ಅವರ ಅಂತಿಮ ಯಾತ್ರೆ ಇಂದು ಬೆಳಗ್ಗೆ 8 ಗಂಟೆಗೆ ಅವರ ನಿವಾಸದಿಂದ ಪ್ರಾರಂಭವಾಗಲಿದ್ದು, ವೀರ್ವಾಲ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ನೀಲಂಬೆನ್ ಪಾರಿಖ್ ನಿಜವಾದ ಗಾಂಧಿವಾದಿ. ಯಾವಾಗಲೂ ಮಹಿಳಾ ಕಲ್ಯಾಣ ಮತ್ತು ಮಾನವ ಸೇವೆಗೆ ಸಮರ್ಪಿತರಾಗಿದ್ದರು.
ಜನವರಿ 30, 2008 ರಂದು ಮಹಾತ್ಮ ಗಾಂಧಿಯವರ 60 ನೇ ಪುಣ್ಯತಿಥಿಯಂದು, ನೀಲಂಬೆನ್ ಪಾರಿಖ್ ಅವರು ಬಾಪು ಅವರ ಕೊನೆಯ ಚಿತಾಭಸ್ಮವನ್ನು ಗೌರವಯುತವಾಗಿ ವಿಸರ್ಜಿಸಿದರು. ಈ ಸಂದರ್ಭದಲ್ಲಿ ಗಾಂಧೀಜಿಯವರ ಅನುಯಾಯಿಗಳು ಮತ್ತು ಕುಟುಂಬ ಸದಸ್ಯರು ಸಹ ಅವರಿಗೆ ಗೌರವ ಸಲ್ಲಿಸಿದ್ದರು. ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗ ತರಬೇತಿ ನೀಡುವುದು ಇದರ ಉದ್ದೇಶವಾಗಿತ್ತು.
ತಾಯಿ ಯಾವುದೇ ಕಾಯಿಲೆಗಳಿಂದ ಬಳಲುತ್ತಿರಲಿಲ್ಲ ಆದರೆ ಕಳೆದ ಕೆಲವು ದಿನಗಳಿಂದ, ಅವರು ವಯಸ್ಸಿನ ಕಾರಣದಿಂದಾಗಿ ಊಟ ಮಾಡುವುದನ್ನು ಬಹುತೇಕ ತ್ಯಜಿಸಿದ್ದರು. ಇಂದು ಯಾಕೋ ಆಸ್ಪತ್ರೆಗೆ ಹೋಗುವ ಮನಸ್ಸಾಗಲಿಲ್ಲ, ನಾನು ಅವರ ಪಕ್ಕದಲ್ಲಿ ಕುಳಿತು ಅವರ ಕೈ ಹಿಡಿದುಕೊಂಡೆ. ಕ್ರಮೇಣ ಅವರ ನಾಡಿಮಿಡಿತ ಕಡಿಮೆಯಾಗುತ್ತಿರುವುದನ್ನು ಗಮನಿಸಿದೆ.
ಯಾವುದೇ ನೋವಿಲ್ಲದೆ ಅಮ್ಮ ಕಣ್ಮುಚ್ಚಿದ್ದಾರೆ ಎಂದು ಮಗ ಸಮೀರ್ ಹೇಳಿದ್ದಾರೆ. ವರು ಕುಟುಂಬದ ಮೇಲೆ ಗಾಂಧಿವಾದಿ ಸಿದ್ಧಾಂತಗಳನ್ನು ಹೇರದಿದ್ದರೂ, ಅವರ ವೈಯಕ್ತಿಕ ಮೌಲ್ಯಗಳೇ ಅವರ ಜೀವನದಲ್ಲಿ ಅವರಿಗೆ ಸ್ಫೂರ್ತಿ ನೀಡಿತು ಎಂದು ಡಾ. ಪಾರಿಖ್ ಹೇಳಿದರು.