Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಜೀನಿಯಸ್ ಆವಾರ್ಡ್. ಪ್ರತಿಭಾ ಪುರಸ್ಕಾರ ಇಂದು

ಮುದ್ದೇಬಿಹಾಳ: ತಾಲೂಕಿನ ನಾಗರಬೆಟ್ಟ ಗುಡ್ಡದ ಹತ್ತಿರ ಇರುವ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಪಿಯು ಕಾಲೇಜು ಆವರಣದಲ್ಲಿ ಏ.4ರಂದು 3 ಕೋಟಿ ರೂ ಮೌಲ್ಯದ ಶಿಷ್ಯವೇತನ ಯೋಜನೆ ಹೊಂದಿರುವ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಆವಾರ್ಡ್ ಸ್ಪರ್ಧಾ ಪರೀಕ್ಷೆ ಹಾಗೂ ಎಂಬಿಬಿಎಸ್ ಶಿಕ್ಷಣಕ್ಕೆ ಆಯ್ಕೆಯಾದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಗಿದೆ.


ಬೆಳಿಗ್ಗೆ 10 ಘಂಟೆಯಿಂದ ನೋಂದಣಿ, ಮದ್ಯಾಹ್ನ 12 ಘಂಟೆಗೆ ಒಂದು ಘಂಟೆ ಕಾಲಾವಧಿಯ ಜೀನಿಯಸ್ ಸ್ಪರ್ಧಾ ಪರೀಕ್ಷೆ ನಡೆಯಲಿದೆ. ಈಗಾಗಲೇ ಹೆಸರು ನೋಂದಾಯಿಸಿಕೊಂಡವರು ನೇರವಾಗಿ ಪರೀಕ್ಷೆಗೆ ಹಾಜರಾಗಬಹುದು. ಹೆಸರು ನೋಂದಾಯಿಸಿಕೊಳ್ಳದಿರುವವರಿಗೆ ಸ್ಥಳದಲ್ಲೇ ಹೆಸರು ನೋಂದಾಯಿಸಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಬಹು ಆಯ್ಕೆ ಪ್ರಶ್ನೆಗಳನ್ನು ಹೊಂದಿರುವ ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದ ಪ್ರಶ್ನೆಪತ್ರಿಕೆಗಳಿದ್ದು ಎಸ್.ಎಸ್.ಎಲ್.ಸಿ, ಐ.ಸಿ.ಎಸ್.ಇ, ಸಿ.ಬಿ.ಎಸ್.ಇ ಪಠ್ಯಕ್ರಮದವರು ಪರೀಕ್ಷೆಗೆ ಹಾಜರಾಗಬಹುದಾಗಿದೆ.

ಮದ್ಯಾಹ್ನ 2-30 ಘಂಟೆಗೆ ಆಕ್ಸಫರ್ಡ ಜೀನಿಯಸ್ ಪ್ರಶಸ್ತಿ ಪ್ರದಾನ ಹಾಗೂ ಎಂಬಿಬಿಎಸ್ ಶಿಕ್ಷಣಕ್ಕೆ ಆಯ್ಕೆಯಾಗಿರುವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಗಿದೆ. ಮುದ್ನೂರು ಕಂಠಿಮಠದ ತಪೋಭಾಸ್ಕರ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ದಿವ್ಯಸಾನಿಧ್ಯ ವಹಿಸುವರು. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಉದ್ಘಾಟಿಸುವರು. ಸಂಸ್ಥೆಯ ಚೇರ್ಮನ್ ಎಂ.ಎಸ್.ಪಾಟೀಲ ಅಧ್ಯಕ್ಷತೆ ವಹಿಸುವರು. ಬಾಗಲಕೋಟ ಜಿಲ್ಲೆ ಇಳಕಲ್ಲನ ಶ್ರೀ ವಿಜಯಮಹಾಂತೇಶ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|ಎಸ್.ವಿ.ಬಿರಾದಾರ, ಬೆಂಗಳೂರಿನ ಎಂವಿಜೆ ಮೆಡಿಕಲ್ ಕಾಲೇಜಿನ ಹಿರಿಯ ಪ್ರಾಧ್ಯಾಪಕರು ಹಾಗೂ ಪ್ರೀ ಕ್ಲಿನಿಕಲ್ ವಿಭಾಗದ ಮುಖ್ಯಸ್ಥರಾದ ಡಾ|ಬಸವರಾಜ ಎಸ್.ಅಸ್ಕಿ ಮುಖ್ಯ ಅತಿಥಿಗಳಾಗ, ಬೆಂಗಳೂರಿನ ದೇವಿಕಾ ಸುಬ್ಬಾರಾವ್ ಫೌಂಡೇಶನ್ನಿನ ಅಧ್ಯಕ್ಷೆ ಪಲ್ಲವಿ ನಾಡಗೌಡ, ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಹೈದರಾಬಾದ್, ಕೋಲ್ಕತ್ತಾದ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರ ಗಿರಿಧರ್ ಪೂಜಾರ ವಿಶೇಷ ಉಪನ್ಯಾಸ ನೀಡುವರು. ಸಂಸ್ಥೆಯ ಹಿತೈಷಿಗಳಾದ, ಶಿಕ್ಷಕ ಸಂಗಮೇಶ ಹೂಗಾರ, ನಿವೃತ್ತ ಪ್ರಾಂಶುಪಾಲ ನಾಗರಾಜ ಬಿರಾಜದಾರ ಉಪಸ್ಥಿತರಿರುವರು ಎಂದು ಸಂಸ್ಥೆಯ ಆಡಳಿತಾಧಿಕಾರಿಗಳಾದ ಅಮಿತಗೌಡ ಪಾಟೀಲ, ದರ್ಶನಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ