LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

390 ಕೋಟಿ ರೂ. ಹೂಡಿಕೆಯ IBC ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ

ಬೆಂಗಳೂರು: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.

ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಉತ್ಪಾದನಾ ಘಟಕಕ್ಕೆ ಕಂಪನಿಯು ಮೊದಲ ಹಂತದಲ್ಲಿ 390 ಕೋಟಿ ರೂ. ಹೂಡಿಕೆ ಮಾಡಲಿದೆ. ಇದರಿಂದ 300 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇಲ್ಲಿ ಉತ್ಪಾದಿಸಲಾಗುವ ಬ್ಯಾಟರಿಗಳ ಪೈಕಿ ಶೇಕಡಾ 20ರಷ್ಟನ್ನು ಅಮೆರಿಕ ಮತ್ತು ಯೂರೋಪಿನ ದೇಶಗಳಿಗೆ ರಫ್ತು ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಐಬಿಸಿ ಘಟಕಕ್ಕೆ 10 ಎಕರೆ ಜಾಗ ಕೊಟ್ಟಿದ್ದು, ಫಾಕ್ಸ್-ಕಾನ್ ಸಂಸ್ಥೆಯ ಸಮೀಪದಲ್ಲೇ ಇದು ಅಸ್ತಿತ್ವಕ್ಕೆ ಬರಲಿದೆ. ಮುಂದಿನ 98 ತಿಂಗಳಲ್ಲಿ ಈ ಘಟಕವು ಕಾರ್ಯಾಚರಣೆ ಆರಂಭಿಸಲಿದ್ದು, ಇಲ್ಲೇ ಬ್ಯಾಟರಿಗಳನ್ನು ತಯಾರಿಸಿ, ಇಲ್ಲಿಂದಲೇ ದೇಶ-ವಿದೇಶಗಳಿಗೂ ಕಳಿಸಿ ಕೊಡಲಿದೆ ಎಂದು ಹೇಳಿದರು.

ಸದ್ಯಕ್ಕೆ ಐಬಿಸಿ ಕಂಪನಿಯು ದಕ್ಷಿಣ ಕೊರಿಯಾದಲ್ಲಿ ಸೆಲ್ಸ್ ಉತ್ಪಾದಿಸಿ, ಅವುಗಳನ್ನು ಇಲ್ಲಿಗೆ ತಂದು ಪೂರ್ಣ ಪ್ರಮಾಣದ ಬ್ಯಾಟರಿಗಳನ್ನು ತಯಾರಿಸುತ್ತಿದೆ. ಈ ಘಟಕ ಕಾರ್ಯಾರಂಭ ಆದ ನಂತರ ಬೆಂಗಳೂರಿನಲ್ಲೇ ಸೆಲ್ ಗಳ ಉತ್ಪಾದನೆ ಕೂಡಾ ಆಗಲಿದೆ. ಇದು ದೇಶದಲ್ಲೇ ಮೊದಲ ಸೆಲ್ ಉತ್ಪಾದನಾ ಘಟಕವಾಗಲಿದೆ. ಬರುವ ದಿನಗಳಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ಜತೆಗೆ ಉಳಿದ ವಾಹನಗಳಿಗೂ ಇದು ಬ್ಯಾಟರಿ ಪೂರೈಸಲಿದೆ ಎಂದು ವಿವರಿಸಿದರು.

ಭಾರತದಲ್ಲಿ ಶಿಕ್ಷಣ ಹಾಗೂ ಅಮೆರಿಕದ ಸಿಲಿಕಾನ್ ವ್ಯಾಲಿಯಲ್ಲಿ ತರಬೇತಿ ಪಡೆದ ಯುವ ಉದ್ಯಮಿಗಳು ಐಬಿಸಿ ಕಂಪನಿ ಸ್ಥಾಪಿಸಿ, ಬ್ಯಾಟರಿಗಳ ವಿನ್ಯಾಸ, ಉತ್ಪಾದನೆಗೆ ಆದ್ಯತೆ ಕೊಟ್ಟಿದ್ದಾರೆ. ಹಾಗೆಯೇ ಭಾರತದ ಅಗತ್ಯಕ್ಕೆ ಹೊಂದುವ ಹಾಗೆ ವಿನ್ಯಾಸ ಮಾಡಿರುವುದು ಮೆಚ್ಚುವಂತಹದ್ದು. ಇದು ಭಾರತದಲ್ಲಿ ಇಂತಹ ಪ್ರಪ್ರಥಮ ಯೋಜನೆಯಾಗಿದೆ. ಇಲ್ಲಿ ರೆಟ್ರೋಫಿಟ್ ಬ್ಯಾಟರಿಗಳನ್ನು ತಯಾರಿಸಲಾಗುವುದು. ಇದರಿಂದ ರಾಜ್ಯದ ಆರ್ಥಿಕತೆಗೆ ಹೊಸ ಬಲ ಬರಲಿದ್ದು, ಚೀನಾದ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್