Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೋಲ್ಡನ್ ಸ್ಟಾರ್ ಗಣೇಶ್  ಪಿನಾಕ ಚಿತ್ರಕ್ಕೆ ಅದ್ದೂರಿ ಸೆಟ್ ನಲ್ಲಿ ಚಿತ್ರೀಕರಣ 


      ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು  ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್‍ ಅಭಿನಯದ ‘ಪಿನಾಕ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ.

     ನೆಲಮಂಗಲ ಬಳಿ ಚಿತ್ರಕ್ಕಾಗಿ ಆರು ಎಕರೆ ಪ್ರದೇಶದಲ್ಲಿ ದೊಡ್ಡ ಸೆಟ್‍ ಹಾಕಲಾಗಿದೆ. ಸೆಟ್‍ ಎಂದರೆ ಅದು 500 ವರ್ಷಗಳ ಹಿಂದಿನ ದೇವಗಿರಿ ಎಂಬ ಸಾಮ್ರಾಜ್ಯದ ಸೆಟ್‍. ಒಂದು ನಗರವನ್ನೇ ನಿರ್ಮಿಸಲಾಗಿದ್ದು, ಮಧ್ಯದಲ್ಲೊಂದು ಅರ್ಧನಾರೀಶ್ವರನ ಪ್ರತಿಮೆ ನಿಲ್ಲಿಸಲಾಗಿದೆ.

      ಇಲ್ಲಿ ಕಳೆದ 32 ದಿನಗಳಿಂದ ಚಿತ್ರೀಕರಣ ನಡೆಯುತ್ತಿದ್ದು, ಇನ್ನೂ 15 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆಯಂತೆ. ಈ ಸೆಟ್ ಚಿತ್ರದಲ್ಲಿ ಮಹತ್ವದ ಪಾತ್ರ ವಹಿಸುವುದರಿಂದ, ಚಿತ್ರತಂಡ ಈ ಸೆಟ್‍ ಹೇಗಿದೆ ಎಂದು ಗೌಪ್ಯವಾಗಿಟ್ಟಿದೆ.  ಚಿತ್ರತಂಡದವರು ಮತ್ತು ಚಿತ್ರಕ್ಕೆ ಸಂಬಂಧಪಟ್ಟವರನ್ನು ಹೊರತುಪಡಿಸಿದರೆ, ಇಲ್ಲಿ ಹೊರಗಿನವರಿಗೆ ಸುಲಭವಾಗಿ ಪ್ರವೇಶವಿಲ್ಲ. ಮಾಧ್ಯಮದವರಿಗೆ ಇಡೀ ನಗರವನ್ನು ಪರಿಚಯ ಮಾಡಿಕೊಟ್ಟ ನಂತರ ನಿರ್ದೇಶಕ ಧನಂಜಯ್‍ ಚಿತ್ರತಂಡದವರ ಜೊತೆಗೆ ಮಾತಿಗೆ ಕುಳಿತರು.

    "ಮಳೆ, ಬಿಸಿಲು, ಗಾಳಿಯ ನಡುವೆ ಕಳೆದ ಒಂದು ತಿಂಗಳಿನಿಂದ ಚಿತ್ರೀಕರಣ ಮಾಡುತ್ತಿದ್ದೇವೆ. ಅದಕ್ಕೂ ಮುನ್ನ ಎರಡು ತಿಂಗಳ ಕಾಲ ಸೆಟ್‍ ನಿರ್ಮಾಣದ ಕೆಲಸ ನಡೆದಿದೆ. ಸಂತೋಷ್‍ ಪಾಂಚಲ ಮತ್ತು ತಂಡದವರು ಈ ಸೆಟ್‍ ನಿರ್ಮಿಸಿದ್ದಾರೆ. ಯುದ್ಧ ನಡೆದ ನಂತರದ ದೃಶ್ಯಗಳನ್ನು ಇಂದು ಚಿತ್ರೀಕರಣ ಮಾಡಿದ್ದೇವೆ. ಕಳೆದ ಒಂದು ತಿಂಗಳಿನಿಂದ ಪ್ರತಿ ದಿನ 800 ಜನ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಚಿತ್ರೀಕರಣ ಮಾಡಿ, ಹೈದರಾಬಾದ್‍ಗೆ ಫುಟೇಜ್‍ ಕಳಿಸುತ್ತಿದ್ದೇವೆ. ಅಲ್ಲಿ ಗ್ರಾಫಿಕ್ಸ್ ಕೆಲಸ ಸತತವಾಗಿ ನಡೆಯುತ್ತಿದೆ’ ಎಂದು ಮಾಹಿತಿ ಕೊಟ್ಟರು.

     "ಪಿನಾಕ’ ಎಂದರೆ ಒಬ್ಬ ರಕ್ಷಕ ಎನ್ನುವ ಅವರು, ‘ಇದೊಂದು ಕಾವಲುಗಾರ ಪರಂಪರೆಯ ಕುರಿತಾದ ಚಿತ್ರ. ಮುಂದಿನ ವರ್ಷ ಈ ಚಿತ್ರವನ್ನು ತೆರೆಗೆ ಬರಲಿದೆ. ಇದು ಒತ್ತಡದಲ್ಲಿ ಮಾಡುವ ಕೆಲಸವಲ್ಲ. ಒಂದೊಂದು ಸಣ್ಣ ದೃಶ್ಯಕ್ಕೂ ಸಾಕಷ್ಟು ಸಮಯವಾಗುತ್ತಿದೆ. ಗಣೇಶ್‍ ಜೊತೆಗೆ ನೃತ್ಯ ನಿರ್ದೇಶಕನಾಗಿ ಕೆಲಸ ಮಾಡಿದ್ದೆ. ಅವರ ಜೊತೆಗೊಂದು ಒಳ್ಳೆಯ ಸಂಬಂಧ ಇದೆ. ಅವರೊಂದಿಗೆ ಕೆಲಸ ಮಾಡುವುದು ಖುಷಿಯ ವಿಚಾರ. ಈ ಚಿತ್ರಕ್ಕೆ ಅವರ ಸಹಕಾರ ದೊಡ್ಡದು. ಇನ್ನು ನಿರ್ಮಾಪಕರು ಪ್ರತಿ ಹೆಜ್ಜೆಯಲ್ಲೂ ಜೊತೆಯಾಗಿದ್ದಾರೆ, ಇದು ನನ್ನೊಬ್ಬನ ಚಿತ್ರವಲ್ಲ. ಇದೊಂದು ತಂಡದ ಚಿತ್ರ" ಎಂದರು ನಿರ್ದೇಶಕ ಧನಂಜಯ್.

        ನಿರ್ಮಾಣದ ಮೇಲ್ವಿಚಾರಣೆ ಹೊತ್ತಿರುವ ವಿಜಯಾ ಮಾತನಾಡಿ, "ಗಣೇಶ್‍ ಜೊತೆಗೆ ಚಿತ್ರ ಮಾಡಬೇಕು ಎಂಬುದು ನನ್ನ ಸಹೋದರನ (ವಿಶ್ವಪ್ರಸಾದ್‍) ಆಸೆಯಾಗಿತ್ತು. ಅವರ ಜೊತೆಗೆ ಚಿತ್ರ ಮಾಡಬೇಕು ಎಂದು ನಿರ್ಧಾರವಾದಾಗ, ಕಥೆ ಸಹ ಇರಲಿಲ್ಲ. ಗಣೇಶ್‍ ಅವರಿಗೆ ಎಂಥಾ ಚಿತ್ರ ಮಾಡಬೇಕು ಎಂದು ಯೋಚಿಸಿ, ಒಂದು ವಿಭಿನ್ನ ಪ್ರಯತ್ನ ಮಾಡುತ್ತಿದ್ದೇವೆ’ ಎಂದರು.ತಮ್ಮ ನಿರ್ಮಾಣ ಸಂಸ್ಥೆಯು ಫ್ಯಾಕ್ಟರಿ ಮಾದರಿಯಲ್ಲಿ ಕೆಲಸ ಮಾಡುತ್ತಿದೆ ಎನ್ನುವ ಅವರು "ಕಳೆದ ಏಳು ವರ್ಷಗಳಲ್ಲಿ ನಮ್ಮ ಸಂಸ್ಥೆಯಿಂದ 50 ಚಿತ್ರಗಳು ತಯಾರಾಗಿವೆ. ಈ ಪೈಕಿ 43 ಬಿಡುಗಡೆಯಾದರೆ, ಏಳು ಚಿತ್ರಗಳು ಬಿಡುಗಡೆ ಆಗುವುದಕ್ಕೆ ತಯಾರಿ ನಡೆಸಿವೆ. 20 ಚಿತ್ರಗಳು ಬೇರೆಬೇರೆ ಹಂತಗಳಲ್ಲಿದೆ" ಎಂದರು.

      ಈ ಚಿತ್ರದಲ್ಲಿನ ರಾಜಗುರುವಿನ ಪಾತ್ರಕ್ಕೆ ಶ್ರೀನಿವಾಸಮೂರ್ತಿ ಅವರೇ ಬೇಕು ಎಂದು ಗಣೇಶ್‍ ಪಟ್ಟುಹಿಡಿದರಂತೆ. ಈ ಕುರಿತು ಮಾತನಾಡಿದ ಹಿರಿಯ ನಟ ಶ್ರೀನಿವಾಸಮೂರ್ತಿ ಅವರು, ‘’ಕೃಷ್ಣಂ ಪ್ರಣಯ ಸಖಿ’ ಚಿತ್ರದ ನಂತರ ಗಣೇಶ್‍ ಜೊತೆಗೆ ಬಾಂಧವ್ಯ ಗಟ್ಟಿಯಾಗಿದೆ. ಈ ಚಿತ್ರವನ್ನು ನೀವೇ ಮಾಡಬೇಕು ಎಂದು ಅವರು ಹೇಳಿದರು.ಈ ಚಿತ್ರವು ಬೇರೆಯದೇ ಲೆವೆಲ್‍ನಲ್ಲಿದೆ’ ಎಂದರು.

     "ಬರುವಾಗಲೇ ಏನಾದರೂ ವಿಭಿನ್ನವಾಗಿ ಮಾಡಬೇಕು ಎಂಬ ತೀರ್ಮಾನದೊಂದಿಗೆ ನಿರ್ಮಾಪಕರು ಬಂದರು" ಎಂದ ನಾಯಕ ಗಣೇಶ್, ‘ಈ ತರಹದ ಪಾತ್ರವನ್ನು ನನ್ನಿಂದ ಮಾಡಿಸಬಹುದು ಎಂದು ಮಾಡಿಸುತ್ತಿದ್ದಾರೆ. ಪ್ರತಿ ದೃಶ್ಯದಲ್ಲೂ ನಿರ್ಮಾಪಕರು ತೊಡಗಿಸಿಕೊಂಡಿದ್ದಾರೆ. ಚಿತ್ರೀಕರಣ ಪ್ರಾರಂಭವಾಗಿ ಎರಡು ದಿನಗಳಲ್ಲೇ ನಿರ್ಮಾಪಕಿ ವಿಜಯಮ್ಮ ಕಿರುಚಾಡುತ್ತಿದ್ದರು. ಏನು ಎಂದು ಕೇಳಿದಾಗ, ಬರೀ 600 ಜ್ಯೂನಿಯರ್ ಕಲಾವಿದರು ಮಾತ್ರ ಬಂದಿದ್ದಾರೆ, 800 ಜನ ಬರಬೇಕಿತ್ತು ಎಂದರು. ಕಡಿಮೆಯಾದರೆ ಹಣ ಉಳಿಯುತ್ತದೆ ಎಂದು ಖುಷಿಪಡಬೇಕು. ಆದರೆ, ಅವರು ಹಾಗಲ್ಲ. ಈ ಸೆಟ್‍ ಈ ಮಟ್ಟಕ್ಕೆ ಬರಬೇಕೆಂದರೆ ಅವರು ಮತ್ತು ನಿರ್ದೇಶಕ ಧನಂಜಯ್‍ ಕಾರಣ. ನಾಲ್ಕೈದು ತಿಂಗಳು ನಿಂತು ಸೆಟ್‍ ಹಾಕಿಸಿದ್ದಾರೆ. ಧನು ಮೊದಲ ಚಿತ್ರದಲ್ಲೇ ಇಂಥದ್ದೊಂದು ದೊಡ್ಡ ಪ್ರಯತ್ನ ಮಾಡುತ್ತಿದ್ದಾರೆ. ಅವರು ಹೇಗೆ ಮಾಡಬಹುದು ಎಂಬ ಪ್ರಶ್ನೆ ನನಗೂ ಇತ್ತು. ಆದರೆ, ಇಲ್ಲಿ ನೂರಕ್ಕೆ ನೂರು ತೆಗೆದಿದ್ದಾನೆ. ಪ್ರತಿ ದಿನ ಸೆಟ್‍ನಲ್ಲಿ ನಾಲ್ಕು ಕ್ಯಾಮೆರಾಳಿವೆ. 32 ದಿನಗಳಲ್ಲಿ 64 ದಿನಗಳ ಕೆಲಸವಾಗಿದೆ" ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

     ತಮ್ಮ ಪಾತ್ರದ ಬಗ್ಗೆ ಮಾತನಾಡಿದ  ಅವರು "ಬಹಳ ಖುಷಿಕೊಟ್ಟ ಪಾತ್ರವಿದು. ನನಗೆ ಖುಷಿಕೊಟ್ಟರೆ ಪ್ರೇಕ್ಷಕರಿಗೂ ಖುಷಿಯಾಗುತ್ತದೆ ಎಂದು ನಂಬಿದವನು ನಾನು. ಇದು ಬೇರೆ ತರಹದ ಸಿನಿಮಾ. ನನ್ನ ಚಿತ್ರಜೀವನದಲ್ಲಿ ವಿಭಿನ್ನವಾದ ಸಿನಿಮಾ ಎಂದು ಹೇಳಿದರು ಗಣೇಶ್.

ಈ ಸಂದರ್ಭದಲ್ಲಿ ಹಿರಿಯ ನಟ

ಹೊನ್ನವಳ್ಳಿ ಕೃಷ್ಣ, ರವೀಂದ್ರನಾಥ್‍, ಛಾಯಾಗ್ರಾಹಕ ಕರಮ್‍ ಚಾವ್ಲಾ ಮುಂತಾದವರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ