Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಡಿಗಿ ಚನ್ನಪ್ಪ ವೃತ್ತ ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಲಾಗುತ್ತಿದೆ: ಶಾಸಕ ನಾರಾ ಭರತ್ ರೆಡ್ಡಿ






ಬಳ್ಳಾರಿ, ಜೂ.25: ಗಡಿಗಿ ಚನ್ನಪ್ಪ ವೃತ್ತದ ಕಾಮಗಾರಿಯನ್ನು ಅತ್ಯಂತ ಉತ್ತಮ ಗುಣಮಟ್ಟದಿಂದ ನಿರ್ಮಾಣ ಮಾಡಲಾಗುತ್ತಿರುವುದರಿಂದ ವಿಳಂಬ ಆಗುತ್ತಿದೆ ವಿನಹ ಬೇರೆ ಯಾವ ಕಾರಣಗಳಿಲ್ಲ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.


ಬುಧವಾರ ಬೆಳಿಗ್ಗೆ ಸಲಾಂ ಬಳ್ಳಾರಿ ಅಭಿಯಾನದಂಗವಾಗಿ ನಗರದ 16ನೇ ವಾರ್ಡಿನ ಶ್ರೀರಾಂಪುರ ಕಾಲೋನಿಗೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು.


ಗಡಿಗಿ ಚನ್ನಪ್ಪ ವೃತ್ತ ನಗರದ ಹೃದಯ ಭಾಗದಲ್ಲಿದೆ, ಜನರಿಗೆ ಒಂದೆರಡು ತಿಂಗಳು ಸಂಚಾರಕ್ಕೆ ತೊಂದರೆ ಆಗುತ್ತಿರುವುದು ನಿಜ, ಹಾಗಂತ ಅವಸರದಿಂದ ಕಾಮಗಾರಿಯನ್ನು ಮಾಡಿ, ತದನಂತರ ಅದೇ ಸಮಸ್ಯೆಯಾಗಿ ರೂಪ ತಾಳಬಾರದು ಎಂಬ ಉದ್ಧೇಶ ನಮ್ಮದು ಎಂದು ತಿಳಿಸಿದರು.


ಎರಡು ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ, ಸಾರ್ವಜನಿಕರು ಸಹಕರಿಸಬೇಕೆಂದು ಹೇಳಿದ ಅವರು, ಸಿಎಂ-ಡಿಸಿಎಂ ಅವರನ್ನು ಕರೆಸಿ ಕಾಮಗಾರಿಯನ್ನು ಉದ್ಘಾಟಿಸಲಾಗುವುದು ಎಂದರು.


*ಹಿರಿಯ ಶಾಸಕರ ಆಕ್ಷೇಪಕ್ಕೆ ಕಾರಣ ಗೊತ್ತಿಲ್ಲ:* ಶಾಸಕ ಬಿ.ಆರ್.ಪಾಟೀಲ್, ರಾಜು ಕಾಗೆ ಅವರು ಅನುದಾನ ಸಂಬಂಧಿಸಿ ನೀಡಿರುವ ಹೇಳಿಕೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಾಸಕ ನಾರಾ ಭರತ್ ರೆಡ್ಡಿ; ಅನುದಾನ ಬಿಡುಗಡೆಗೆ ಸಂಬಂಧಿಸಿ ಹಿರಿಯ ಶಾಸಕರು ವ್ಯಕ್ತಪಡಿಸಿರುವ ಹೇಳಿಕೆಗಳಿಗೆ ಕಾರಣ ಏನೆಂದು ನನಗೆ ಗೊತ್ತಿಲ್ಲ, ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸುವಷ್ಟು ನಾನು ದೊಡ್ಡವನಲ್ಲ, ಆದರೆ ಬಳ್ಳಾರಿ ನಗರ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ರಾಜ್ಯ ಸರ್ಕಾರದಿಂದ ಬಿಡುಗಡೆಯಾಗಿದೆ, ಕುಡಿಯುವ ನೀರು ಯೋಜನೆ, ರಸ್ತೆ, ಮಸೀದಿ, ಮಂದಿರ, ಒಳ ಚರಂಡಿ ಹೀಗೆ ಹತ್ತು ಹಲವು ಕಾಮಗಾರಿಗಳಿಗಾಗಿ ಸಿಎಂ-ಡಿಸಿಎಂ-ಜಿಲ್ಲಾ ಉಸ್ತುವಾರಿ ಸಚಿವರು ಸಾಕಷ್ಟು ಅನುದಾನ ನೀಡಿದ್ದಾರೆ ಎಂದರು.


ಸಲಾಂ ಬಳ್ಳಾರಿ ಅಭಿಯಾನಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ, ಸಮಸ್ಯೆ ಆಧರಿಸಿ ಯೋಜನೆಗಳನ್ನು ರೂಪಿಸುತ್ತಿದ್ದೇವೆ, ನೂರಕ್ಕೆ ನೂರರಷ್ಟಾಗದಿದ್ದರೂ ಗರಿಷ್ಠ ಪ್ರಮಾಣದಲ್ಲಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.


ಈ ಸಂದರ್ಭ ಮಾಜಿ ಮೇಯರ್, ಪಾಲಿಕೆಯ ಸದಸ್ಯೆ ಎಂ.ರಾಜೇಶ್ವರಿ, ಜಬ್ಬಾರ್, ನೂರ್ ಮೊಹಮ್ಮದ್, ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು, ಮಂಜುಳಾ, ಹೊನ್ನಪ್ಪ, ಹಗರಿ ಗೋವಿಂದ, ಚಂಪಾ ಚವ್ಹಾಣ್, ಯಶೋಧಾ, ಸ್ಥಳೀಯ ಮುಖಂಡರಾದ ಬಾಲರಾಜ್, ನಾಗರಾಜ, ಅಭಿರಾಮ್, ರಾಮಚರಣ್, ರಾಕಿ, ದೇವಣ್ಣ, ಯಲ್ಲಪ್ಪ, ವಿನೋದ್, ಅರವಿಂದ ಮೊದಲಾದವರು ಹಾಜರಿದ್ದರು.


ಶಾಸಕ ನಾರಾ ಭರತ್ ರೆಡ್ಡಿ ವಾರ್ಡಿನಾದ್ಯಂತ ಸಂಚರಿಸಿ ಜನರ ಸ್ಥಳೀಯ ಸಮಸ್ಯೆಗಳನ್ನು ಆಲಿಸಿದರು. ಕೆಲವು ಸಮಸ್ಯೆಗಳಿಗೆ ಪರಿಹಾರ ದೊರಕಿಸಿದರು. ಮಹಾನಗರ ಪಾಲಿಕೆಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ