Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫಯಾಜ್‌ಗೆ ಗಲ್ಲು ಶಿಕ್ಷೆ ಕೊಡಿ: ಶ್ರೀ ಬಸವರಾಜೇಂದ್ರ ಸ್ವಾಮೀಜಿ






ಮುಗಳಖೋಡ: 22: ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ, ಹಲ್ಲೆ, ಕೊಲೆಗಳು ಈ ದೇಶಕ್ಕೆ ಮಾರಕವಾದದ್ದು. ರಾಜ್ಯ ಹಾಗೂ ಕೇಂದ್ರ ಸರಕಾರಗಳು ಜನರ ಭಾವನೆಗಳಿಗೆ ಸ್ಪಂದಿಸಿ ಅತಿ ಶೀಘ್ರವಾಗಿ ನೇಹಾಳನ್ನು ಕೊಲೆಗೈದ  ಹಂತಕನನ್ನು ಗಲ್ಲಿಗೇರಿಸಬೇಕೆಂದು ಅಚಲೇರಿ ಜಿಡಗಾ ಮಠದ ಪೀಠಾಧಿಪತಿ ಶ್ರೀ ಬಸವರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.


ಅವರು ಪಟ್ಟಣದ  ಗಣಪತಿ ದೇವಸ್ಥಾನದ ಮುಂದೆ  ನೇಹಾ ಹಿರೇಮಠ ಹತ್ಯೆ ಖಂಡಿಸಿ ಜಂಗಮ ಸಮಾಜ ಹಾಗೂ ವಿವಿಧ ಸಂಘಟನೆಗಳಿಂದ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ ಇನ್ನು ಮುಂದೆ ದೇಶದಲ್ಲಿ ಇಂತಹ ಯಾವುದೇ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು.  ಯುವಕ, ಯುವತಿಯರು ಹಾಗೂ ಎಲ್ಲರೂ, ಸಾಮಾಜಿಕ ಮಾಧ್ಯಮಗಳ ಗೋಜಿಗೆ ಹೋಗದೆ ತಂದೆ ತಾಯಿ ನೀಡುವ ಸಂಸ್ಕಾರದ ಜೀವನ ನಿಮ್ಮದಾಗಬೇಕೆಂದರು.


ವೈ‌ ಚಂದ್ರು  ಕುಲಿಗೋಡ ಫಯಾಜನನ್ನು  ಜೈಲಿನಲ್ಲಿ ಇಡುವುದಕ್ಕಿಂತ ಸಾರ್ವಜನಿಕ ಸ್ಥಳಗಳಲ್ಲಿ ತಂದು ಸೂಟೌಟ್ ಮಾಡಬೇಕೆಂದು ತಮ್ಮ ಆಕ್ರೋಶ ಹೊರಹಾಕಿದರು. ಭೀಮಸಿ ಬನಶಂಕರಿ ಮಾತನಾಡಿ ವಿವಿಧ ಸಂಘಟನೆಗಳ ಮೂಲಕ ಪಕ್ಷಾತೀತವಾಗಿ ಹಮ್ಮಿಕೊಂಡ ಈ ಪ್ರತಿಭಟನೆ ಆರೋಪಿ ಫಯಾಜ್‌ಗೆ ತಕ್ಷಣ ಗಲ್ಲು ಶಿಕ್ಷೆ ವಿಧಿಸಿ, ಹತ್ಯೆಯಾದ ನೇಹಾಗೆ ನ್ಯಾಯ ಒದಗಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.


ನ್ಯಾಯಕ್ಕಾಗಿ ಪ್ರತಿಭಟನಾಕಾರರು ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ ಅವರ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಹಂತಕ ಫಯಾಜ್‌ಗೆ ಗಲ್ಲು ಶಿಕ್ಷೆ ನೀಡಬೇಕೆಂದು ಮನವಿ ಸಲ್ಲಿಸಿ. ಕು. ನೇಹಾ ಹಿರೇಮಠರಿಗೆ ಶ್ರದ್ಧಾಂಜಲಿ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.



"ಕು. ನೇಹಾ ಹಿರೇಮಠ ಅವರ ಹತ್ಯೆ ಖಂಡಿಸಿ ಮುಗಳಖೋಡ ಪಟ್ಟಣದ ವಿವಿಧ ಸಂಘಟನಾಕಾರರು ಸಲ್ಲಿಸಿರುವ ಈ ಮನವಿಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಡಲಾಗುವುದು"- "ರೇಣುಕಾ ದೇಸಾಯಿ" ಮುಖ್ಯಾಧಿಕಾರಿ ಪುರಸಭೆ ಮುಗಳಖೋಡ



 ಮುಪ್ಪಯ್ಯ ಹಿರೇಮಠ, ಸುರೇಶ ಹೊಸಪೇಟಿ, ರಮೇಶ ಯಡವನ್ನವರ, ಗೌಡಪ್ಪ ಖೇತಗೌಡರ, ಗೋಪಾಲ ಯಡವನ್ನವರ, ಶ್ರೀಪಾಲ ಕುರುಬಳ್ಳಿ, ರಾಜಶೇಖರ ನಾಯಕ, ಮಹಾಂತೇಶ ಯರಡತ್ತಿ, ಶಿವಾನಂದ ಮುಧೋಳ,ಲತಾ ಹುದ್ದಾರ, ನಾಗಪ್ಪ ಹುಕ್ಕೇರಿ, ಆನಂದ ಯರಡತ್ತಿ, ಸಂಗಯ್ಯ ಹಿರೇಮಠ, ಸಿದ್ದಮಲ್ಲಯ್ಯಾ ಮಠಪತಿ, ಸಿದ್ದಯ್ಯ ಕರಡಿ, ಸೋಮಯ್ಯ ಹಿರೇಮಠ, ಹನುಮಸಾಹೇಬ ನಾಯಕ, ಶ್ರೀಶೈಲ ಶೇಗುಣಸಿಮಠ, ಪರಗೌಡ ಖೇತಗೌಡರ, ಶಿವಯ್ಯ ಮಠಪತಿ, ಗಣೇಶ ಮಠಪತಿ, ಮಲ್ಲಿಕಾರ್ಜುನ ಮಠಪತಿ, ಶಿವಪ್ಪ ಹಳ್ಳುರ, ವಿಠ್ಠಲ ಯಡವನ್ನವರ, ಸಿದ್ರಾಮಯ್ಯ ಮಠಪತಿ, ರಮೇಶ ಕಲ್ಲಾರ ಸೇರಿದಂತೆ ಪಟ್ಟಣದ ವಿವಿಧ ಸಂಘಟನೆಗಳ ಮುಖಂಡರು ಸದಸ್ಯರು ಉಪಸ್ಥಿತರಿದ್ದರು.





Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ