭದಲ್ಲಿ ತಾಲೀಮು ಅಥವಾ ಇನ್ನಿತರ ಸಂಧರ್ಭದಲ್ಲಿ ಗಜಪಡೆಯಿಂದ ಸಾರ್ವಜನಿಕರಿಗೆ ಅಥವ ಸಾರ್ವಜನಿಕ ಆಸ್ತಿಗೆ ತೊಂದರೆಯಾದರೆ 50 ಲಕ್ಷ ರೂಪಾಯಿ ವರೆಗೆ ವಿಮೆ ಸೌಲಭ್ಯ ದೊರೆಯಲಿದೆ. ಅರಣ್ಯ ಇಲಾಖೆ ಒಟ್ಟು 2,37,50,000 ಕೋಟಿ ರೂಪಾಯಿ ಮೊತ್ತದ ವಿಮೆ ಮಾಡಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್