LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು: ಸಿ.ಎಂ.ಸಿದ್ದರಾಮಯ್ಯ

ಅರಣ್ಯ ಹುತಾತ್ಮರಿಗೆ ಸಿದ್ದರಾಮಯ್ಯ ನಮನ

• ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ

ಪರಿಸರ ರಕ್ಷಣೆ ಕುರಿತು ಸಿಎಂ ಅಭಿಮತ

ಬೆಂಗಳೂರು ಸೆ 11: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ‌ ಹುತತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ. ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು. ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ‌ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ಎಂದರೆ ನಾವು ನಮ್ಮ‌ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಂತಾಗುತ್ತದೆ ಎಂದರು.

ರಾಜ್ಯದಲ್ಲಿ ಆನೆ, ಹುಲಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಂತೋಷದ ಸಂಗತಿ. ಆದರೆ ಪ್ರಾಣಿ-ಮನುಷ್ಯ ಸಂಘರ್ಷ ತಪ್ಪಿಸಿ ಮಾನವ, ಪ್ರಾಣಿ ಸಂಪತ್ತನ್ನು ಕಾಪಾಡುವ ದಿಕ್ಕಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳು ಆಗಬೇಕಿದೆ. ಇದಕ್ಕಾಗಿ ಲಭ್ಯ ಇರುವ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಅರಣ್ಯ ಹುತಾತ್ಮರು ಮನುಕುಲದ ಸಂರಕ್ಷಕರು. ಇವರ ತ್ಯಾಗ ಅರಣ್ಯ ಸಂರಕ್ಷಣೆಗೆ ಸ್ಫೂರ್ಥಿಯಾಗಲಿ ಎಂದು ಹಾರೈಸಿದರು.

ಅರಣ್ಯ ಮತ್ತು ಜೀವಶಾಸ್ತ್ರ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಹುತಾತ್ಮ‌ರ ಕುಟುಂಬದ ಸದಸ್ಯರು ಮತ್ತು ಬಂಧುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್