Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಲಿಯಾದವಳಿಂದ ವಿಜಯನಿಯಾಗುವವರೆಗೆ

ಬಳ್ಳಾರಿ, ಮಾ.12:  ಮಹಿಳಾ ಸಪ್ತಾಹ 2026 ಅಡಿಯಲ್ಲಿ  ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿಶೇಷ ಉಪನ್ಯಾಸವನ್ನು ವಕೀಲರಾದ ಶ್ರೀಮತಿ ಶಿವಲೀಲಾ ಅವರು "ಬಲಿಯಾದವಳಿಂದ ವಿಜಯನಿ ಯಾಗುವವರೆಗೆ ಕಾನೂನು ಜಾಗೃತಿ "ವಿಷಯ ಕುರಿತು ಮಾತನಾಡಿ ಭಾರತೀಯ ಸಂವಿಧಾನದಲ್ಲಿ ಮಹಿಳೆಯರಿಗಾಗಿ ಅನೇಕ ಕಾನೂನುಗಳಿವೆ. ಮಹಿಳೆಯರಿಗೆ ಹಾಗೂ ಪುರುಷರಿಗೂ ಕೂಡ ಈ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಸಮಾಜದಲ್ಲಿ ಭದ್ರತೆ ಗೆ ಮಹತ್ವ ಕೊಡದಿದ್ದರೆ ಪುರುಷರಿಗಿಂತ ಮಹಿಳೆಯ ಸರಾಸರಿ ಸಂಖ್ಯೆ ಕಡಿಮೆಯಾಗುತ್ತದೆ. ಆದ್ದರಿಂದ ಅವಳಿಗೆ ಮಹತ್ವ ಕೊಡುವುದರ ಮೂಲಕ  ಬ್ರೂಣ ಹತ್ಯೆ, ವರದಕ್ಷಿಣೆ, ಬಾಲ್ಯ ವಿವಾಹ, ಮೂಢನಂಬಿಕೆಗಳಂತಹ ಪದ್ಧತಿಗಳನ್ನು ರದ್ದುಪಡಿಸುವುದರ ಮೂಲಕ ಮಹಿಳೆಯರ ಸಂಖ್ಯೆ ಪುರುಷರು ಸರಾಸರಿ ಗೆ ಅನುಗುಣವಾಗಿ ನೋಡಿಕೊಳ್ಳಬೇಕಾಗಿದೆ. ಹಾಗೂ ಮದುವೆಯಾದ ಗಂಡು, ಹೆಣ್ಣನ್ನು ಸರಿಯಾಗಿ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಒಳಗೆ ಕಾನೂನು ಪ್ರಕಾರ ಜೀವನಾಂಶ ಕೊಡಬೇಕು. ಹಾಗೂ ಅವಳನ್ನು ಸುರಕ್ಷಿತವಾಗಿ ಬದುಕಲು ಬಿಡಬೇಕು ಆಗ ಮಾತ್ರ ಕಾನೂನುಗಳ ಸರಿಯಾದ ಬಳಕೆಯಾಗುತ್ತದೆ ಎಂದರ್ಥ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ. ಕೆ ಮಲ್ಲಿಕಾರ್ಜುನ ಅವರು ಮಾತನಾಡಿ ಮಹಿಳೆ ರಕ್ಷಿತವಾಗಿ ಬದುಕಲು ಭಾರತೀಯ ಕಾನೂನು ಸಾಕಷ್ಟು ಬಲಿಷ್ಠವಾಗಿದೆ. ನಿಮಗೆ ಯಾರಿಂದನಾದರೂ ಅನ್ಯಾಯವಾದಾಗ ಅವುಗಳನ್ನು ಬಳಸಿಕೊಂಡು ಕಾನೂನಾತ್ಮಕವಾಗಿ ನಿಮಗೆ ಸಿಗಬೇಕಾದ ಸೌಲಭ್ಯಗಳನ್ನು ರಕ್ಷಣೆಯನ್ನು ಪಡೆದುಕೊಂಡು ಸುರಕ್ಷಿತ ಜೀವನ ಸಾಗಿಸಲು ನೀವು ಕಾನೂನಿನ ರಕ್ಷಣೆ ಪಡೆದುಕೊಳ್ಳಬೇಕು ಹಾಗೂ ಎಲ್ಲರಿಗೂ ಬದುಕಲು ಹಕ್ಕು ಎಲ್ಲರಿಗೂ ಇದೆ ಎಂದು ಕರೆ ನೀಡಿದರು.

 ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ವಿದ್ಯಾರ್ಥಿನಿಯರು,ಬೋಧಕ ಹಾಗೂ  ಬೋಧಕೇತರ ಸಿಬ್ಬಂದಿಯವರು  ಭಾಗವಹಿಸಿದ್ದರು.

ವಿದ್ಯಾರ್ಥಿನಿಯರಿಂದ ಹೆಣ್ಣು ಭ್ರೂಣ ಹತ್ಯೆ,  ಮದ್ಯಪಾನದಿಂದ ಆಗುವ ಪರಿಣಾಮಗಳು ಹಾಗೂ ಇನ್ನಿತರ ಸಾಮಾಜಿಕ ಸಮಸ್ಯೆಗಳನ್ನು ಒಳಗೊಂಡ ವಿದ್ಯಾರ್ಥಿನಿಯರ ನಾಟಕ ಪ್ರದರ್ಶನ ಸ್ಪರ್ಧೆಯನ್ನು  ಆಯೋಜಿಸಲಾಗಿತ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ