LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಪಶ್ಚಿಮ ಸಿಂಗ್‌ಭೂಮ್ ಅರಣ್ಯದಲ್ಲಿ ನಾಲ್ವರು ನಕ್ಸಲರ ಹತ್ಯೆ

ಚೈಬಾಸಾ : ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗುವಾ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಸೋಮವಾರ ಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲರಿಗೆ ಭಾರೀ ಆಘಾತ ಉಂಟಾಗಿದೆ. ಈ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಹತ್ಯೆ ಮಾಡಿವೆ. ಘಟನಾ ಸ್ಥಳದಿಂದ ನಕ್ಸಲರ ಶವಗಳ ಜೊತೆಗೆ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.


ಮಾಹಿತಿ ಪ್ರಕಾರ, ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದವು. ಅಷ್ಟರಲ್ಲಿ ಹೊಂಚು ಹಾಕಿ ಕುಳಿತಿದ್ದ ನಕ್ಸಲರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದಾರೆ. ಪ್ರತಿದಾಳಿ ನಡೆಸಿದ ಸೈನಿಕರು ನಾಲ್ವರು ನಕ್ಸಲರನ್ನು ಕೊಂದು ಹಾಕಿದ್ದಾರೆ. ಸದ್ಯ ಈ ಘಟನಾ ಸ್ಥಳದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೆಲವು ನಕ್ಸಲರು ಗುಂಡು ಹಾರಿಸಿದ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ.


ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?: ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ಈ ಎನ್‌ಕೌಂಟರ್ ಅನ್ನು ಖಚಿತಪಡಿಸಿದ್ದಾರೆ. ಸೋಮವಾರ ಬೆಳಗ್ಗೆ ನಡೆದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿ ಚಕಮಕಿ ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ ನಾಲ್ವರು ಮಾವೋವಾದಿಗಳು ಹತರಾಗಿದ್ದಾರೆ.


ನಾಲ್ವರು ನಕ್ಸಲರ ಹತ್ಯೆ, ಇಬ್ಬರಿಗೆ ಗಾಯ: ಹತರಾದ ನಕ್ಸಲರಲ್ಲಿ ಝೋನಲ್ ಕಮಾಂಡರ್, ಸಬ್ ಝೋನಲ್ ಕಮಾಂಡರ್, ಏರಿಯಾ ಕಮಾಂಡರ್, ಓರ್ವ ಮಹಿಳೆ ನಕ್ಸಲೈಟ್ ಸೇರಿದ್ದಾರೆ. ಪ್ರದೇಶದ ಕಮಾಂಡರ್ ಮತ್ತು ಹಾರ್ಡ್‌ಕೋರ್ ಮಹಿಳಾ ನಕ್ಸಲೈಟ್ ಸೇರಿದಂತೆ ಇಬ್ಬರು ನಕ್ಸಲರು ಗಾಯಗೊಂಡಿದ್ದಾರೆ ಎಂಬುದು ತಿಳಿದಿದೆ. ಜೊತೆಗೆ ಓರ್ವ ಮಹಿಳಾ ನಕ್ಸಲೈಟ್ ಅನ್ನು ಬಂಧಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್