LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ 100ನೇ ವಯಸ್ಸಿನಲ್ಲಿ ನಿಧನ

ವಾಷಿಂಗ್ಟನ್, ಅಮೆರಿಕ: ಅಮೆರಿಕದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ಭಾನುವಾರ ತಮ್ಮ 100ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಶತಮಾನಗಳ ತುಂಬು ಜೀವನ ನಡೆಸಿದ್ದ ಮಾಜಿ ಅಧ್ಯಕ್ಷರಾಗಿರುವ ಜಿಮ್ಮಿ ಕಾರ್ಟರ್​, ಭಾರತಕ್ಕೆ ಭೇಟಿ ನೀಡಿದ ಮೂರನೇ ಅಮೆರಿಕದ ಅಧ್ಯಕ್ಷರಾಗಿದ್ದಾರೆ.


ಕಾರ್ಟರ್ ಜಾರ್ಜಿಯಾದ ಪ್ಲೇನ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ಮರಣ ಹೊಂದಿದ್ದಾರೆ. ಚರ್ಮದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರಿಗೆ ಇತ್ತೀಚೆಗಷ್ಟೇ ಚಿಕಿತ್ಸೆ ನಿಲ್ಲಿಸಲಾಗಿತ್ತು. ಪ್ರಸ್ತುತ ಅವರು ತಮ್ಮ ನಿವಾಸದಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಅವರ ಮರಣವನ್ನು ಅಟ್ಲಾಂಟಾದ ಕಾರ್ಟರ್ ಸೆಂಟರ್ ಅಧಿಕೃತವಾಗಿ ಘೋಷಣೆ ಮಾಡಿದೆ.


ನನ್ನ ತಂದೆ ನನಗೆ ಮಾತ್ರವಲ್ಲದೇ, ವಿಶ್ವದ ಶಾಂತಿ, ಮಾನವ ಹಕ್ಕುಗಳು ಮತ್ತು ನಿಸ್ವಾರ್ಥ ಪ್ರೀತಿ ಬಯಸುವ ಪ್ರತಿಯೊಬ್ಬರಿಗೂ ಹೀರೋ ಆಗಿದ್ದರು ಎಂದು ಮಾಜಿ ಅಧ್ಯಕ್ಷರ ಪುತ್ರ ಚಿಪ್ ಕಾರ್ಟರ್ ಹೇಳಿದ್ದಾರೆ.


ಕಾರ್ಟರ್ ಅವರು 1977 ರಿಂದ 1981 ರವರೆಗೆ ಅಮೆರಿಕದ ಅಧಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇಸ್ರೇಲ್ ಮತ್ತು ಈಜಿಪ್ಟ್ ನಡುವಿನ ಕ್ಯಾಂಪ್ ಡೇವಿಡ್ ಒಪ್ಪಂದಗಳ ಮೂಲಕ ಹೆಸರು ಮಾಡಿದ್ದರು. 2002 ರಲ್ಲಿ ಅವರಿಗೆ ಶಾಂತಿ ನೊಬೆಲ್​ ಪ್ರಶಸ್ತಿ ಸಹ ಒಲಿದು ಬಂದಿತ್ತು. ಅಂತಾರಾಷ್ಟ್ರೀಯ ಸಂಘರ್ಷ ಗಳಿಗೆ ಶಾಂತಿಯುತ ಪರಿಹಾರಗಳನ್ನು ಹುಡುಕಲು, ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳನ್ನು ಮುನ್ನಡೆಸಲು ಅವರು ದಶಕಗಳ ಕಾಲ ಅವಿರತವಾಗಿ ಶ್ರಮಿಸಿದ್ದರು. ಅಷ್ಟೇ ಅಲ್ಲ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಉತ್ತೇಜಿಸಲು ಸಾಕಷ್ಟು ಹೋರಾಟ ನಡೆಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್