LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Business News

ಜೂ.25 ರಿಂದ UPI ಮೂಲಕ ಪಾವತಿ ಮಾಡಿ ಕೆಎಸ್‌ಆರ್‌ಟಿಸಿ ಟಿಕೆಟ್ ಖರೀದಿಗೆ ಅವಕಾಶ

ಬೆಂಗಳೂರು: ಪ್ರಯಾಣಿಕರ ಅನುಭವವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಯು ತನ್ನ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡುತ್ತಿದ್ದು, UPI ಮೂಲಕ ಪಾವತಿ ಮಾಡಿ ಟಿಕೆಟ್ ಖರೀದಿ ಮಾಡುವ ಅವಕಾಶ ಒದಗಿಸಲು ಮುಂದಾಗಿದೆ.

ಈ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಜೂನ್ 25 ರಿಂದ ನಾಲ್ಕು ಡಿಪೋಗಳಲ್ಲಿ ಎಲೆಕ್ಟ್ರಾನಿಕ್ ಟಿಕೆಟಿಂಗ್ ಯಂತ್ರಗಳ (ಇಟಿಎಂ) ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಲಿದೆ,

ಎಲ್ಲಾ ಕಂಡಕ್ಟರ್‌ಗಳಿಗೆ ತರಬೇತಿ ನೀಡಿದ ನಂತರ ಕೆಲವೇ ವಾರಗಳಲ್ಲಿ ಎಲ್ಲಾ ಬಸ್‌ಗಳಲ್ಲಿ ವ್ಯವಸ್ಥೆ ಜಾರಿಗೆ ಬರಲಿದೆ. ಸಾರಿಗೆ ನಿಗಮವು ಪ್ರತಿ ಸಾಧನಕ್ಕೆ ತಿಂಗಳಿಗೆ 645 ರೂಪಾಯಿ ಬಾಡಿಗೆಯಂತೆ 10,245 ಇಟಿಎಂಗಳನ್ನು ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.

ಕೆಎಸ್‌ಆರ್‌ಟಿಸಿ ಎಂಡಿ ಅನ್ಬು ಕುಮಾರ್ ಮಾತನಾಡಿ, ಪ್ರಾಯೋಗಿಕ ಯೋಜನೆ ಯಶಸ್ವಿಯಾದ ಬಳಿಕ ಈ ತಿಂಗಳ ಅಂತ್ಯದಲ್ಲಿ ಎಲ್ಲಾ ಬಸ್ ಗಳಲ್ಲಿ ವ್ಯವಸ್ಥೆ ಜಾರಿಯಾಗಲಿದೆ. ಇದರಿಂದೆ ಚಿಲ್ಲರೆ ಸಮಸ್ಯೆ ಎದುರಾಗುವುದಿಲ್ಲ ನಿರ್ವಾಹಕರು ಚಿಲ್ಲರೆ ನೀಡಲಿಲ್ಲ ಎಂಬ ದೂರುಗಳು ಕೂಡ ಕಡಿಮೆಯಾಗಲಿದೆ. ETM ಗಳ ಮೂಲಕ, ಪ್ರಯಾಣಿಕರು GPay, PhonePe, Paytm ಮತ್ತು ಅವರ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ಪಪಾವತಿಸಿ, ಟಿಕೆಟ್ ಖರೀದಿ ಮಾಡಬಹುದು ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆ, ಸಾಮಾಜಿಕ ಬಹಿಷ್ಕಾರಕ್ಕೆ ಕಡಿವಾಣ ಹಾಕಿ : ಶ್ರೀನಿವಾಸ್ ಕರ್ಚೇಡ್ ನಬಿ ರಸೂಲ್ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಆರಿಫಾ ಆಗ್ರಹರಂಜಿಸಿದ ಯಾರಿಗೆ ಬೇಕು ನಿನ್ನ ಕವಿತೆ ನಾಟಕಡಾ.ಬಿ.ಆರ್.ಅಂಬೇಡಕರ್ ಸಂಘಕ್ಕೆ 10 ಲಕ್ಷ ರೂ.ಗಳ ದೇಣಿಗೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿವಿಶೇಷ ನೋಂದಣಿ ಅಭಿಯಾನ ಪರಿಶೀಲಿಸಿದ ವೀಕ್ಷಕ ಕ್ಯಾಪ್ಟನ್ ಕೆ.ರಾಜೇಂದ್ರಕಾಗವಾಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಸೆ.28ರಂದು ಬಂದ್: ಜ್ಯೋತಿಕುಮಾರ ಪಾಟೀಲದ್ರಾಕ್ಷಿ ಬೆಳೆಗಾರರಿಗೆ  ೭೯.೯೭ ಕೋಟಿ ವಿಮಾ ಪರಿಹಾರ, ೮ ಸಾವಿರ ರೈತರಿಗೆ ಅನುಕೂಲ,ಸಚಿವ ಲಕ್ಷ್ಮಣ ಸವದಿ ಪ್ರಯತ್ನಕ್ಕೆ ರೈತ ಮುಖಂಡ ಶೇಖರ ನೇಮಗೌಡ ಅಭಿನಂದನೆಪ್ರಜಾಸೇವಾ ಆಂದೋಲನ ಮೂರು ತಿಂಗಳಲ್ಲಿ ಎಲ್ಲ ತಾಲೂಕುಗಳಲ್ಲೂ ಆಯೋಜನೆ: ಸಚಿವ ಸತೀಶ್ ಜಾರಕಿಹೊಳಿಕಾಗವಾಡ ತಾಲೂಕು ಬರಪೀಡಿತ ಎಂದು ಘೋಷಿಸಿ:ಜ್ಯೋತಿಕುಮಾರ ಪಾಟೀಲ್ ಆಗ್ರಹ ಘೋಷಿಸದಿದ್ದರೆ ಸೆ.28 ಕ್ಕೆ ಪ್ರತಿಭಟನೆಗೆ ಕರೆಸಹಕಾರ ಸಚಿವ ಲಕ್ಷ್ಮಣ ಸವದಿಯವರ ಮಾರ್ಗದರ್ಶನದಲ್ಲಿ ಕುಡಿಯುವ ನೀರಿಗಾಗಿ ವಿಶೇಷ ಯೋಜನೆ.ಅಧ್ಯಕ್ಷ ದತ್ತಾ ವಾಸ್ಟರ