Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಐಡಿ ತನಿಖೆಯಿಂದ,  ಶಿವಂ ಅಸೋಸಿಯೇಟ್ಸ್ ಹಗರಣ  ವಂಚನೆ ಸ್ಪಷ್ಟ ಮಾಹಿತಿ ; ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಬಹುಕೋಟಿ ರೂ. ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್ ಪ್ರಕರಣವನ್ನು ಸರ್ಕಾರ ಅಧಿಕೃತವಾಗಿ ಸಿಐಡಿ (CID) ತನಿಖೆಗೆ ವಹಿಸಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಪ್ರಕರಣದ ತನಿಖೆಯನ್ನು ಈಗಾಗಲೇ ಸಿಐಡಿಗೆ ಒಪ್ಪಿಸಲಾಗಿದೆ. ಸಿಐಡಿ ಅಧಿಕಾರಿಗಳು ತಮ್ಮ ತನಿಖೆಯನ್ನು ಪೂರ್ಣಗೊಳಿಸಿ ವರದಿ ನೀಡಿದ ನಂತರವೇ ಈ ಹಗರಣದ ಸಂಪೂರ್ಣ ಸತ್ಯಾಸತ್ಯತೆ ಮತ್ತು ನಿಖರವಾದ ಮಾಹಿತಿ ಹೊರಬರಲಿದೆ" ಎಂದು ಸ್ಪಷ್ಟಪಡಿಸಿದರು.
ಈ ಪ್ರಕರಣಕ್ಕೂ ರಾಜಕೀಯಕ್ಕೂ ಸಂಬಂಧವಿಲ್ಲ: ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ, ಇದು ಸಂಪೂರ್ಣವಾಗಿ ಸಾರ್ವಜನಿಕರ ಹಣಕಾಸು ವಂಚನೆಗೆ ಸಂಬಂಧಿಸಿದ ವಿಷಯವಾಗಿದೆ. ಕಾನೂನು ಬಾಹಿರವಾಗಿ ಹಣ ಸಂಗ್ರಹಿಸಿ ಸಾರ್ವಜನಿಕರಿಗೆ ಮೋಸ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಅಥವಾ ಪ್ರೇರೇಪಣೆ ಇಲ್ಲ ಎಂದು ಸಚಿವರು ತಿಳಿಸಿದರು.
ಹಣ ಹೂಡಿಕೆಯಲ್ಲಿ ಜನರು ಎಚ್ಚರಿಕೆ ವಹಿಸಲಿ: ಹೆಚ್ಚಿನ ಬಡ್ಡಿಯ ಆಮಿಷಕ್ಕೆ ಒಳಗಾಗಿ ಸಾರ್ವಜನಿಕರು ಕಷ್ಟಪಟ್ಟು ದುಡಿದ ಹಣವನ್ನು ಅನಧಿಕೃತ ಸಂಸ್ಥೆಗಳಲ್ಲಿ ಹೂಡಿಕೆ ಮಾಡಬಾರದು. ಹಣ ಹೂಡಿಕೆ ಮಾಡುವಾಗ ಸಾರ್ವಜನಿಕರು ಎಚ್ಚರಿಕೆ ಹೆಜ್ಜೆ ಇಡಬೇಕು ಇದೇ ವೇಲೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸಾರ್ವಜನಿಕರಲ್ಲಿ ಮನವಿ ಮಾಡಿದ ಅವರು, "ಯಾವುದೇ ಸಂಸ್ಥೆಗಳು ನಿಯಮಬಾಹಿರವಾಗಿ ಅತಿಯಾದ ಆಸೆ ತೋರಿಸಿದಾಗ ಸಾರ್ವಜನಿಕರು ಜಾಗರೂಕರಾಗಿರಬೇಕು. ಇಂತಹ ವಂಚನೆ ತಡೆಯಲು ಕಾನೂನು ಕ್ರಮದ ಜೊತೆಗೆ ಜನರ ಜಾಗೃತಿಯೂ ಮುಖ್ಯವಾಗಿದೆ ಎಂದು ತಿಳಿಸಿದರು.
ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಸಂದೀಪ್ ಪಾಟೀಲ್ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಬೆಳಗಾವಿ ಉತ್ತರ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರು ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಸಚಿವರು ಪರ್ತಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಗಳು ಮುಗಿದ ತಕ್ಷಣವೇ ಕೇಂದ್ರ ಸರ್ಕಾರವು ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವುದು ಹೊಸದೇನಲ್ಲ, ಇದು ಅವರ ಹಳೆಯ ಚಾಳಿಯೇ ಆಗಿದೆ.ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರ ಬದುಕು ದುಸ್ತರವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆಗಳು ನಡೆಯುವ ಸಂದರ್ಭದಲ್ಲಿ ಮತದಾರರನ್ನು ಸೆಳೆಯಲು ಬೆಲೆಗಳನ್ನು ಸ್ಥಿರವಾಗಿಟ್ಟು, ಚುನಾವಣೆ ಮುಗಿಯುತ್ತಿದ್ದಂತೆಯೇ ಏಕಾಏಕಿ ದರ ಹೆಚ್ಚಳ ಮಾಡುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಸಚಿವರು ಟೀಕಿಸಿದರು.
ಇನ್ನು ಕೇಂದ್ರ ಸರ್ಕಾರದ ತೈಲ ಮತ್ತು ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯನ್ನು ಬಿಜೆಪಿಯವರು ಜಾಗತಿಕ ಬಿಕ್ಕಟ್ಟು ಹಾಗೂ ಅಭಿವೃದ್ಧಿಯ ಹೆಸರಿನಲ್ಲಿ ಸಮರ್ಥಿಸಿಕೊಳ್ಳುತ್ತಿರುವುದು ಸಂಪೂರ್ಣ ತಪ್ಪು ಮತ್ತು ಜನವಿರೋಧಿ ನೀತಿ ಎಂದು ಆಕ್ಷೇಪಿಸಿದ ಸಚಿವರು, ಹಿಂದೆ ಯುಪಿಎ ಆಡಳಿತಾವಧಿಯಲ್ಲಿ ಪೆಟ್ರೋಲ್ ದರ ಕೇವಲ 1 ರೂಪಾಯಿ ಹೆಚ್ಚಾದರೂ ದೇಶಾದ್ಯಂತ ಬೀದಿಗಿಳಿದು ದೊಡ್ಡ ಹಂಗಾಮಾ ಮಾಡುತ್ತಿದ್ದ ಇದೇ ಬಿಜೆಪಿ ನಾಯಕರು, ಇಂದು ತಾವೇ ನಿರಂತರವಾಗಿ ಬೆಲೆ ಏರಿಸುತ್ತಿದ್ದರೂ ಮೌನ ವಹಿಸಿರುವುದರ ಹಿಂದೆ ರಾಜಕೀಯ ಸ್ವಾರ್ಥ ಅಡಗಿದೆ. ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ನಾಯಕರು ಜನಸಾಮಾನ್ಯರ ಆರ್ಥಿಕ ಸಂಕಷ್ಟಗಳಿಗೆ ಸಂಪೂರ್ಣವಾಗಿ ಕುರುಡಾಗಿದ್ದಾರೆ. ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದವರ ಬದುಕು ದುಸ್ತರವಾಗಿದ್ದರೂ ಅದನ್ನು ಸಮರ್ಥಿಸಿಕೊಳ್ಳುವುದು ಅವರ ಜನವಿರೋಧಿ ಧೋರಣೆ ತೋರಿಸುತ್ತದೆ ಎಂದು ತಿಳಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆ 6 ಜನ ದ್ವಿಚಕ್ರ ವಾಹನ ಕಳ್ಳರ ಬಂಧನಐನಾಪುರದಲ್ಲಿ ೧೧೦ ಕೆವಿ ಸ್ಟೇಶನ್ ನಿರ್ಮಾಣಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿಕೆಕ್ರೀಡಾ ಚಟುವಟಿಕೆಗಳಿಂದ ಜಿಲ್ಲೆಗೆ ಹೊಸ ಔಟ್‌ಲುಕ್ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅಭಿಮತಸಿಐಡಿ ತನಿಖೆಯಿಂದ,  ಶಿವಂ ಅಸೋಸಿಯೇಟ್ಸ್ ಹಗರಣ  ವಂಚನೆ ಸ್ಪಷ್ಟ ಮಾಹಿತಿ ; ಸಚಿವ ಸತೀಶ್‌ ಜಾರಕಿಹೊಳಿಕಾರ್ಯಕರ್ತರಲ್ಲಿ ವ್ಯಕ್ತಿತ್ವ, ಶಿಸ್ತು ರೂಪಿಸುವಲ್ಲಿ ಪ್ರಶಿಕ್ಷಣವರ್ಗ ಸಹಕಾರಿ :ಜಗದೀಶ ಶೆಟ್ಟರಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯ ಪುಸ್ತಕಗಳ ವಿತರಣೆಗೆ ಸಕಲ ಸಿದ್ಧತೆ - ಬಿಇಓ ಬಸಣ್ಣವರನೀಟ್‌ ರದ್ದತಿಗೆ ನೊಂದು ಬೆಂಗಳೂರಿಗ ಸೇರಿ 4 ವಿದ್ಯಾರ್ಥಿಗಳು ಸಾವಿಗೆ ಶರಣು!ಕೊಳವೆಬಾವಿ ದುರಂತ: ಮೊಮ್ಮಗನ ರಕ್ಷಣೆಗೆ ಹೋದ ಅಜ್ಜ ಸಾವುಭಾರಿ ಗಾತ್ರದ ಕಾಡುಕೋಣ ಸೆರೆಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ