ಮುದ್ದೇಬಿಹಾಳ: ತಾಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ಅಭಿವೃದ್ಧಿ ಹಾಗೂ ಮೇಲ್ವಿಚಾರಣಾ ಸಮಿತಿ (ಎಸ್ಡಿಎಂಸಿ)ಯನ್ನು ರಚಿಸಲಾಯಿತು.
ಶಾಲೆಯ ಅಭಿವೃದ್ಧಿ, ಶೈಕ್ಷಣಿಕ ಗುಣಮಟ್ಟದ ವೃದ್ಧಿ ಹಾಗೂ ಉತ್ತಮ ಆಡಳಿತ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಗ್ರಾಮಸ್ಥರು, ಪಾಲಕರು ಹಾಗೂ ಹಿರಿಯರ ಸಮ್ಮುಖದಲ್ಲಿ ಸಮಿತಿ ರಚನೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಮಲ್ಲನಗೌಡ ಬಿರಾದಾರ ಹಾಗೂ ಉಪಾಧ್ಯಕ್ಷರಾಗಿ ಶಾಂತಮ್ಮ ಹುಲಗಣ್ಣಿ ಸರ್ವಾನುಮತದಿಂದ ಆಯ್ಕೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಹಿರಿಯರಾದ ಭೀಮನಗೌಡ ಬಿರಾದಾರ, ಶಾಲೆಯ ಶೈಕ್ಷಣಿಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಎಸ್ಡಿಎಂಸಿ ಪ್ರಮುಖ ಪಾತ್ರ ವಹಿಸಲಿದ್ದು, ಶಾಲೆ ಹಾಗೂ ಪಾಲಕರ ನಡುವೆ ಉತ್ತಮ ಸಮನ್ವಯ ಸಾಧಿಸಲು ಸಮಿತಿ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರು ಹಾಗೂ ಶಾಲಾ ಹಿತೈಷಿಗಳು ಭಾಗವಹಿಸಿ, ನೂತನ ಸಮಿತಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನರಾದ ಸಂಗನಗೌಡ ಪಾಟೀಲ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಬಸನಗೌಡ ಬಿರಾದಾರ, ಮಲ್ಲಪ್ಪ ಯರಝರಿ, ಶ್ರೀಶೈಲ ಸಜ್ಜನ, ಬಿ.ಟಿ. ಬಿರಾದಾರ, ದ್ಯಾಮಣ್ಣ ಹೊಸಮನಿ, ಪರಶುರಾಮ ಆಂದೇಲಿ, ಬಸವರಾಜ ಚವಣಬಾವಿ, ಗಣೇಶ ಹೆಬ್ಬಾಳ, ರಾಮಣ್ಣ ಕವಡಿಮಟ್ಟಿ, ಮಲ್ಲಿಕಾರ್ಜುನ ಕನ್ನೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.