LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಪರಿಸರ ಸ್ನೇಹಿ ಗಣೇಶ ಹಬ್ಬದ ಆಚರಣೆಗೆ ಹೆಚ್ಚು ಪ್ರಾಶಸ್ತ್ಯ ನೀಡಿ : ಸಿಪಿಐ ಶ್ರೀಶೈಲ ಬ್ಯಾಕೋಡ 


ಮೂಡಲಗಿ :  ಮಣ್ಣಿನ ಗಣಪತಿ ಕೂಡಿಸುವುದರೊಂದಿಗೆ ಪರಿಸರ ಸ್ನೇಹಿ ಗಣೇಶ ಹಬ್ಬದ ಆಚರಣೆಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಾ ಶಾಂತಿ ಹಾಗೂ ಸೌಹಾರ್ದತೆಯಿಂದ ಹಬ್ಬ ಆಚರಿಸಿ ಎಂದು ಸಿಪಿಐ ಶ್ರೀಶೈಲ ಬ್ಯಾಕೋಡ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಜರುಗಿದ ಗಣೇಶ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಗಣಪತಿ ಮಂಡಳಿಗಳು ತಾವು ಒಳಪಡುವ ಪಂಚಾಯತಿ, ಪೊಲೀಸ್ ಠಾಣೆ ಹಾಗೂ ಕೆಇಬಿಗಳಿಂದ ಕಟ್ಟುನಿಟ್ಟಾಗಿ ಅನುಮತಿಯನ್ನು ಪಡೆಯಬೇಕು, ಇದರಿಂದ ಆಚರಣೆ ಸಂದರ್ಭದಲ್ಲಿ ಏನಾದರೂ ಅಹಿತಕರ ಘಟನೆಗಳು ಜರುಗಿದಾಗ  ಮಂಡಳಿಯ ಜಗಹವನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳು ಸೂಕ್ತ ಸಹಾಯ ಮಾಡಲು ಅನುಕೂಲವಾಗುತ್ತದೆ. ಶಬ್ಧ ಹಾಗೂ ವಾಯು ಮಾಲಿನ್ಯಕ್ಕೆ ಕಾರಣಗಳಾದ ಡಿಜೆ ಮತ್ತು ಜನ ನಿಭಿಡ ಪ್ರದೇಶಗಳಲ್ಲಿ ಅತಿರೇಕದ ಪಟಾಕಿ ಸಿಡಿಸುವುದನ್ನು ನಿಬಂಧಿಸಲಾಗಿದೆ ಎಂದ ಅವರು ನಿಯಮ ಪಾಲಿಸದ ವ್ಯಕ್ತಿಗಳ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ತಹಸೀಲ್ದಾರ ಶ್ರೀಶೈಲ ಗುಡುಮೆ ಮಾತನಾಡಿ, ಭಾರತ ಹಬ್ಬಗಳ ದೇಶ. ಪ್ರತಿಯೊಂದು ಹಬ್ಬದ ಆಚರಣೆಗೂ ಹಿನ್ನಲೆ ಇರುತ್ತದೆ, ಅದನ್ನು ತಿಳಿದುಕೊಂಡು ಪರಿಸರಕ್ಕೆ ಪೂರಕವಾಗಿ ಶ್ರದ್ಧಾ ಹಾಗೂ ಭಕ್ತಿಯಿಂದ ಆಚರಣೆಯಾದರೆ ಹಬ್ಬಗಳಿಗೆ ಅರ್ಥಬರುತ್ತದೆ. ಮಣ್ಣಿನ ಗಣಪತಿಗೆ ಹೆಚ್ಚು ಪ್ರಾಶಸ್ತ್ಯ ಕೊಡುತ್ತ ಸಾರ್ವಜನಿಕರಿಗೆ ಕಿರಿಕಿರಿ ಯಾಗುವಂತ ಡಿಜೆಗಳನ್ನು ಹಚ್ಚುವ ಬದಲು, ಕರಡಿ ಮಜಲು, ಸಂಬಾಳದಂತಹ ದೇಸಿ ವಾದ್ಯ ಮೇಳಗಳೊಂದಿಗೆ, ಮದ್ಯಪಾನ ಮಾಡದೇ ಭಕ್ತಿ ಪೂರ್ವಕವಾಗಿ ಗಣಪತಿಯನ್ನು ಬರಮಾಡಿಕೊಂಡು, ವಿಸರ್ಜಿಸಿದರೆ ಆಚರಣೆಗೂ ಕಳೆ ಬರುತ್ತದೆ ಎಂದು ನೆರೆದ ಗಣಪತಿ ಮಂಡಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮೂಡಲಗಿ ಪಿಎಸ್‌ಐ ವೈ.ಎಸ್. ಬಿಸನಾಳ, ಕುಲಗೋಡ ಪಿಎಸ್‌ಐ ಆನಂದ ಬಿ, ಹೆಸ್ಕಾಂ ಅಧಿಕಾರಿ ಪಿ.ವಿ. ಚೌಹಾನ, ಸ್ಥಳೀಯ ಮುಖಂಡರು ಸೇರಿದಂತೆ ಅನೇಕ ಗಣಪತಿ ಮಂಡಳಿಗಳ ಪದಾಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪ