Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು: ಮಾಜಿ ಸಿಎಂ ಯಡಿಯೂರಪ್ಪ

ಹುಬ್ಬಳ್ಳಿ, ಏಪ್ರಿಲ್ 15: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯವರು 'ರೋಡ್‌ ಶೋ' ಗು ಮೊದಲು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ ಮಾಜಿ ಸಿಎಂ ಯಡಿಯೂರಪ್ಪ ಅವರು, ಧಾರವಾಡ ಮತ ಕ್ಷೇತ್ರದಲ್ಲಿ ಜನರು ಪ್ರಹ್ಲಾದ್ ಜೋಶಿಯವರ ಪರವಾಗಿದ್ದಾರೆ. ಶ್ರೀ ಶಿರಹಟ್ಟಿಮಠದ ಶ್ರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ಪಕ್ಷೇತರವಾಗಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಅವರು ಹೇಳಿದರು.

ಧಾರವಾಡ ಮತ ಕ್ಷೇತ್ರದಲ್ಲಿ ಮತದಾರರು ಬಿಜೆಪಿಯ ಪರವಾಗಿದ್ದಾರೆ. ನೀವು ಪ್ರಹ್ಲಾದ್ ಜೋಶಿ ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು. ತಮ್ಮ ರಾಜಕೀಯ ನಿರ್ಧಾರ ಕೈ ಬಿಡಬೇಕು ಎಂದು ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದರು.

ಕರ್ನಾಟಕದಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಅಲೆ ಇದೆ. ಪ್ರಹ್ಲಾದ್ ಜೋಶಿ ಅವರು ಪ್ರಬುದ್ಧ ರಾಜಕಾರಣಿ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ತಿಳಿಸಿದರು.

ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಸ್ವಾಮಿಜಿ ಅವರಿಗೆ ಮತ್ತೊಮ್ಮೆ ವಿನಂತಿ ಮಾಡುತ್ತೇನೆ. ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು. ಈ ಕುರಿತು ಈಗಾಗಲೇ ಅವರೊಂದಿಗೆ ಮಾತನಾಡಿದ್ದೇನೆ. ಇನ್ನೊಮ್ಮೆ ಫೋನ್ ಕರೆ ಮೂಲಕ ಅವರನ್ನು ಮನವೊಲಿಸುವ ಕೆಲಸ ಮಾಡುವೆ ಎಂದು ಹೇಳಿದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ