Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಗವಾಡದಲ್ಲಿ ಸಂಭ್ರಮದ ಕಾರ ಹುಣ್ಣಿಮೆ

ಕಾಗವಾಡ: ಕರ್ನಾಟಕ ಹಾಗೂ ಮಹಾರಾಷ್ಟçದ ಗಡಿಭಾಗವಾದ ಕಾಗವಾಡ ಪಟ್ಟಣದ ಐತಿಹಾಸಿಕ ಕಾರಹುಣ್ಣಿಮೆ ಬುಧವಾರ ದಿ: ೯ ರಂದು ಸಾಯಂಕಾಲ ಜರುಗಿತು. ಇದರಲ್ಲಿ ಪಟ್ಟಣದ ಗೌಡರ ಮನೆತನದ ಎತ್ತು ಪ್ರಥಮವಾಗಿ ಕರಿ ಹರಿಯುವಲ್ಲಿ ಯಶಸ್ವಿಯಾಯಿತು.


 ಬೆಳಿಗ್ಗೆಯಿಂದ ಕರವ ಮನೆತನದ ಯುವಕನೋರ್ವ ಬಾಳಬಟ್ಟಲವೊಂದನ್ನು ಹಿಡಿದುಕೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯವೃಂದಗಳೊಂದಿಗೆ ಮೆರವಣಿಗೆ ಮೂಲಕ ಎಲ್ಲ ದೇವಾಲಯಗಳಿಗೆ ಪೂಜೆ ಸಲ್ಲಿಸುತ್ತಾ ಸಾಯಂಕಾಲ ಗ್ರಾಮ ಪಂಚಾಯತ ಎದುರಿಗೆ ೧೫ ಅಡಿ ಎತ್ತರದ ಮುಳ್ಳಿನ ಬನ್ನಿಯ ಕಂಟಿಯನ್ನು ಒಟ್ಟಿ ಅದರ ಮೇಲಿಂದ ಮೂರು ಎತ್ತುಗಳನ್ನು ಓಡಿಸಲಾಯಿತು. ಇದರಲ್ಲಿ ಗೌಡರ ಮನೆತನದ ಎರಡು ಎತ್ತುಗಳು ಹಾಗೂ ಕರವ ಮನೆತನದ ಒಂದು ಎತ್ತು ಪಾಲ್ಗೊಂಡಿತ್ತು.


 ಈ ಕರಿ ಹರಿಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟçದ ಸಾವಿರಾರು ಜನರು ವಿಕ್ಷಿಸಲು ಆಗಮಿಸಿದ್ದು, ಈ ಕರಿ ಹರಿಯುವ ಉಸ್ತುವಾರಿಯನ್ನು ಸಮೀರ ಪಟವರ್ಧನ ಸರಕಾರ ಅವರ ನೇತೃತ್ವದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ತಹಸೀಲ್ದಾರ ರವೀಂದ್ರ ಹಾದಿಮನಿ, ಜ್ಯೋತಿಕುಮಾರ ಪಾಟೀಲ, ಸೌರಭ ಪಾಟೀಲ, ಅಜೀತ ಕರವ, ಪದ್ಮಾಕರ ಕರವ,ಕಾಕಾ ಪಾಟೀಲ, ಪ್ರಕಾಶ ಪಾಟೀಲ, ಆದಿನಾಥ ಕರವ, ರಾಜು ಕರವ, ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.


 ಯಾವುದೇ ಅಹಿತಕರ ಘಟನೆ ನಡೆಯದಂತೆ ಅಥಣಿ ಡಿ.ವಾಯ್.ಎಸ್.ಪಿ ಪ್ರಶಾಂತ ಮುನ್ನೋಳ್ಳಿ ನೇತೃತ್ವದಲ್ಲಿ ಸಿ.ಪಿ.ಐ ಸಂತೋಷ ಹಳ್ಳೂರ ಪಿಎಎಸ್‌ಐ ಗಂಗಾ ಬಿರಾದಾರ,ಗಿರಮಲ್ಲಪ್ಪ ಉಪ್ಪಾರ. ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.


 ಕಾರ ಹುಣ್ಣಿಮೆಯ ಕರಿ ಹರಿಯುವುದೆಂದರೆ ರೈತರಿಗೆ ಸಡಗರವೋ ಸಡಗರ ಇದು ರೈತನ ಬದುಕಿಗೆ ಹೊಸತನವನ್ನು ತರುವ ಹಬ್ಬ. ಕರ್ನಾಟಕದಾದ್ಯಂತ ಕಾರ ಹುಣ್ಣಿಮೆಯನ್ನು ಆಚರಿಸುತ್ತಾರೆ. ಆದರೆ ಕಾಗವಾಡದಲ್ಲಿ ಈ ಹಬ್ಬವನ್ನು ಆಚರಿಸುವ ರೀತಿ ಈ ಹಬ್ಬದ ಪರಿಕಲ್ಪನೆ ಬೇರೆಯೇ ಇದೆ. ಉತ್ತರ ಕರ್ನಾಟಕದಲ್ಲಿ ಕಾರ ಹುಣ್ಣಿಮೆಯು ದನಗಳ ಹಬ್ಬವೆಂದು ಪ್ರಸಿದ್ಧವಾದರೆ, ಕಾಗವಾಡದಲ್ಲಿ ಇದು ಜನರ ಹಬ್ಬ ಎಂದು ಆಚರಿಸುತ್ತಾರೆ.


 ಪ್ರತಿ ವರ್ಷ ಶ್ರಾವಣ ಮಾಸದ ಮೂಲಾ ನಕ್ಷತ್ರದ ದಿನ ಇಲ್ಲಿ ಕರಿ ಹರಿಯುವುದು ವಿಶಿಷ್ಟವಾದ ಒಂದು ಸಾಂಸ್ಕೃತಿಕ ಹಬ್ಬ. ಈ ಹಬ್ಬದ ದಿನ ಕನಾಟಕ ಹಾಗೂ ಮಹಾರಾಷ್ಟçದ ಗಡಿ ಭಾಗದ, ಮಿರಜ, ಸಾಂಗಲಿ, ಸಾತಾರಾ, ಕೊಲ್ಲಾಪೂರ, ಇಚಲಕರಂಜಿ, ಜಮಖಂಡಿ, ಅಥಣಿ, ಚಿಕ್ಕೋಡಿ, ರಾಯಬಾಗ, ಗೋಕಾಕ ಸೇರಿದಂತೆ ಗಡಿಭಾಗದ ಎಲ್ಲ ನಗರ ಪಟ್ಟಣಗಳಿಂದ ಸಾವಿರಾರು ಜನರು ಆಗಮಿಸುತ್ತಾರೆ.


 ಸಾಯಂಕಾಲ ಗ್ರಾಮ ಪಂಚಾಯತ ಆವರಣದಲ್ಲಿ ಜನಸ್ತೋಮ ನೆರದಿದ್ದು, ಎತ್ತುಗಳಿಗೆ ಮೈತುಂಬ ಕೆಂಪು ಬಣ್ಣ ಬಳಿದು, ಒಂದೊAದು ಎತ್ತಿಗೆ ೫ ಜನರಂತೆ ೧೫ ಜನ ಬಲಿಷ್ಠ ಯುವಕರು ಬರಿ ಮೈಯಿಂದ ವಾದ್ಯ ವೃಂದಗಳೊಂದಿಗೆ ಕೇ ಕೇ ಹಾಕುತ್ತಾ ಬರುತ್ತಿದ್ದಂತೆ ಪೋಲಿಸರ ಬಂದೂಕಿನಿಂದ ಸಪ್ಪಳವಾಯಿತೆಂದರೆ ಸಾಕು ನಾ ಮುಂದು, ತಾ ಮುಂದು ಎಂದು ಎತ್ತುಗಳನ್ನು ಓಡಿಸುತ್ತಾರೆ. ಯುವಕರು ತಮ್ಮ ಜೀವದ ಹಂಗು ತೊರೆದು ಪಾಲ್ಗೊಂಡಿದ್ದರು. ಯಾವ ಎತ್ತು ಕರಿ ಹರಿಯಿತೆಂಬ ಕುತುಹಲ ನೋಡುಗರ ಕಣ್ಣಲ್ಲಿ ಮೋಡಿ ಮಾಡುವುದರಲ್ಲಿಯೇ ಕರಿ ಹರಿದು ಮುಗಿಯುವುದು. ಅದಾದ ಬಳಿಕ ಮತ್ತೇ ಗೌಡರ ೨ ಎತ್ತು ಮತ್ತು ಕರವ ಮನೆತನದ ಹಿರಿಯರು ಚಾವಡಿಗೆ ಬಂದು ಪಟವರ್ಧನ ಸರ್ಕಾರ ಇವರಿಗೆ ಮುಜರೆ ಕೊಟ್ಟು ಎಲೆ, ಅಡಿಕೆ ತೆಗೆದುಕೊಂಡು ಮರಳಿ ಹೋಗುತ್ತಾರೆ.


 ಗೌಡರ ಮನೆತನದ ಪೋಲಿಸ ಪಾಟೀಲರಾದ ದಿ.ಜೋತಗೌಡಾ ಪಾಟೀಲರ ಮನೆತನಕ್ಕೆ ಹಿರಿತನವಿದೆ. ಇವರ ಎರಡು ಎತ್ತುಗಳು ಹಾಗೂ ಕರವ ಮನೆತನದ ಒಂದು ಎತ್ತು ಹಾಗೂ ಗ್ರಾಮಸ್ಥರೆಲ್ಲರೂ ಕೂಡಿಕೊಂಡು ಶೃದ್ಧೆ, ಭಕ್ತಿಯಿಂದ ಜಾತಿ ಮತ ಭೇದ ಮರೆತು, ಕಾರ ಹುಣ್ಣಿಮೆಯನ್ನು ವಿಶಿಷ್ಟ ರೀತಿಯಿಂದ ಆಚರಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ