Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಮಾನವೀಯ ಶಿಕ್ಷಣ ಕುಸಿತ: ಮಾಜಿ ಸಂಸದ ರಮೇಶ ಕತ್ತಿ

ಹುಕ್ಕೇರಿ: ಅಂದು ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವ್ಯತಿರಿಕ್ತ ಪರಿಣಾಮದಿಂದ ಮಾನವೀಯ ಮೌಲ್ಯಗಳು ಕುಸಿಯುತ್ತಿರುವದು ಕಳವಳಕರ ಸಂಗತಿ ಎಂದು
ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.

ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ೨೦೨೪ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಕ್ರೀಡಾ, ಹಾಗೂ ಇತರ ಚಟುವಟಿಕೆಗಳ ಸಮಾರೋಪ ಮತ್ತು ಅಂತಿಮ ವರ್ಷದ
ವಿದ್ಯಾರ್ಥಿಗಳ ಬೀಳ್ಕೂಡುವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಅಂಕಗಳಿಗೆ ಸೀಮಿತದ ಶಿಕ್ಷಣಕ್ಕಿಂತ ಸ್ವಾಲಂಬಿ ಬದುಕು ಕಟ್ಟಿಕೊಳ್ಳುವ ತಳಪಾಯದ
ಗುಣಮಟ್ಟದ ಶಿಕ್ಷಣ ಅವಶ್ಯವಾಗಿದೆ .ವಿದ್ಯಾರ್ಥಿಗಳು ಉದ್ಯೋಗಿ ಮನೋಭಾವನೆ ತೊರೆದು ಉದ್ದಿಮೆಯಾಗುವ ಸಂಕಲ್ಪ ಹೊಂದಿರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜ ಅಭಿವೃದ್ಧಿ ಸಮಿತಿಯ ಪಿ.ಜಿ ಕೊಣ್ಣೂರ ಮಾತನಾಡಿ ಇಂದು ಪಾಲಕರು ಶಿಕ್ಷಕರ ಮೇಲೆ ನಿಯಂತ್ರಣ ಹೇರುತ್ತಿರುವದರಿಂದ ತಮ್ಮ
ಮಕ್ಕಳ ಮೇಲೆ ಅಡ್ಡ ಪರಿಣಾಮ ಬೀರುತ್ತಿದೆ. ಮಕ್ಕಳ ಶಿಕ್ಷ ಪದವಿ ಶಿಕ್ಷಣ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ಜವಾಬ್ದಾರಿ ಎಂಬುವದನ್ನು ಅರಿತುಕೊಳ್ಳಬೇಕು.
ವಿಧ್ಯಾರ್ಥಿ ಯಲ್ಲಾಲಿಂಗ ಹೊಸಮನಿ ಹಾಗೂ ಲಕ್ಷ್ಮಿ ಬಡಿಗೇರ ವೀರಾಗ್ರಣಿ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು ಗಣಿತ ಅರ್ಥ ಶಾಸ್ತ್ರದಲ್ಲಿ ೯೯ ಅಂಕ ಪಡೆದ ಕಾವೇರಿ ಕದಂ ಹಾಗೂ ಸುಧಾ
ಕರಬಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಮಾರಂಭದಲ್ಲಿ ಪ್ರಾಚಾರ್ಯ ಡಾ ಲಕ್ಮಣ ಪಟಾಯತ ,ಹುಕ್ಕೇರಿ ಪುರಸಭೆಯ ಮಾಜಿ ಅಧ್ಯಕ್ಷ ಎ.ಕ ಪಾಟೀಲ, ಮಹಾವೀರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹಾವೀರ ನಿಲಜಗಿ, ಶಾಲಾ ಸಮಿತಿ ಸದಸ್ಯರಾದ ಪ್ರಕಾಶ ಮುತಾಲಿಕ ರಾಜೇಶ ಮುನ್ನೊಳಿ, ಪರಗೌಡ ಪಾಟೀಲ, ಮಲ್ಲಿಕಾರ್ಜುನ ತೇರಣಿ,ರಾಯಪ್ಪ ಗೋಣಿ,ಮುನಾಫ ಅತ್ತಾರ,ಸುಹಾಸ ನೂಲಿ,ಉದಯಕುಮಾರ ಹುಕ್ಕೇರಿ, ಬಸವ ಚೌಗಲಾ,ಲೀಲಾವತಿ ರಜಪೂತ. ಪ್ರೋ ರಾಜೇಶ ಕಂಬಾರ, ಮಲ್ಲಿಕಾರ್ಜುನ ದಲಾಲ, ಸೋಹಿಲ್ ಸತ್ತಿಕರ, ರಾಣಿ ರತ್ನಪ್ರಬಾ, ಯಲಗೌಡ ಡಾಂಗೆ ಮತ್ತಿತರರು ಉಪಸ್ಥಿತರಿದ್ದರು.
ಉಪನ್ಯಾಸಕಿ ಡಾ. ರೇಖಾ ನಿರಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೋ ಬಸವರಾಜ ವಾಸನ್ ವರದಿ ವಾಚಿಸಿದರು.

ಡಾ.ಎಮ್.ಎಸ್.ಖರಾಡಿ ನಿರೂಪಿಸಿದರು. ವಿ.ಬಿ ಪಾಟೀಲ ವಂದಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.  ಪೋಟೋ ಶೀರ್ಷಿಕೆ - ೧೨-ಹುಕ್ಕೇರಿ-೦೨
ಹುಕ್ಕೇರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಕ್ರೀಡಾ, ಹಾಗೂ ಇತರ ಚಟುವಟಿಕೆಗಳ ಸಮಾರೋಪ ಮತ್ತು ಅಂತಿಮ ವರ್ಷದ
ವಿದ್ಯಾರ್ಥಿಗಳ ಬೀಳ್ಕೂಡುವ ಸಮಾರಂಭದಲ್ಲಿ ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಮಾತನಾಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ