Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಪಂಚಾಕ್ಷರಿ ಮಾರ್ಷಲ್ ಆರ್ಟ್ಸ್ ಬಳ್ಳಾರಿಯ ನಾಲ್ವರು ವಿದ್ಯಾರ್ಥಿಗಳ ಆಯ್ಕೆ

ಬಳ್ಳಾರಿ, ಮೇ 02: ಮಲೇಶಿಯಾದಲ್ಲಿ ನಡೆಯಲಿರುವ 22ನೇ ಅಂತರಾಷ್ಟ್ರೀಯ ಒಕಿನವ ಗೋಜು ರಾಯ್ ಇಪಾನ್ ಸಿಟಿ ಮುಕ್ತ ಕರಾಟೆ ಸ್ಪರ್ಧೆ–2026ಕ್ಕೆ ಬಳ್ಳಾರಿಯ ಶ್ರೀ ಪಂಚಾಕ್ಷರಿ ಮಾರ್ಷಲ್ ಆರ್ಟ್ಸ್ ಟ್ರಸ್ಟ್‌ನ ನಾಲ್ವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಹಾಗೂ ಕರಾಟೆ ಮಾಸ್ಟರ್ ಬಂಡ್ರಾಳ್ ಎಂ. ಮೃತ್ಯುಂಜಯ ಸ್ವಾಮಿ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಗಾಂಧಿನಗರದಲ್ಲಿರುವ ಟ್ರಸ್ಟ್ ಮೂಲಕ ಬಾಲ ಭಾರತಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಕರಾಟೆ, ಯೋಗ ಮತ್ತು ಧ್ಯಾನ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳು ಮತ್ತು ವಿಶೇಷ ತರಬೇತಿ ಶಿಬಿರಗಳನ್ನು ಯಶಸ್ವಿಯಾಗಿ ಆಯೋಜಿಸಿರುವ ಟ್ರಸ್ಟ್, ಈಗಾಗಲೇ ತನ್ನ ವಿದ್ಯಾರ್ಥಿಗಳನ್ನು ಶ್ರೀಲಂಕಾ, ಇಂಡೋನೇಷಿಯಾ, ಸಿಂಗಾಪುರ್, ಮಲೇಶಿಯಾ ಹಾಗೂ ಜಪಾನ್ ದೇಶಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಭಾಗವಹಿಸಲು ಕಳುಹಿಸಿ ಉತ್ತಮ ಸಾಧನೆ ಮಾಡಿಸಿದೆ ಎಂದು ಅವರು ಹೇಳಿದರು.
ಮೇ 8ರಿಂದ 10ರವರೆಗೆ ಮಲೇಶಿಯಾದ ತನಜುಂಗ್ ರಮಭೂತಾನ್ ಇಪಾನ್ ಸಿಟಿಯಲ್ಲಿ ನಡೆಯಲಿರುವ ಈ ಸ್ಪರ್ಧೆಗೆ ಬಾಲ ಭಾರತಿ ಕೇಂದ್ರೀಯ ವಿದ್ಯಾಲಯದ ನಯೋನಿಕ ಮಂಗಳ ಹಾಗೂ ನಕ್ಷತ್ರ ವರ್ಣ ಮಂಗಳ, ವೀರಶೈವ ವಿದ್ಯಾವರ್ಧಕ ಸಂಘದ ಪದವಿ ಪೂರ್ವ ಕಾಲೇಜಿನ ಪ್ರಜ್ವಲ ಗಣೇಶ್ ಮತ್ತು ಡ್ರೀಮ್ ವರ್ಲ್ಡ್ ಶಾಲೆಯ ಮುದಿಯಮಂ ದೇವಗನ್ ಶ್ರೀವತ್ಸ ಆಯ್ಕೆಯಾಗಿದ್ದಾರೆ.
ಟ್ರಸ್ಟ್ ಇದುವರೆಗೆ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಆತ್ಮರಕ್ಷಣಾ ಕಲೆಗಳ ತರಬೇತಿ ನೀಡಿದ್ದು, ಗ್ರಾಮೀಣ ಮತ್ತು ನಗರ ಭಾಗದ ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ಹೇಳಿದರು.
ಮಾಧ್ಯಮಗಳ ಸಹಕಾರವನ್ನು ಸ್ಮರಿಸಿದ ಮೃತ್ಯುಂಜಯ ಸ್ವಾಮಿ, ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ಗೌರವಾಧ್ಯಕ್ಷ ವಿಕ್ರಮ ಮಹಿಪಾಲ್, ಸದಸ್ಯರಾದ ಹೆಚ್.ಎಂ. ಅಂಬರೀಶ್, ಚೈತನ್ಯ ಷಡಕ್ಷರಿ, ಆರ್.ಎಂ. ಬಸವರಾಜ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ