ಆಡಳಿತ ಪಕ್ಷದ ಸದಸ್ಯರ ವಿರೋಧದ ಬಳಿಕ ಅವರು ಕ್ಷಮೆ ಕೇಳಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಲು ಬಯಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಉಪಸಭಾಪತಿ ಹರಿವಂಶ್ ಅವಕಾಶ ನೀಡಲಿಲ್ಲ. ಇದಕ್ಕೆ ಆಕ್ರೋಶಗೊಂಡ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಏಕಾಏಕಿ ಎದ್ದು ಸದನದಲ್ಲಿ ಮಾತನಾಡಲು ಪ್ರಾರಂಭಿಸಿದ್ದರು. ಇದಕ್ಕೆ ಉಪಸಭಾಪತಿ ಹರಿವಂಶ್ ವಿರೋಧ ವ್ಯಕ್ತಪಡಿಸಿದ್ದರು. ದೇಶದಲ್ಲಿ ಸರ್ವಾಧಿಕಾರ ನಡೆದಿದೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ವೇಳೆ ರಾಜ್ಯಸಭಾ ಪೀಠಾಧ್ಯಕ್ಷರ ಸೀಟ್ ಕಡೆ ಬೆರಳು ಮಾಡಿ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ನಾವು ಮಾತನಾಡಲು ತಯಾರಿ ಮಾಡಿಕೊಂಡು ಬಂದಿದ್ದೇವೆ,ಆದರೆ ನೀವು ಬೇರೆ ಏನೋ ಬಯಸುತ್ತಿದ್ದೀರಿ ಎಂದು ಖರ್ಗೆ ಆಕ್ರೋಶ ಹೊರಹಾಕಿದ್ದರು. ಆದರೆ, ಖರ್ಗೆ ಮಾತಿಗೆ ಉಪಸಭಾಪತಿ ಹರಿವಂಶ್ ಹಾಗೂ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಸಾಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ಆಡಳಿತ ಪಕ್ಷ ಗದ್ದಲ ಮಾಡಿದ್ದರು. ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಕೇಳಿದ್ದಾರೆ.