Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ. 23 ರಿಂದ ಮೇ. 31 ರವರೆಗೆ ವಣ್ಣೂರ ಗ್ರಾಮದೇವಿಯರ ಜಾತ್ರಾ ಮಹೋತ್ಸವ

ನೇಸರಗಿ: ಸಮೀಪದ ವಣ್ಣೂರ ಗ್ರಾಮದ ಶ್ರೀ ಗ್ರಾಮದೇವತೆಯರ  ಜಾತ್ರಾ ಮಹೋತ್ಸವವು  ದಿ. 23-05-2025 ರಿಂದ ದಿ. 31-05-2025 ರ ವರೆಗೆ ಅದ್ದೂರಿಯಾಗಿ ನೆರವೇರಲಿದೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು  ಹಣಬರಹಟ್ಟಿಯ ಕೆಳದಿಮಠದ ಪಟ್ಟದ ದೇವರು ಷ ಭ್ರ, ಬಸವಲಿಂಗ ಶಿವಾಚಾರ್ಯರು ವಹಿಸುವರು  ಮತ್ತು ಜಾತ್ರಾ ಮಹೋತ್ಸವದಲ್ಲಿ ಮುರುಗೋಡ ದುರದುಂಡೇಶ್ವರ ಮಠದ ಶ್ರೀ ನೀಲಕಂಠ ಮಹಾಸ್ವಾಮಿಗಳು, ಮಲ್ಲಾಪೂರ ಕೆ ಎನ್ ಗಾಳೇಶ್ವರ ಮಠದ ಶ್ರೀ ಚಿದಾನಂದ ಮಹಾಸ್ವಾಮಿಗಳು, ಸಂಗೊಳ್ಳಿಯ ಗುರು ಸಂಸ್ಥಾನ ಮಠದ ಗುರುಲಿಂಗ ಶಿವಾಚಾರ್ಯರು, ತಾರೀಹಾಳ ಅಡವಿ ಸಿದ್ದೇಶ್ವರ ಮಠದ ಅಡಿವೇಶ ದೇವರು, ಸುತಗಟ್ಟಿ ಹಿರೇಮಠದ ಸಿದ್ದಲಿಂಗ ಶಿವಾಚಾರ್ಯರು ಸಾನಿಧ್ಯ ವಹಿಸುವರು.



ಮೇ 23 ರಂದು ಬೆಳಿಗ್ಗೆ 8 ಘಂಟೆಗೆ ಗ್ರಾಮದ ಸುಮಂಗಲೆಯಂರಿಂದ  ಬ್ರಹತ್ ಕುಂಭಮೇಳ ಆರತಿಯೊಂದಿಗೆ ಬರಮಾಡಿಕೊಳ್ಳುವದು, 9 ಘಂಟೆಗೆ ಹೋಮ, ಹವನ, ದೈವದ ವತಿಯಿಂದ ಉಡಿ ತುಂಬುವದು, ನಂತರ ಶ್ರೀಗಳ ಪ್ರವಚನ, ಮಹಾಪ್ರಸಾದ ನಡೆಯಲಿದೆ, ಅಂದು ರಾತ್ರಿ 10 ಘಂಟೆಗೆ ಶ್ರೀ ರೇಣುಕಾ ನಾಟ್ಯ ಸಂಘ ವಣ್ಣೂರ ಇವರಿಂದ  ಬಡವನ ಒಡಿಲು ಬೆಂಕಿಯ ಸಿಡಿಲು ಎಂಬ ಸಾಮಾಜಿಕ ನಾಟಕ ನೆರವೇರಲಿದೆ.ಮೇ 24 ರಂದು ಬೆಳಿಗ್ಗೆ ಪೂಜೆ, ಬಾಬದಾರರು ಉಡಿ ತುಂಬುವದು ಸಂಜೆ 5 ಘಂಟೆಗೆ ದೇವಿಯರ ಮಹಾ ರಥೋತ್ಸವ ನಡೆಯಲಿದೆ, ರಾತ್ರಿ 10 ಘಂಟೆಗೆ ಚಿಪ್ಪಲಕಟ್ಟಿಯ   ಶ್ರೀ ದುರ್ಗಾದೇವಿ ಹೆಣ್ಣುಮಕ್ಕಳ ಸಂಗ್ಯಾ ಬಾಳ್ಯಾ ನಾಟ್ಯ ಸಂಘ ಇವರಿಂದ ಸಂಗ್ಯಾ ಬಾಳ್ಯಾ ನಾಟಕ ನೆರವೇರಲಿದೆ.




ಮೇ 25 ರಂದು ಪೂಜೆ, ಭಕ್ತರಿಂದ ಉಡಿ ತುಂಬುವದು, ರಾತ್ರಿ 10 ಘಂಟೆಗೆ ವಣ್ಣೂರ ಮಹರ್ಷಿ ವಾಲ್ಮೀಕಿ ನಾಟ್ಯ ಸಂಘದಿಂದ ರಾಜಧಾನಿಗೆ ಕಾಲಿಟ್ಟ ರೈತ ಅರ್ಥಾರ್ಥ ಹಸಿರು ಸೇನೆಯ ಹುಲಿ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ಮೇ. 26 ರಂದು ಭಕ್ತರಿಂದ ಉಡಿ ತುಂಬುವದು, ಸಂಜೆ 4 ಘಂಟೆಗೆ ಭಾರಿ ಜಂಗಿ ಕುಸ್ತಿ ನಡೆಯಲಿವೆ. ಮೇ. 27 ರಂದು ಪೂಜೆ, ಉಡಿ ತುಂಬುವದು ಸಂಜೆ 4 ಘಂಟೆಗೆ ಜಂಗಿ ಕುಸ್ತಿ ನಡೆಯಲಿವೆ. ಮೇ 28 ರಂದು ಪೂಜೆ, ಸಂಜೆ 4 ಘಂಟೆಗೆ ಜಂಗಿ ಕುಸ್ತಿ,ರಾತ್ರಿ 10 ಘಂಟೆಗೆ  ವಣ್ಣೂರ ಜೈ ಹನುಮನ ನಾಟ್ಯ ಸಂಘದಿಂದ ಸಾವಿರ ಹಳ್ಳಿಯ ಸರದಾರ ನಾಟಕ ನಡೆಯಲಿದೆ.


ಮೇ 29 ರಂದು ಮಾಸ್ತಮರ್ಡಿ, ಸುನಕುಂಪಿ ಗ್ರಾಮಸ್ಥರಿಂದ ಉಡಿ ತುಂಬುವದು, ರಾತ್ರಿ 10 ಘಂಟೆಗೆ ಗ್ರಾಮದೇವಿ ನಾಟ್ಯಸಂಘ ವಣ್ಣೂರ ಇವರಿಂದ ಹುತ್ತದಲ್ಲಿ ಕೈ ಇಟ್ಟ ಮುತ್ತೈದೆ ಎಂಬ ಸಾಮಾಜಿಕ ನಾಟಕ ನಡೆಯಲಿದೆ. ಮೇ 30 ಕ್ಕೆ ಪೂಜೆ ಸಂಜೆ 5 ಘಂಟೆಗೆ ಕೊನೆಯ ರಥೋತ್ಸವ  ನೆರವೇರಲಿದೆ. ಮೇ 31 ರಂದು ಶ್ರೀ ದೇವಿಯರನ್ನು ಪೂಜೆಯೊಂದಿಗೆ ಗದ್ದಿಗೆ ಗೊಳಿಸುವದು ನಡೆಯಲಿದ್ದು, ಜಾತ್ರೆಯ ಪ್ರತಿ ದಿನ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಎಲ್ಲರಿಗೂ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬೈಲಹೊಂಗಲ ಟಿ ಎ ಪಿ ಸಿ ಎಮ್ ಎಸ್ ಅಧ್ಯಕ್ಷರು, ವಣ್ಣೂರ ಪಿ ಕೆ ಪಿ ಎಸ್ ಅಧ್ಯಕ್ಷರಾದ ಬಾಳಾಸಾಹೇಬ ದೇಸಾಯಿ ಮತ್ತು ಜಾತ್ರಾ ಕಮಿಟಿಯ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ