Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿಯವರ ಮರಿ ಮೊಮ್ಮಗಳು ನೀಲಂಬೆನ್ ಪಾರಿಖ್ ನಿಧನ

ಗುಜರಾತ್, ಏಪ್ರಿಲ್ 2: ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ನೀಲಂಬೆನ್ ಪಾರಿಖ್ಅವರು ನಿಧನರಾಗಿದ್ದಾರೆ. ನವಸಾರಿಯಲ್ಲಿ ಕೊನೆಯುಸಿರೆಳೆದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ನೀಲಂಬೆನ್  ಮಹಾತ್ಮ ಗಾಂಧಿಯವರ ಪುತ್ರ ಹರಿದಾಸ್ ಗಾಂಧಿಯವರ ಮೊಮ್ಮಗಳು. ಅವರು ನವಸಾರಿ ಜಿಲ್ಲೆಯ ಅಲ್ಕಾ ಸೊಸೈಟಿಯಲ್ಲಿರುವ ತಮ್ಮ ಮಗ ಡಾ. ಸಮೀರ್ ಪಾರಿಖ್ ಅವರ ಮನೆಯಲ್ಲಿ ವಾಸಿಸುತ್ತಿದ್ದರು.





ಅವರ ಅಂತಿಮ ಯಾತ್ರೆ ಇಂದು ಬೆಳಗ್ಗೆ 8 ಗಂಟೆಗೆ ಅವರ ನಿವಾಸದಿಂದ ಪ್ರಾರಂಭವಾಗಲಿದ್ದು, ವೀರ್ವಾಲ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ನೀಲಂಬೆನ್ ಪಾರಿಖ್ ನಿಜವಾದ ಗಾಂಧಿವಾದಿ. ಯಾವಾಗಲೂ ಮಹಿಳಾ ಕಲ್ಯಾಣ ಮತ್ತು ಮಾನವ ಸೇವೆಗೆ ಸಮರ್ಪಿತರಾಗಿದ್ದರು.

ಜನವರಿ 30, 2008 ರಂದು ಮಹಾತ್ಮ ಗಾಂಧಿಯವರ 60 ನೇ ಪುಣ್ಯತಿಥಿಯಂದು, ನೀಲಂಬೆನ್ ಪಾರಿಖ್ ಅವರು ಬಾಪು ಅವರ ಕೊನೆಯ ಚಿತಾಭಸ್ಮವನ್ನು ಗೌರವಯುತವಾಗಿ ವಿಸರ್ಜಿಸಿದರು. ಈ ಸಂದರ್ಭದಲ್ಲಿ ಗಾಂಧೀಜಿಯವರ ಅನುಯಾಯಿಗಳು ಮತ್ತು ಕುಟುಂಬ ಸದಸ್ಯರು ಸಹ ಅವರಿಗೆ ಗೌರವ ಸಲ್ಲಿಸಿದ್ದರು. ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗ ತರಬೇತಿ ನೀಡುವುದು ಇದರ ಉದ್ದೇಶವಾಗಿತ್ತು.






ನೀಲಂಬೆನ್, ಹರಿಲಾಲ್ ಗಾಂಧಿ ಮತ್ತು ಅವರ ಪತ್ನಿ ಗುಲಾಬ್ ಅವರ ಐದು ಮಕ್ಕಳಲ್ಲಿ ಹಿರಿಯವರಾದ ರಾಮಿಬೆನ್ ಅವರ ಮಗಳು. ಅವರ ಮಗ ಸಮೀರ್ ಪಾರಿಖ್ ನವಸಾರಿಯಲ್ಲಿ ನೇತ್ರಶಾಸ್ತ್ರಜ್ಞರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪತಿ ದಿವಂಗತ ಯೋಗೇಂದ್ರಭಾಯಿ.

ತಾಯಿ ಯಾವುದೇ ಕಾಯಿಲೆಗಳಿಂದ ಬಳಲುತ್ತಿರಲಿಲ್ಲ ಆದರೆ ಕಳೆದ ಕೆಲವು ದಿನಗಳಿಂದ, ಅವರು ವಯಸ್ಸಿನ ಕಾರಣದಿಂದಾಗಿ ಊಟ ಮಾಡುವುದನ್ನು ಬಹುತೇಕ ತ್ಯಜಿಸಿದ್ದರು. ಇಂದು ಯಾಕೋ ಆಸ್ಪತ್ರೆಗೆ ಹೋಗುವ ಮನಸ್ಸಾಗಲಿಲ್ಲ, ನಾನು ಅವರ ಪಕ್ಕದಲ್ಲಿ ಕುಳಿತು ಅವರ ಕೈ ಹಿಡಿದುಕೊಂಡೆ. ಕ್ರಮೇಣ ಅವರ ನಾಡಿಮಿಡಿತ ಕಡಿಮೆಯಾಗುತ್ತಿರುವುದನ್ನು ಗಮನಿಸಿದೆ.

ಯಾವುದೇ ನೋವಿಲ್ಲದೆ ಅಮ್ಮ ಕಣ್ಮುಚ್ಚಿದ್ದಾರೆ ಎಂದು ಮಗ ಸಮೀರ್ ಹೇಳಿದ್ದಾರೆ. ವರು ಕುಟುಂಬದ ಮೇಲೆ ಗಾಂಧಿವಾದಿ ಸಿದ್ಧಾಂತಗಳನ್ನು ಹೇರದಿದ್ದರೂ, ಅವರ ವೈಯಕ್ತಿಕ ಮೌಲ್ಯಗಳೇ ಅವರ ಜೀವನದಲ್ಲಿ ಅವರಿಗೆ ಸ್ಫೂರ್ತಿ ನೀಡಿತು ಎಂದು ಡಾ. ಪಾರಿಖ್ ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ