Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಶ್ಚಿಮ ಸಿಂಗ್‌ಭೂಮ್ ಅರಣ್ಯದಲ್ಲಿ ನಾಲ್ವರು ನಕ್ಸಲರ ಹತ್ಯೆ

ಚೈಬಾಸಾ : ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗುವಾ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಸೋಮವಾರ ಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲರಿಗೆ ಭಾರೀ ಆಘಾತ ಉಂಟಾಗಿದೆ. ಈ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಹತ್ಯೆ ಮಾಡಿವೆ. ಘಟನಾ ಸ್ಥಳದಿಂದ ನಕ್ಸಲರ ಶವಗಳ ಜೊತೆಗೆ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.


ಮಾಹಿತಿ ಪ್ರಕಾರ, ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದವು. ಅಷ್ಟರಲ್ಲಿ ಹೊಂಚು ಹಾಕಿ ಕುಳಿತಿದ್ದ ನಕ್ಸಲರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದಾರೆ. ಪ್ರತಿದಾಳಿ ನಡೆಸಿದ ಸೈನಿಕರು ನಾಲ್ವರು ನಕ್ಸಲರನ್ನು ಕೊಂದು ಹಾಕಿದ್ದಾರೆ. ಸದ್ಯ ಈ ಘಟನಾ ಸ್ಥಳದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೆಲವು ನಕ್ಸಲರು ಗುಂಡು ಹಾರಿಸಿದ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ.


ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?: ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ಈ ಎನ್‌ಕೌಂಟರ್ ಅನ್ನು ಖಚಿತಪಡಿಸಿದ್ದಾರೆ. ಸೋಮವಾರ ಬೆಳಗ್ಗೆ ನಡೆದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿ ಚಕಮಕಿ ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ ನಾಲ್ವರು ಮಾವೋವಾದಿಗಳು ಹತರಾಗಿದ್ದಾರೆ.


ನಾಲ್ವರು ನಕ್ಸಲರ ಹತ್ಯೆ, ಇಬ್ಬರಿಗೆ ಗಾಯ: ಹತರಾದ ನಕ್ಸಲರಲ್ಲಿ ಝೋನಲ್ ಕಮಾಂಡರ್, ಸಬ್ ಝೋನಲ್ ಕಮಾಂಡರ್, ಏರಿಯಾ ಕಮಾಂಡರ್, ಓರ್ವ ಮಹಿಳೆ ನಕ್ಸಲೈಟ್ ಸೇರಿದ್ದಾರೆ. ಪ್ರದೇಶದ ಕಮಾಂಡರ್ ಮತ್ತು ಹಾರ್ಡ್‌ಕೋರ್ ಮಹಿಳಾ ನಕ್ಸಲೈಟ್ ಸೇರಿದಂತೆ ಇಬ್ಬರು ನಕ್ಸಲರು ಗಾಯಗೊಂಡಿದ್ದಾರೆ ಎಂಬುದು ತಿಳಿದಿದೆ. ಜೊತೆಗೆ ಓರ್ವ ಮಹಿಳಾ ನಕ್ಸಲೈಟ್ ಅನ್ನು ಬಂಧಿಸಲಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ