Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರಂಭವಾದ ಗಣೇಶ್ ನೂತನ ಚಿತ್ರಕ್ಕೆ  ಅರಸು ಅಂತಾರೆ ನಿರ್ದೇಶನ    



     ರಾಮನವಮಿಯ ಶುಭದಿನದಂದು ಬಸವೇಶ್ವರ ನಗರದಲ್ಲಿರುವ ‌ಗಣೇಶನ ದೇವಸ್ಥಾನದಲ್ಲಿ ಎಸ್ ಎನ್ ಟಿ ಎಂಟರ್ಪ್ರೈಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು.

     ನಿರ್ಮಾಪಕ ರವಿ ಅವರ ಸಹೋದರಿಯರು 'ಪ್ರೊಡಕ್ಷನ್ ನಂ ೧' ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದರು. ನಿರ್ಮಾಪಕ ಉದಯ್ ಕೆ ಮೆಹ್ತಾ ಸೇರಿದಂತೆ ಸಾಕಷ್ಟು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

     "ಲವ್ ಇನ್ ಮಂಡ್ಯ' ಚಿತ್ರದ ನಂತರ ಒಂದು ದಶಕದ ಬಳಿಕ ಮತ್ತೆ ನಿರ್ದೇಶನ ಮಾಡುತ್ತಿದ್ದೇನೆ" ಎಂದು ಮಾತನಾಡಿದ ನಿರ್ದೇಶಕ ಅರಸು ಅಂತಾರೆ, "ಸಿನಿಮಾವನ್ನು ಅಂದುಕೊಂಡ ಹಾಗೆ ಮಾಡಬೇಕು ಎನ್ನುವುದು ನನ್ನ ಉದ್ದೇಶ. ಹಾಗಾಗಿ ಎರಡನೇ ಚಿತ್ರವನ್ನು ನಿರ್ದೇಶಿಸಲು ಇಷ್ಟು ಸಮಯವಾಯಿತು. ಈ ಚಿತ್ರದ ಕಥೆ ವಿಭಿನ್ನವಾಗಿದೆ. ಗಣೇಶ್ ಅವರು ಈವರೆಗೂ ಮಾಡಿರದ ಪಾತ್ರ ಹಾಗು ಕಥೆ ಅಂತ ಹೇಳಬಹುದು. ರಾಮನವಮಿ ಶುಭದಿನ ಚಿತ್ರಕ್ಕೆ ಚಾಲನೆ ದೊರಕಿದೆ. ಸದ್ಯದಲ್ಲೇ ಶೀರ್ಷಿಕೆ ಅನಾವರಣ ಮಾಡುತ್ತೇವೆ. ಗಣೇಶ್ ಅವರಿಗೆ ನಾಯಕಿಯಾಗಿ ಕನ್ನಡದವರೆ ಆದ ಹನುಮಾನ್ ಖ್ಯಾತಿಯ ಅಮೃತ ಅಯ್ಯರ್ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಜ್ ಸುಧೀ ಮುಂತಾದವರು ತಾರಾಬಳಗದಲ್ಲಿದ್ದಾರೆ. ರವಿ ಭದ್ರಾವತಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ನಾನು ಬರೆದಿರುವ ಚಿತ್ರಕಥೆಗೆ ಮಹೇಶ್ ದೇವ್ ಡಿ ಎನ್ ಪುರ ಹಾಗೂ ಸಂಭಾಷಣೆಗೆ ಕ್ರಾಂತಿ ಕುಮಾರ್ ಹಾಗೂ ಶೈಲೇಶ್ ಕುಮಾರ್ ಸಾಥ್  ನೀಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣ, ಅಕ್ಷಯ್ ಪಿ ರಾವ್ ಸಂಕಲನ ಹಾಗೂ ವಿಜಯ್ ರಾಕೇಶ್ ಕಶ್ಯಪ್ ಮತ್ತು ಕೀರ್ತಿ ಕೃಷ್ಣಪ್ಪ  ಸಹ ನಿರ್ದೇಶನವಿರುವ ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುವೆ" ಎಂದರು.

     "ಅರಸು ಅಂತಾರೆ ಅವರು ನನಗೆ 2019 ರಲ್ಲಿ ಕಥೆ ಹೇಳಲು ಭೇಟಿ ಮಾಡಿದ್ದರು. ಆನಂತರ ಕೋವಿಡ್ ಮುಂತಾದ ಕಾರಣದಿಂದ ಆಗ ಕಥೆ ಕೇಳಲು ಆಗಿರಲಿಲ್ಲ. ಇತ್ತೀಚೆಗೆ ಅವರು ಈ ಚಿತ್ರದ ಕಥೆ ಹೇಳಿದಾಗ ಕೇಳಿ ಬಹಳ ಇಷ್ಟವಾಯಿತು. ಮೂಲತಃ ಅವರು ಒಬ್ಬ ಬರಹಗಾರನಾಗಿರುವುದರಿಂದ ಕಥೆಯನ್ನು ತುಂಬಾ ಚೆನ್ನಾಗಿ ಮಾಡಿಕೊಂಡಿದ್ದಾರೆ‌. ಜನರಿಗೂ ಈ ಕಥೆ ಇಷ್ಟವಾಗುತ್ತದೆ ಎಂಬ ಭರವಸೆ ಇದೆ. ಅರಸು ಅವರು ಹೇಳಿದ ಹಾಗೆ ಈ ಚಿತ್ರದಲ್ಲಿ ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಬಹಳ ದಿನಗಳಿಂದ ಪರಿಚಯವಿರುವ ಭದ್ರಾವತಿ ರವಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ಅಮೃತ ಅಯ್ಯರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ರವಿಶಂಕರ್, ಕಾಕ್ರೋಜ್ ಸುಧೀ ಅವರೊಂದಿಗೆ ನಟಿಸುತ್ತಿರುವುದು ಖುಷಿಯಾಗಿದೆ. ಕನ್ನಡದಲ್ಲಿ ತುಂಬಾ ಒಳ್ಳೆಯ ಬರಹಗಾರರಿದ್ದಾರೆ. ಅವರೆಲ್ಲಾ ಸಿನಿಮಾ ಮಾಡಲು ಮುಂದೆ ಬರಬೇಕು. ಒಳ್ಳೆಯ ಚಿತ್ರಗಳನ್ನು ನೀಡಿದಾಗ ಖಂಡಿತ ಜನರು ಚಿತ್ರಮಂದಿರಕ್ಕೆ ಬರುತ್ತಾರೆ" ಎಂದರು ನಾಯಕ ಗಣೇಶ್.

     "ನಾನು ಕನ್ನಡದ ಹುಡುಗಿ. ಕನ್ನಡದಲ್ಲಿ ಇದು ಮೊದಲ ಚಿತ್ರ. ನಿರ್ದೇಶಕರು ಹೇಳಿದ ಕಥೆ ಹಾಗೂ ನನ್ನ ಪಾತ್ರ ಇಷ್ಟವಾಯಿತು. ಗಣೇಶ್ ಅವರೊಂದಿಗೆ ನಟಿಸುತ್ತಿರುವುದಕ್ಕೆ ಖುಷಿಯಾಗಿದೆ" ಎಂದು ನಟಿ ಅಮೃತ ಅಯ್ಯರ್ ತಿಳಿಸಿದರು.

     "ನಮ್ಮ ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ" ಎಂದರು ನಿರ್ಮಾಪಕ ಎಸ್ ಸಿ ರವಿ ಭದ್ರಾವತಿ. ಹಿರಿಯ ನಟ ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಜ್ ಸುಧೀ, ಛಾಯಾಗ್ರಾಹಕ ಸುಜ್ಞಾನ್ ಮತ್ತು ಸಂಕಲನಕಾರ ಅಕ್ಷಯ್ ಪಿ ರಾವ್, ಸಚಿನ್ ಮುಂತಾದವರು ನೂತನ ಚಿತ್ರದ ಕುರಿತು ಮಾತನಾಡಿದರು.

ಪ್ರಸ್ತುತ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯುತ್ತಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*