LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ಕುಂಟೋಜಿ ಸರ್ಕಾರಿ ಶಾಲೆಗೆ ಎಸ್‌ಡಿಎಂಸಿ ಸಮಿತಿ ರಚನೆ

ಮುದ್ದೇಬಿಹಾಳ: ತಾಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ಅಭಿವೃದ್ಧಿ ಹಾಗೂ ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ)ಯನ್ನು ರಚಿಸಲಾಯಿತು.

ಶಾಲೆಯ ಅಭಿವೃದ್ಧಿ, ಶೈಕ್ಷಣಿಕ ಗುಣಮಟ್ಟದ ವೃದ್ಧಿ ಹಾಗೂ ಉತ್ತಮ ಆಡಳಿತ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಗ್ರಾಮಸ್ಥರು, ಪಾಲಕರು ಹಾಗೂ ಹಿರಿಯರ ಸಮ್ಮುಖದಲ್ಲಿ ಸಮಿತಿ ರಚನೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಮಲ್ಲನಗೌಡ ಬಿರಾದಾರ ಹಾಗೂ ಉಪಾಧ್ಯಕ್ಷರಾಗಿ ಶಾಂತಮ್ಮ ಹುಲಗಣ್ಣಿ ಸರ್ವಾನುಮತದಿಂದ ಆಯ್ಕೆಯಾದರು.

ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಹಿರಿಯರಾದ ಭೀಮನಗೌಡ ಬಿರಾದಾರ, ಶಾಲೆಯ ಶೈಕ್ಷಣಿಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಎಸ್‌ಡಿಎಂಸಿ ಪ್ರಮುಖ ಪಾತ್ರ ವಹಿಸಲಿದ್ದು, ಶಾಲೆ ಹಾಗೂ ಪಾಲಕರ ನಡುವೆ ಉತ್ತಮ ಸಮನ್ವಯ ಸಾಧಿಸಲು ಸಮಿತಿ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರು ಹಾಗೂ ಶಾಲಾ ಹಿತೈಷಿಗಳು ಭಾಗವಹಿಸಿ, ನೂತನ ಸಮಿತಿಗೆ ಶುಭ ಹಾರೈಸಿದರು.

ಸಂದರ್ಭದಲ್ಲಿ ಮಾಜಿ ಪ್ರಧಾನರಾದ ಸಂಗನಗೌಡ ಪಾಟೀಲ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಬಸನಗೌಡ ಬಿರಾದಾರ, ಮಲ್ಲಪ್ಪ ಯರಝರಿ, ಶ್ರೀಶೈಲ ಸಜ್ಜನ, ಬಿ.ಟಿ. ಬಿರಾದಾರ, ದ್ಯಾಮಣ್ಣ ಹೊಸಮನಿ, ಪರಶುರಾಮ ಆಂದೇಲಿ, ಬಸವರಾಜ ಚವಣಬಾವಿ, ಗಣೇಶ ಹೆಬ್ಬಾಳ, ರಾಮಣ್ಣ ಕವಡಿಮಟ್ಟಿ, ಮಲ್ಲಿಕಾರ್ಜುನ ಕನ್ನೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೂಳು–ಕಸದಿಂದ ಮುಚ್ಚಿದ ಎಎಲ್‌ಬಿಸಿ ಕಾಲುವೆ: ಚವನಭಾವಿ ರೈತರಿಗೆ ನೀರಿನ ಸಂಕಷ್ಟನೂತನ ಸಚಿವ ಲಕ್ಷ್ಮಣ ಸವದಿಗೆ ಸ್ವಕ್ಷೇತ್ರದಲ್ಲಿ ಅಭೂತಪೂರ್ವ ಸ್ವಾಗತಕುಂಟೋಜಿ ಸರ್ಕಾರಿ ಶಾಲೆಗೆ ಎಸ್‌ಡಿಎಂಸಿ ಸಮಿತಿ ರಚನೆತಂಪೆರೆದ ಆಶ್ಲೇಸಾ ಮಳೆ : ೧ ಗಂಟೆಕಾಲ ಸುರಿದ ರಬಸದ ಮಳೆಪರಿಣಾಮಕಾರಿ ಬೋಧನೆ ಮತ್ತು ತರಗತಿ ನಿರ್ವಹಣೆ: ಘನಮಠೇಶ್ವರ ಶಾಲೆಯ ಶಿಕ್ಷಕರಿಗೆ ಮಾರ್ಗದರ್ಶನಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ಸುತ್ತ ರಾಜಕೀಯ ಸಮರ: ರಾಹುಲ್ ಗಾಂಧಿ-ಕಿರಣ್ ರಿಜಿಜು ನಡುವೆ ತೀವ್ರ ವಾಗ್ದಾಳಿಬಾಗಲಕೋಟೆಯಲ್ಲಿ ರಾಜಕೀಯ-ಧಾರ್ಮಿಕ ಸಮರ ತೀವ್ರ: ಸಚಿವ ವಿಜಯಾನಂದ ಕಾಶಪ್ಪನವರ್ ಹಾಗೂ ಜಯಮೃತ್ಯುಂಜಯ ಸ್ವಾಮೀಜಿ ನಡುವೆ ವಾಕ್ಸಮರ ಉಗ್ರ ರೂಪಕ್ಕೆಎಸ್. ಆಯ್. ಆರ್. ಪಟ್ಟಿ 17 ರ ವರೆಗೆ ಮುಂದುಡಿಕೆ ತಹಸೀಲ್ದಾರ್ ನಾಗೇಂದ್ರ ಕೊಳಶೆಟ್ಟಿ.'ನಮ್ಮ ಮಗಳಿಗೆ ನ್ಯಾಯ ಕೊಡಿಸಿ’ - ಯುವತಿ ಸಾವಿಗೆ ಕಿರುಕುಳವೇ ಕಾರಣ: ಪೋಷಕರ ಆಕ್ರೋಶಬೆಳಗಾವಿ–ಗೋವಾ ಸೌಹಾರ್ಧತೆ ಇನ್ನಷ್ಟು ಬಲಗೊಳ್ಳಲಿ: ಪ್ರತಿಮಾ ಧೋಂಡ್