LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಉಪ ಲೋಕಾಯುಕ್ತರಲ್ಲಿ ಗೋಲ್‌ಮಾಲ್‌: ಆರೋಪಿ ಅರೆಸ್ಟ್‌

ಬೆಂಗಳೂರು: ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಹೆಸರನ್ನು ದುರ್ಬಳಕೆ ಮಾಡಿ, ವಂಚಿಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಆನೇಕಲ್ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಮೂಲದ ಆನಂದ್ ಕುಮಾರ್ ಬಂಧಿತ ಆರೋಪಿ. ಲೋಕಾಯುಕ್ತ ಇಲಾಖೆಯ ಉಪನಿಬಂಧಕ ಅರವಿಂದ್ ಎನ್.ವಿ. ನೀಡಿದ ದೂರಿನ ಮೇರೆಗೆ ಆನೇಕಲ್ ಇನ್ ಸ್ಪೆಕ್ಟರ್ ಬಿ.ಎಂ. ತಿಪ್ಪೇಸ್ವಾಮಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ.

ಆನೇಕಲ್ ವಿಶೇಷ ತಹಶೀಲ್ದಾರ್ ಕರಿಯಾ ನಾಯಕ್ ಕಚೇರಿಗೆ ಆಗಮಿಸಿದ್ದ ಆರೋಪಿ ಆನಂದ್, ತಾನು ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪರ ಸಂಬಂಧಿಕ ಹಾಗೂ ತಾನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಉದ್ಯೋಗಿ ಎಂದು ಹೇಳಿದ್ದಾರೆ.

ಬಳಿಕ ಸರ್ಜಾಪುರ ಹೋಬಳಿ ಚಿಕ್ಕನಹಳ್ಳಿ ಸನಂ 18/ಪಿ16 ಹೊಸ ನಂಬರ್ 191 ರ ಒಂದು ಎಕರೆ ಜಮೀನನ್ನು ಎಸ್.ಎನ್.ರಾಮಸ್ವಾಮಿ ಅಡಿಗ ಎಂಬವರಿಂದ ನಾರಾಯಣ ಅಡಿಗ ಎಂಬವರ ಹೆಸರಿಗೆ ಖಾತೆ ಬದಲಾಯಿಸುವಂತೆ ಒತ್ತಡ ಹೇರಿದ್ದಾನೆ.

ಇದಷ್ಟೇ ಅಲ್ಲದೆ, ತನ್ನ ಮೊಬೈಲ್ ನಿಂದ ಯಾರಿಗೋ ಕಾಲ್ ಮಾಡಿ ಉಪ ಲೋಕಾಯುಕ್ತರು ಮಾತನಾಡುತ್ತಿದ್ದಾರೆಂದು, ಮತ್ತೊಂದು ಬಾರಿ ಲೋಕಾಯುಕ್ತ ಐ.ಜಿ. ಮಾಡನಾಡುತ್ತಿರುತ್ತಾರೆಂದು, ಮತ್ತೊಂದು ಬಾರಿ ಲೋಕಾಯುಕ್ತ ಎಸ್ಪಿ ಮಾತನಾಡುತ್ತಿದ್ದಾರೆ ಹೇಳಿ ತಹಶೀಲ್ದಾರ್ ರಿಗೆ ಮೊಬೈಲ್ ಕೊಟ್ಟು ಮಾತನಾಡಿಸಿದ್ದಾನೆ. ಆ ಕಡೆಯಿಂದ ಮಾತನಾಡಿದ ವ್ಯಕ್ತಿಗಳು ತಾವು ಲೋಕಾಯುಕ್ತ ನ್ಯಾಯಮೂರ್ತಿ, ಲೋಕಾಯುಕ್ತ ಐ.ಜಿ. ಮತ್ತು ಲೋಕಾಯುಕ್ತ ಎಸ್ಪಿ ಎಂದು ಹೇಳಿ ಮಾತನಾಡಿದ್ದಲ್ಲದೆ, ನಿಮ್ಮ ಬಳಿ ಬಂದಿರುವ ಆನಂದ್ ಕುಮಾರ್ ನಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾನೆ, ಆತನ ಕೆಲಸವನ್ನು ಯಾವುದೇ ತಡ ಮಾಡದೆ ಬೇಗ ಮಾಡಿಕೊಡಿಎಂದು ಒತ್ತಡ ಹೇರಿದ್ದಾರೆ. ಈ ಬಗ್ಗೆ ಸಂಶಯಗೊಂಡ ವಿಶೇಷ ತಹಶೀಲ್ದಾರ್ ಕರಿಯಾ ನಾಯಕ್ ಅವರು ಲೋಕಾಯುಕ್ತಕ್ಕೆ ಮಾಹಿತಿ ನೀಡಿದ್ದಾರೆ.

ಪರಿಶೀಲನೆ ಬಳಿಕ ಆನಂತ್ ಲೋಕಾಯುಕ್ತದಲ್ಲಿ ಕೆಲಸ ಮಾಡುತ್ತಿಲ್ಲ ಎಂಬುದು ಖಚಿತವಾಗಿದೆ. ಅಲ್ಲದೆ, ಆರೋಪಿ ತನ್ನ ಬಳಿ ಮೂರು ಮೊಬೈಲ್ ನಂಬರ್ ಇಟ್ಟುಕೊಂಡಿದ್ದು, ಅವುಗಳಿಂದ ಕರೆ ಮಾಡಿದರೆ, ಟ್ರೂ ಕಾಲರ್ ನಲ್ಲಿ ಕರ್ನಾಟಕ ಲೋಕಾಯುಕ್ತ ಕಚೇರಿ, ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಹೆಸರು ಬರುವಂತೆ ಮಾಡಿಟ್ಟುಕೊಂಡಿರುವುದು ಪತ್ತೆಯಾಗಿದೆ. ಬಳಿಕ ನಾಯಕ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್