LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ವಿಧಿವಶ

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ಇಂದು ಬೆಳಗಿನ ಜಾವ 2 ಗಂಟೆಗೆ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದರು. ಕೂಡಲೇ ವೈದ್ಯರು ಮನೆಗೆ ಆಗಮಿಸಿದ್ದರು. ಬೆಳಗ್ಗೆ 3:30ಕ್ಕೆ ವೈದ್ಯರು ಎಸ್‌ಎಂ ಕೃಷ್ಣ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದರು. ಇಂದು ಬೆಳಗ್ಗೆ ಮನೆಯಿಂದ ಚೆಕಪ್‌ಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ನಿರ್ಧಾರ ಮಾಡಿದ್ದರು ಎನ್ನಲಾಗಿದೆ.

ಇಂದು ಇಡೀ ದಿನ ಸದಾಶಿವನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನ 1 ಗಂಟೆಯ ಬಳಿಕ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರವನ್ನು ಶಿಫ್ಟ್‌ ಮಾಡಲಾಗುತ್ತದೆ.

ಸದಾಶಿವನಗರ ಎಸ್ ಎಂ ಕೃಷ್ಣ ಮನೆ ಬಳಿ ಪೊಲೀಸರ ಅಲರ್ಟ್‌ ಆಗಿದ್ದು, ನಿವಾಸದ ಅಕ್ಕಪಕ್ಕ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಭದ್ರತೆ ಕಲ್ಪಿಸಿದ್ದಾರೆ.

ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್​ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್​ನಿಂದಲೂ ಪದವಿ ಪಡೆದಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್