LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಗಲಿಬಿಲಿ ಗೋವಿಂದ ಇದು ಡಾ.ಸಂಗಮೇಶ ಉಪಾಸೆ  ಚಿತ್ರ


       ಕಿರುತೆರೆಯ ’ಸಿಲ್ಲಿ ಲಲ್ಲಿ’ ಧಾರವಾಹಿಯಲ್ಲಿ ’ಅರ್ಥವಾಯಿತು ಬಿಡಿ’ ಎಂದು ನಗಿಸುತ್ತಿದ್ದ ಡಾ.ಸಂಗಮೇಶ ಉಪಾಸೆ ಸಾಕಷ್ಟು ಚಿತ್ರಗಳಲ್ಲಿ ಕಾಮಿಡಿ ರೋಲ್‌ಗಳಲ್ಲಿ ಕಾಣಿಸಿಕೊಂಡಿದ್ದರು. ಇದೆಲ್ಲಾದರ ಅನುಭವದಿಂದ ಹೊಸ ಪ್ರಯತ್ನ, ಸಾಧನೆ ಎನ್ನುವಂತೆ ಈಗ 'ಗಲಿಬಿಲಿ ಗೋವಿಂದ’ ಚಿತ್ರದ ಮುಖಾಂತರ ನಿರ್ದೇಶನ ಜವಬ್ದಾರಿಯನ್ನು ಹೊತ್ತುಕೊಳ್ಳುವ ಜತೆಗೆ ಕಥೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

     ಇವರ ಶ್ರಮಕ್ಕೆ ಬಿಜಾಪುರ ಮೂಲದ ಸಮಾನ ಮನಸ್ಕರುಗಳಾದ ಅಂಬರೀಷ ಬಣಜಿಗೇರ, ಸಂದೀಪ್ ರಾಠೋಡ್, ಚಿದಾನಂದ ಪರಗೊಂಡ, ಮಡಿವಾಳಪ್ಪ.ಎಮ್.ಗೋಗಿ ಮತ್ತು ಚಿದಾನಂದ ಪತ್ತಾರ ಜಂಟಿಯಾಗಿ ಬಂಡವಾಳ ಹೂಡುತಿದ್ದಾರೆ. ಶೀರ್ಷಿಕೆಗೆ  ’ನಗುವವರಿಗೆ ಮಾತ್ರ’ ಎಂಬ ಪಂಚಿಂಗ್ ಅಡಿಬರಹ ವಿಶೇಷವಾಗಿದೆ.

      ಚಡಚಣ ಸಮೀಪ ಇರುವ ಇಂಚಗೇರಿ ಮಠದ ಆವರಣದಲ್ಲಿ ಅದ್ದೂರಿಯಾಗಿ ಮುಹೂರ್ತ ಸಮಾರಂಭ ನಡೆಯಿತು. ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಸಂಗಮೇಶ್ ಸಾಧನೆ ಕೊಂಡಾಡಿ ತಂಡಕ್ಕೆ ಶುಭ ಹಾರೈಸಿದರು.

        ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು "ಗ್ರಾಮೀಣ ಭಾಗದಲ್ಲಿ ಅನಾಥ ಮಕ್ಕಳ ಕುರಿತು, ಅವರ ಸಮಸ್ಯೆ ಮೇಲೆ ಬೆಳಕು ಚೆಲ್ಲುವ ಹಾಗೂ ಮಕ್ಕಳು ಇದ್ದವರು, ಇಲ್ಲದವರ ಪೋಷಕರ ಪಾಡು ಹೇಗಿರುತ್ತೆ? ಎಂಬುದನ್ನು ಹಾಸ್ಯ ಧಾಟಿಯಲ್ಲಿ ತೋರಿಸುತ್ತಾ, ಕೊನೆಗೆ ಎಲ್ಲರಿಗೂ ಮನಮುಟ್ಟುವಂತಹ ಸಂದೇಶ ಹೇಳಲಾಗುತ್ತಿದೆ. ಹೂರ್ತಿ, ಅಂಜುಟಗಿ, ಬಿಜಾಪುರ, ಇಂಡಿ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗುವುದು. ಕಲಾವಿದರ ವಿವರಗಳನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು" ಎಂದು  ಡಾ.ಸಂಗಮೇಶ ಉಪಾಸೆ ಮಾಹಿತಿ ಬಿಚ್ಚಿಟ್ಟರು.

       ಸಂಗೀತ ಪಳನಿ.ಡಿ.ಸೇನಾಪತಿ, ಛಾಯಾಗ್ರಹಣ ಆನಂದ ದಿಂಡ್ವರ್, ಸಂಕಲನ ರವಿತೇಜ್.ಸಿಹೆಚ್, ನೃತ್ಯ ಮಾಲೂರು ಶ್ರೀನಿವಾಸ್ ಅವರದಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ