LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಪಾಲ್ತೂರಿನಲ್ಲಿ ಗಡಿನಾಡು ಸಾಂಸ್ಕೃತಿಕ ಸಂಭ್ರಮ: ತತ್ವಪದ, ಜಾನಪದ ಕಲಾ ಪ್ರದರ್ಶನ

*ಪಾಲ್ತೂರು20:..ಶ್ರೀ ಸಂತ ಶಿಶುನಾಳ ಶರೀಪರ ತತ್ವಪದ ಜಾನಪದ ಸಂಸ್ಕೃತಿ ಕಲಾ ಟ್ರಸ್ಟ್ ರಿ. ಶಂಕರಬಂಡೆ ಇವರ ವತಿಯಿಂದ "ಗಡಿನಾಡು ಸಾಂಸ್ಕೃತಿಕ ಸಂಭ್ರಮ" ಕಾರ್ಯಕ್ರಮವನ್ನು ಸೋಮವಾರ ಕರೆ ಶಂಕರೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಪಂಚಾಂಗ ಕರ್ತ ಶ್ರೀ ನಾಗರಾಜ ಸ್ವಾಮಿ ಉದ್ಘಾಟಿಸಿದರು. ಮಾತನಾಡಿದ ಅವರು ಗಡಿನಾಡಿನಲ್ಲಿ ಸಂಗೀತ, ನಾಟಕ, ತತ್ವಪದಗಳು ಹಾಗೂ ಜಾನಪದ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ಸಂತೋಷದ ವಿಷಯವಾಗಿದೆ. ಇನ್ನೂ ಮುಂದೆ ಗಡಿಭಾಗದಲ್ಲಿ ಹೆಚ್ಚಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಊರಿನ ಮುಖಂಡರಾದ ಹೊನ್ನರ ಸ್ವಾಮಿ, ನಾಗೇಂದ್ರ, ರಾಧಸ್ವಾಮಿ, ಬಿ. ಮಾನಯ್ಯ ಸೇರಿದಂತೆ ಹಲವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ತದನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬಿ. ನಾಗರಾಜ ಅವರ ತಂಡದಿಂದ ರಂಗಗೀತೆಗಳು, ಹೊನ್ನರಮ್ಮ ಅವರ ತಂಡದಿಂದ ತತ್ವಪದಗಳು, ಭೀಮನಗೌಡ ಅವರ ತಂಡದಿಂದ ವಚನ ಗಾಯನ ಪ್ರದರ್ಶನಗೊಂಡವು. ಕಲಾವಿದರ ಪ್ರದರ್ಶನಕ್ಕೆ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಗಡಿನಾಡಿನ ಜನರಲ್ಲಿ ಕನ್ನಡ ಸಂಸ್ಕೃತಿ ಮತ್ತು ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಟ್ರಸ್ಟ್ ಪದಾಧಿಕಾರಿಗಳು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್