LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

'ಜಲ ಜೀವನ್ ಮಿಷನ್‌' ಅಕ್ರಮ ಪ್ರಕರಣದಲ್ಲಿ ನಾಲ್ಕನೇ ಆರೋಪಿ ಬಂಧನ


ಜೈಪುರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 'ಜಲ ಜೀವನ್ ಮಿಷನ್‌'ನಲ್ಲಿ ನಡೆದಿದೆ ಎನ್ನಲಾದ 20 ಸಾವಿರ ಕೋಟಿ ರೂಪಾಯಿ ಹಗರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಬಂಧಿಸಿದೆ. ಮಧ್ಯವರ್ತಿ ಸಂಜಯ್ ಬಡಾಯ ಬಂಧಿತ ಆರೋಪಿ. ಈತ ಸಾರ್ವಜನಿಕ ಆರೋಗ್ಯ ಇಂಜಿನಿಯರ್ ಇಲಾಖೆಯ (ಪಿಎಚ್‌ಇಡಿ) ಮಾಜಿ ಸಚಿವ ಮಹೇಶ್ ಜೋಶಿ ಅವರ ಆಪ್ತ ಎನ್ನಲಾಗಿದೆ.


ಪ್ರತಿ ಮನೆಗೆ ನಲ್ಲಿ ನೀರು ಒದಗಿಸುವುದು 'ಜಲ ಜೀವನ್ ಮಿಷನ್‌' ಉದ್ದೇಶ. ರಾಜಸ್ಥಾನದಲ್ಲಿ ಈ ಯೋಜನೆಯನ್ನು ಸಾರ್ವಜನಿಕ ಆರೋಗ್ಯ ಇಂಜಿನಿಯರ್​ ಇಲಾಖೆ ಅನುಷ್ಠಾನಗೊಳಿಸುತ್ತಿದೆ. 2023ರ ಆಗಸ್ಟ್ 6ರಂದು ಗುತ್ತಿಗೆದಾರ ಪದ್ಮಚಂದ್ ಜೈನ್ ಎಂಬವರಿಂದ 2.20 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಪಿಎಚ್‌ಇಡಿಯ ಇಬ್ಬರನ್ನು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿತ್ತು. ಇದರ ನಂತರ ಜಲಜೀವನ್ ಮಿಷನ್‌ನಲ್ಲಿನ ಅಕ್ರಮಗಳು ಬೆಳಕಿಗೆ ಬಂದಿವೆ. ಇದರಲ್ಲಿ ಅಕ್ರಮ ಹಣ ವರ್ಗಾವಣೆಯೂ ಬಯಲಾಗಿದೆ.


ಬಂಧಿತರ ಸಂಖ್ಯೆ 4ಕ್ಕೇರಿಕೆ: ಎಸಿಬಿ ದಾಖಲಿಸಿದ ಎಫ್‌ಐಆರ್‌ ಆಧಾರದ ಮೇರೆಗೆ ಜಾರಿ ನಿರ್ದೇಶನಾಲಯ ತನಿಖೆ ಕೈಗೆತ್ತಿಕೊಂಡಿದೆ. ಈಗಾಗಲೇ ಶ್ರೀ ಗಣಪತಿ ಟ್ಯೂಬ್‌ವೆಲ್ ಕಂಪನಿಯ ಮಾಲೀಕ ಮಹೇಶ್ ಮಿತ್ತಲ್, ಶ್ರೀ ಶ್ಯಾಮ್ ಟ್ಯೂಬ್‌ವೆಲ್ ಕಂಪನಿಯ ಮಾಲೀಕ ಪದ್ಮಚಂದ್ ಜೈನ್ ಮತ್ತು ಪಿಯೂಷ್ ಜೈನ್ ಎಂಬವರನ್ನು ಇಡಿ ಬಂಧಿಸಿದೆ. ಇದೀಗ ಮಂಗಳವಾರ, ಮಧ್ಯವರ್ತಿ ಸಂಜಯ್ ಬಡಾಯ ಅವರನ್ನು ಸತತವಾಗಿ ವಿಚಾರಣೆಗೆ ಒಳಪಡಿಸಿ ತನಿಖಾಧಿಕಾರಿಗಳು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 4ಕ್ಕೇರಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್