Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಶೀಘ್ರ ಚಾಲನೆ: ಜಿ.ಪರಮೇಶ್ವರ್

ಬೆಂಗಳೂರು: ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೆ ಬಂದಿತು. ಕಳೆದ ಎರಡು ತಿಂಗಳು ಸರ್ಕಾರದ ಯಾವುದೇ ರೀತಿಯ ಕೆಲಸ ಕಾರ್ಯಗಳು ಸಾಧ್ಯವಾಗಿಲ್ಲ. ಈಗ ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಚಾಲನೆ ನೀಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಹಿರಿಯರನ್ನು ಪರಿಗಣಿಸುತ್ತಿಲ್ಲ ಎಂಬ ಆರೋಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಆ ರೀತಿ ಏನು ಇಲ್ಲ. ಸಂದರ್ಭ ಅನುಸಾರ ಅಂತಹ ಮಾತುಗಳನ್ನು ಹೇಳಿರುತ್ತೀವಿ. ನಮ್ಮಲ್ಲಿ ಒಳ ಜಗಳಗಳು ಆಗಿಲ್ಲ. ತುಮಕೂರಿನ ಶಾಸಕ ಸುರೇಶ್‌ಗೌಡ, ನಮ್ಮ‌ ಪಕ್ಷದಲ್ಲಿನ ಒಳ ಜಗಳವನ್ನು ಎಲ್ಲಿ ನೋಡಿದ್ದಾರೋ, ಎಲ್ಲಿ ಆಗಿದೆಯೋ ಅವರಿಗೆ ಗೊತ್ತು. ಯಾವುದಾದರು ವಿಚಾರಗಳು ಬಂದಾಗ ಒಬ್ಬೊಬ್ಬರು ಅಭಿಪ್ರಾಯಗಳನ್ನು ಹಂಚಿಕೊಂಡಿರುವುದು ಸಹಜ. ಅಂತಹ ಸಂದರ್ಭದಲ್ಲಿ ಬಿಟ್ಟರೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಮ್ಮ ಪಕ್ಷದಲ್ಲಿ ಯಾವುದೇ ಒಳ ಜಗಳಗಳಿಲ್ಲ ಎಂದು ಸ್ಪಷ್ಟಪಡಿಸಿದರು.

ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರಗಳನ್ನು ಹಂಚಿಕೊಳ್ಳಲು ಕ್ಯಾಬಿನೆಟ್ ಇದೆ. ಪಕ್ಷಕ್ಕೆ ಸಂಬಂಧಪಟ್ಟ ತೀರ್ಮಾನಗಳನ್ನು ಕೈಗೊಳ್ಳಲು ಕೋರ್‌ಕಮಿಟಿ ಸಭೆ ಮಾಡಬಹುದು. ಇದಕ್ಕೆ ಅವಕಾಶಗಳನ್ನು ಪಕ್ಷದ ಅಧ್ಯಕ್ಷರು ಕೊಡಬೇಕಾಗುತ್ತದೆ. ಸಂದರ್ಭ ಬಂದಾಗ ಅವರು ಮಾಡುತ್ತಾರೆ ಎಂದರು. ಪ್ರಬಲ ಸಚಿವರ ಕ್ಷೇತ್ರಗಳಲ್ಲಿ ನಿರೀಕ್ಷಿತ ಫಲಿತಾಂಶ ಬಾರದಿರುವುದಕ್ಕೆ ಸಮಿತಿ ರಚನೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನನ್ನ ಜಿಲ್ಲೆ ಸೇರಿದಂತೆ 17 ಜಿಲ್ಲೆಗಳಲ್ಲಿ ಸೋತಿದ್ದೇವೆ. ಈ ಬಗ್ಗೆ ಪರಿಶೀಲನೆ ಮಾಡುವ, ಆತ್ಮಾವಲೋಕನಾ ಮಾಡಿಕೊಳ್ಳುವ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ನಾವೆಲ್ಲ ಅದನ್ನು ಒಪ್ಪುತ್ತೇವೆ. ಮುಂದೆ ನಮಗೆ ಏನು ಸಲಹೆ ಮಾಡುತ್ತಾರೆ. ಅದನ್ನು ಪಾಲನೆ ಮಾಡುವ ಪದ್ಧತಿ ನಮ್ಮ ಪಕ್ಷದಲ್ಲಿದೆ ಎಂದು ಹೇಳಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*