LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಳಿಯ ಪ್ರತಾಪ್​ಗೆ ಮಕ್ಕಳಿಲ್ಲದ ಕೊರಗಿತ್ತು: ಮಾಜಿ ಸಚಿವ ಬಿ.ಸಿ.ಪಾಟೀಲ್


ದಾವಣಗೆರೆ: "ಪ್ರತಾಪ್​ ನನ್ನ ರಾಜಕೀಯ ಜೀವನದಲ್ಲಿ ಬಲಗೈ ಆಗಿದ್ದ. ಆತನಿಗೆ ಮಕ್ಕಳಾಗಿಲ್ಲ ಎಂಬ ಕೊರಗಿತ್ತು" ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.


ಚನ್ನಗಿರಿ ತಾಲೂಕಿನ ಕತ್ತಲಗೆರೆಯಲ್ಲಿ ಸೋಮವಾರ ತಡರಾತ್ರಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. "ಕತ್ತಲಗೆರೆ ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ. ಪ್ರತಾಪ್ ನನಗೆ ಮಗನಂತಿದ್ದ. ಮನೆಯ ತೋಟ, ಎಲ್ಲವನ್ನೂ ಅವನೇ ನೋಡಿಕೊಳ್ಳುತ್ತಿದ್ದ. ಆತ್ಮಹತ್ಯೆ ಮಾಡಿಕೊಳ್ಳುವಂಥದ್ದೇನೂ ಇರಲಿಲ್ಲ. ಆದರೆ ಮಕ್ಕಳಾಗಲಿಲ್ಲ ಎಂಬ ಕೊರಗಿತ್ತು. ಇದಕ್ಕೆ ಸರೊಗಸಿ (ಬಾಡಿಗೆ ತಾಯ್ತತನ) ಮೂಲಕ ಮಗು ಪಡೆಯುವ ಪ್ರಕ್ರಿಯೆಗೆ ಬೆಂಗಳೂರಿನಲ್ಲಿ ವಕೀಲರನ್ನು ಭೇಟಿ ಮಾಡಿ ಮಾತನಾಡಿದ್ದರು. ಅವರು ನೀವು ಕೋರ್ಟ್​​ಗೆ ಬಂದು ಹೇಳಬೇಕಾಗುತ್ತದೆ ಎಂದಿದ್ದರು. ಇದಕ್ಕೆ ಒಪ್ಪಿದ್ದ ನಾವು ಕೋರ್ಟ್​ ಅನುಮತಿಗಾಗಿ ಕಾಯುತ್ತಿದ್ದೆವು. ಅಷ್ಟರಲ್ಲಿ ಊರಿಗೆ ಹೋಗಿ ಬರುವುದಾಗಿ ಹೇಳಿ ಈ ರೀತಿ ಮಾಡಿಕೊಂಡಿದ್ದಾನೆ" ಎಂದು ಬೇಸರ ವ್ಯಕ್ತಪಡಿಸಿದರು.





ಈ ಕುರಿತು ಬಿ.ಸಿ.ಪಾಟೀಲ್​ ಅವರ ಸಹಾಯಕ ನಾಗರಾಜ್ ಬಣಕಾರ್ ಪ್ರತಿಕ್ರಿಯಿಸಿ, "ಬಿ.ಸಿ.ಪಾಟೀಲ್​ ತಮ್ಮ ಇಬ್ಬರು ಅಳಿಯಂದಿರನ್ನು ಮಕ್ಕಳಂತೆ ನೋಡಿಕೊಳ್ಳುತ್ತಿದ್ದರು. ಬೆಳಗ್ಗೆ ಆರು ಗಂಟೆಗೆ ಸೌಮ್ಯ ಪಾಟೀಲ್​​​, ಸೃಷ್ಟಿ ಪಾಟೀಲ್​ ಮತ್ತು ಬಿ.ಸಿ.ಪಾಟೀಲ್ ಪತ್ನಿ ವನಜಾ ಪಾಟೀಲ್ ಬೆಂಗಳೂರಿಗೆ ಹೋಗಿದ್ದರು. ನಂತರ ಮಾವ ಅಳಿಯ ಒಟ್ಟಿಗೆ ಸೇರಿ ಉಪಹಾರ ಸೇವಿಸಿದ್ದರು. ಪ್ರತಾಪ್​ ಅವರು ಮಾವ ಪಾಟೀಲರಿಗೆ ಊರಿಗೆ ಹೋಗುವುದಾಗಿ ತಿಳಿಸಿ, ನಂತರ ಸ್ವಗ್ರಾಮ ಕತ್ತಲಗೆರೆಗೆ ಹೋಗಿ ವಾಪಸಾಗುತ್ತೇನೆ ಎಂದಿದ್ದರು. ಆದರೆ ವಿಷಸೇವಿಸಿ ಆತ್ಮಹತ್ಯೆ ಶರಣಾಗಿದ್ದು ನಮಗೆ ಆಘಾತ ಉಂಟುಮಾಡಿದೆ" ಎಂದು ತಿಳಿಸಿದ್ದಾರೆ.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್