ತಾಳಿಕೋಟೆ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪತಿನ ಸಹಕಾರಿ ಸಂಘ ನಿಯಮಿತಕ್ಕೆ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದ ವತಿಯಿಂದ ೨೦೨೪ ೨೫ನೇ ಸಾಲಿನ ಉತ್ತಮ ಕಾರ್ಯ ನಿರ್ವಹಣೆಗಾಗಿ ವಿಜಯಪುರ್ ಜಿಲ್ಲೆಯ ಪತ್ತಿನ ಸಹಕಾರಿ ಸಂಘಗಳ ವಿಭಾಗದಲ್ಲಿ ಮೊದಲನೇ ಸ್ಥಾನವನ್ನು ಪಡೆದಿದೆ.
ಈ ಕುರಿತು ವಿಜಯಪುರ ಜಿಲ್ಲಾ ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕ್ ಅಧ್ಯಕ್ಷರಾದ ಮಾಜಿ ಸಚಿವ ಶಿವಾನಂದ ಪಾಟೀಲ್ ಅವರು ಹೇಮರೆಡ್ಡಿ ಮಲ್ಲಮ್ಮ ಸರ್ಕಾರಿ ಸಂಘದ ಅಧ್ಯಕ್ಷರಾದ ಬಿಎನ್ ಹಿಪ್ಪರಗಿಯವರಿಗೆ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಿದ್ದಾರೆ. ಈ ಸಮಯದಲ್ಲಿ ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್ಎಡವಳಗಿ ನಿರ್ದೇಶಕರಾದ ಬಿಎಸ್ ಪಾಟೀಲ್ ಯಾಳಗಿ ಕೆ ಬಿ ಪಾಟೀಲ ಉಪನಿಬಂಧಕರಾದ ಶ್ರೀಮತಿ ಎಸ್ ಕೆ ಭಾಗ್ಯಶ್ರೀ ಹಾಗೂ ತಾಳಿಕೋಟಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಸಿಎನ್ ಮಾಲಿ ಪಾಟೀಲ್ ಉಪಾಧ್ಯಕ್ಷರಾದ ರವಿ ಗೌಡ ಪಾಟೀಲ್ ನಿರ್ದೇಶಕರಾದ ಪ್ರಭುಗೌಡ ಮದರ್ಕಲ್ ಸಿ ಎಸ್ ಮಾಳಿ ಮೊದಲಾದವರು ಉಪಸ್ಥಿತರಿದ್ದರು. ಸದರಿ ಸಂಘಕ್ಕೆ ಸತತವಾಗಿ ದೊರೆತ ಆರನೇ ಪ್ರಶಸ್ತಿ ಇದಾಗಿದೆ ಎಂದು ಸಂಘದ ಅಧ್ಯಕ್ಷರಾದ ಬಿಎನ್ ಹಿಪ್ಪರಗಿ ಅವರು ತಿಳಿಸಿದ್ದಾರೆ