ಗಜಪಡೆಗೆ 87,50,000 ರೂ. ಮೊತ್ತದ ವಿಮೆ ಮಾಡಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ರೂಪಾಯಿ, ಸಾರ್ವಜನಿಕರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 50 ಲಕ್ಷ ರೂ. ಮೊತ್ತದ ವಿಮೆ ಮಾಡಿಸಲಾಗಿದ.ಎ ಇದಕ್ಕಾಗಿ ವಿಮಾ ಕಂಪನಿಗೆ ಪ್ರೀಮಿಯಂ ಹಣ ಪಾವತಿ ಮಾಡಲಾಗಿದೆ.
ಆಗಸ್ಟ್ 21ರಿಂದ ಆರಂಭವಾಗಿ ದಸರಾ ಮಹೋತ್ಸವ ಮುಕ್ತಾಯಗೊಂಡು ಗಜಪಡೆ ಕಾಡು ಸೇರುವವರೆಗೂ ವಿಮೆ ಚಾಲ್ತಿಯಲ್ಲಿರುತ್ತದೆ. ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಮಾಡಿಸಲಾಗಿದೆ. ಅರಣ್ಯಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷದಂತೆ 50 ಜನರಿಗೆ 1 ಕೋಟಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.
ಗಜಪಡೆಗೆ ನಾಡಿಗೆ ಬಂದ ಸಂಧರ್ಭದಲ್ಲಿ ತಾಲೀಮು ಅಥವಾ ಇನ್ನಿತರ ಸಂಧರ್ಭದಲ್ಲಿ ಗಜಪಡೆಯಿಂದ ಸಾರ್ವಜನಿಕರಿಗೆ ಅಥವ ಸಾರ್ವಜನಿಕ ಆಸ್ತಿಗೆ ತೊಂದರೆಯಾದರೆ 50 ಲಕ್ಷ ರೂಪಾಯಿ ವರೆಗೆ ವಿಮೆ ಸೌಲಭ್ಯ ದೊರೆಯಲಿದೆ. ಅರಣ್ಯ ಇಲಾಖೆ ಒಟ್ಟು 2,37,50,000 ಕೋಟಿ ರೂಪಾಯಿ ಮೊತ್ತದ ವಿಮೆ ಮಾಡಿಸಿದೆ.